AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ 19ನೇ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತೇನು?

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ತೆರೆಕಂಡ ನಂತರದಲ್ಲಿ ​ ನಿರ್ದೇಶಕ ನರ್ತನ್ ​ಜತೆ ಯಶ್ ಕೈ ಜೋಡಿಸಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕೂಡ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ.

ಯಶ್​ 19ನೇ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತೇನು?
ನರ್ತನ್​-ಯಶ್​
TV9 Web
| Edited By: |

Updated on: Oct 20, 2021 | 3:02 PM

Share

‘ಕೆಜಿಎಫ್​ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಹೈಪ್​ ಸೃಷ್ಟಿಸಿಕೊಂಡಿದೆ. ಈ ಸಿನಿಮಾದ ಮೊದಲ ಚಾಪ್ಟರ್​ ತೆರೆಕಂಡ ನಂತರ ಯಶ್​ ಸಿನಿಮಾಗೆ ದೊಡ್ಡ ಮೈಲೇಜ್​ ಸಿಕ್ಕಿದೆ. ಅವರ ಜತೆ ಸಿನಿಮಾ ಮಾಡಬೇಕು ಎಂದು ಸ್ಟಾರ್​ ಡೈರೆಕ್ಟರ್​ಗಳು ಕಾದು ಕೂತಿದ್ದಾರೆ. ಯಶ್​ 19ನೇ ಸಿನಿಮಾ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಶೀಘ್ರವೆ ಘೋಷಣೆ ಆಗಲಿದೆ ಎನ್ನಲಾಗುತ್ತಿತ್ತು. ಹೀಗಿರುವಾಗಲೇ ಫೇಕ್​ ಟ್ವೀಟ್ ಒಂದು ಹರಿದಾಡುತ್ತಿದೆ.

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ತೆರೆಕಂಡ ನಂತರದಲ್ಲಿ ​ ನಿರ್ದೇಶಕ ನರ್ತನ್ ​ಜತೆ ಯಶ್ ಕೈ ಜೋಡಿಸಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕೂಡ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ. ಮೂಲಗಳ ಪ್ರಕಾರ ನರ್ತನ್​ ಸಿನಿಮಾದಲ್ಲಿ ಯಶ್​ ನೇವಿ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಚರ್ಚೆಯಲ್ಲಿದೆ. ಶಿವರಾಜ್​ಕುಮಾರ್​ ಹಾಗೂ ಶ್ರೀಮುರಳಿ ಕಾಂಬಿನೇಷನ್​ನಲ್ಲಿ ತೆರೆಗೆ ತಂದ ‘ಮಫ್ತಿ’ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದು ನರ್ತನ್​. ಹೀಗಾಗಿ, ಅವರ​ ಬಗ್ಗೆ ನಿರೀಕ್ಷೆ ಇದೆ.

ಈಗ ನರ್ತನ್​ ಹೆಸರಿನಲ್ಲಿ ಫೇಕ್​ ಟ್ವಿಟರ್​ ಖಾತೆ ಮಾಡಿರುವ ವ್ಯಕ್ತಿಯೊಬ್ಬರು ಟ್ವೀಟ್​ ಒಂದನ್ನು ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ‘ಯಶ್​ 19ನೇ ಸಿನಿಮಾ ಬಗ್ಗೆ ನವೆಂಬರ್​ 4ರಂದು ಘೋಷಣೆ ಮಾಡುತ್ತೇವೆ. ಹೊಂಬಾಳೆ ಫಿಲ್ಮ್ಸ್​ ಇದಕ್ಕೆ ಬಂಡವಾಳ ಹೂಡುತ್ತಿದೆ’ ಎಂದು ಬರೆದುಕೊಳ್ಳಲಾಗಿದೆ. ಈ ಸುದ್ದಿಯನ್ನು ಅನೇಕರು ನಂಬಿದ್ದಾರೆ.

ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂಬುದಕ್ಕೆ ಇತ್ತೀಚೆಗೆ ಉತ್ತರ ಸಿಕ್ಕಿತ್ತು. 2022ರ ಏಪ್ರಿಲ್​ 14ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟು ಹೊತ್ತಿಗಾಗಲೇ ‘ಕೆಜಿಎಫ್​ 2’ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದ ಪರಿಣಾಮ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲಾಗಿತ್ತು. ಈ ಚಿತ್ರದ ಕೊನೆಯ ಹಂತದ ಕೆಲಸದಲ್ಲಿ ಪ್ರಶಾಂತ್​ ನೀಲ್​ ಬ್ಯುಸಿಯಾಗಿದ್ದಾರೆ.

‘ಕೆಜಿಎಫ್​ 2’ ಚಿತ್ರದ ನಿರ್ದೇಶಕ ಪ್ರಶಾಂತ್​ ನೀಲ್​ ಈಗಾಗಲೆ ಸಲಾರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್​ ನಟನೆಯ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಹೀಗಿರುವಾಗಲೇ ಯಶ್​ ಹೊಸ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ.

ಇದನ್ನೂ ಓದಿ: ಸಿಂಹದ ಪಕ್ಕ ನಿಂತು ಮಾಂಸ ತಿನ್ನಿಸಿದ ಯಶ್​; ರಾಕಿ ಭಾಯ್ ಡೇರಿಂಗ್​ ನೋಡಿ ಫಿದಾ ಆದ ಅಭಿಮಾನಿಗಳು

ಯಶ್​, ಪ್ರಭಾಸ್​, ಸಮಂತಾರನ್ನೂ ಹಿಂದಿಕ್ಕಿ ರಶ್ಮಿಕಾ ನಂ.1, ದೇವರಕೊಂಡ ನಂ.2: ಇಲ್ಲಿದೆ ಫೋರ್ಬ್ಸ್​ ಪಟ್ಟಿ

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?