AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ 19ನೇ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತೇನು?

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ತೆರೆಕಂಡ ನಂತರದಲ್ಲಿ ​ ನಿರ್ದೇಶಕ ನರ್ತನ್ ​ಜತೆ ಯಶ್ ಕೈ ಜೋಡಿಸಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕೂಡ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ.

ಯಶ್​ 19ನೇ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತೇನು?
ನರ್ತನ್​-ಯಶ್​
TV9 Web
| Edited By: |

Updated on: Oct 20, 2021 | 3:02 PM

Share

‘ಕೆಜಿಎಫ್​ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಹೈಪ್​ ಸೃಷ್ಟಿಸಿಕೊಂಡಿದೆ. ಈ ಸಿನಿಮಾದ ಮೊದಲ ಚಾಪ್ಟರ್​ ತೆರೆಕಂಡ ನಂತರ ಯಶ್​ ಸಿನಿಮಾಗೆ ದೊಡ್ಡ ಮೈಲೇಜ್​ ಸಿಕ್ಕಿದೆ. ಅವರ ಜತೆ ಸಿನಿಮಾ ಮಾಡಬೇಕು ಎಂದು ಸ್ಟಾರ್​ ಡೈರೆಕ್ಟರ್​ಗಳು ಕಾದು ಕೂತಿದ್ದಾರೆ. ಯಶ್​ 19ನೇ ಸಿನಿಮಾ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಶೀಘ್ರವೆ ಘೋಷಣೆ ಆಗಲಿದೆ ಎನ್ನಲಾಗುತ್ತಿತ್ತು. ಹೀಗಿರುವಾಗಲೇ ಫೇಕ್​ ಟ್ವೀಟ್ ಒಂದು ಹರಿದಾಡುತ್ತಿದೆ.

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ತೆರೆಕಂಡ ನಂತರದಲ್ಲಿ ​ ನಿರ್ದೇಶಕ ನರ್ತನ್ ​ಜತೆ ಯಶ್ ಕೈ ಜೋಡಿಸಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕೂಡ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ. ಮೂಲಗಳ ಪ್ರಕಾರ ನರ್ತನ್​ ಸಿನಿಮಾದಲ್ಲಿ ಯಶ್​ ನೇವಿ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಚರ್ಚೆಯಲ್ಲಿದೆ. ಶಿವರಾಜ್​ಕುಮಾರ್​ ಹಾಗೂ ಶ್ರೀಮುರಳಿ ಕಾಂಬಿನೇಷನ್​ನಲ್ಲಿ ತೆರೆಗೆ ತಂದ ‘ಮಫ್ತಿ’ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದು ನರ್ತನ್​. ಹೀಗಾಗಿ, ಅವರ​ ಬಗ್ಗೆ ನಿರೀಕ್ಷೆ ಇದೆ.

ಈಗ ನರ್ತನ್​ ಹೆಸರಿನಲ್ಲಿ ಫೇಕ್​ ಟ್ವಿಟರ್​ ಖಾತೆ ಮಾಡಿರುವ ವ್ಯಕ್ತಿಯೊಬ್ಬರು ಟ್ವೀಟ್​ ಒಂದನ್ನು ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ‘ಯಶ್​ 19ನೇ ಸಿನಿಮಾ ಬಗ್ಗೆ ನವೆಂಬರ್​ 4ರಂದು ಘೋಷಣೆ ಮಾಡುತ್ತೇವೆ. ಹೊಂಬಾಳೆ ಫಿಲ್ಮ್ಸ್​ ಇದಕ್ಕೆ ಬಂಡವಾಳ ಹೂಡುತ್ತಿದೆ’ ಎಂದು ಬರೆದುಕೊಳ್ಳಲಾಗಿದೆ. ಈ ಸುದ್ದಿಯನ್ನು ಅನೇಕರು ನಂಬಿದ್ದಾರೆ.

ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂಬುದಕ್ಕೆ ಇತ್ತೀಚೆಗೆ ಉತ್ತರ ಸಿಕ್ಕಿತ್ತು. 2022ರ ಏಪ್ರಿಲ್​ 14ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟು ಹೊತ್ತಿಗಾಗಲೇ ‘ಕೆಜಿಎಫ್​ 2’ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದ ಪರಿಣಾಮ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲಾಗಿತ್ತು. ಈ ಚಿತ್ರದ ಕೊನೆಯ ಹಂತದ ಕೆಲಸದಲ್ಲಿ ಪ್ರಶಾಂತ್​ ನೀಲ್​ ಬ್ಯುಸಿಯಾಗಿದ್ದಾರೆ.

‘ಕೆಜಿಎಫ್​ 2’ ಚಿತ್ರದ ನಿರ್ದೇಶಕ ಪ್ರಶಾಂತ್​ ನೀಲ್​ ಈಗಾಗಲೆ ಸಲಾರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್​ ನಟನೆಯ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಹೀಗಿರುವಾಗಲೇ ಯಶ್​ ಹೊಸ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ.

ಇದನ್ನೂ ಓದಿ: ಸಿಂಹದ ಪಕ್ಕ ನಿಂತು ಮಾಂಸ ತಿನ್ನಿಸಿದ ಯಶ್​; ರಾಕಿ ಭಾಯ್ ಡೇರಿಂಗ್​ ನೋಡಿ ಫಿದಾ ಆದ ಅಭಿಮಾನಿಗಳು

ಯಶ್​, ಪ್ರಭಾಸ್​, ಸಮಂತಾರನ್ನೂ ಹಿಂದಿಕ್ಕಿ ರಶ್ಮಿಕಾ ನಂ.1, ದೇವರಕೊಂಡ ನಂ.2: ಇಲ್ಲಿದೆ ಫೋರ್ಬ್ಸ್​ ಪಟ್ಟಿ

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್