AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಯಶ್ 19’ ಚಿತ್ರದ ಬಗ್ಗೆ ಟಿವಿ9ಗೆ ಮಾಹಿತಿ ನೀಡಿದ ನರ್ತನ್​; ನಿರ್ದೇಶಕ ಹೇಳಿದ್ದೇನು?

ಯಶ್ ಮುಂದಿನ ಸಿನಿಮಾ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಬಗ್ಗೆ ನರ್ತನ್ ಅವರು ಟಿವಿ9 ಕನ್ನಡದ ಜತೆಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.

’ಯಶ್ 19’ ಚಿತ್ರದ ಬಗ್ಗೆ ಟಿವಿ9ಗೆ ಮಾಹಿತಿ ನೀಡಿದ ನರ್ತನ್​; ನಿರ್ದೇಶಕ ಹೇಳಿದ್ದೇನು?
ಯಶ್-ನರ್ತನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 14, 2022 | 5:28 PM

Share

ಯಶ್ (Yash) ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಯಶ್ 19ನೇ ಚಿತ್ರಕ್ಕೆ ನರ್ತನ್ ಅವರು ಆ್ಯಕ್ಷನ್ ಕಟ್ ಹೇಳುತ್ತಾರೆ ಎಂಬುದು ಈ ಮೊದಲಿನಿಂದಲೂ ಚರ್ಚೆ ಆಗುತ್ತಿರುವ ವಿಚಾರ. ‘ಕೆಜಿಎಫ್ 2’ (KGF: Chapter 2) ತೆರೆಕಂಡು ಮೂರು ತಿಂಗಳು ಪೂರ್ಣಗೊಂಡಿದೆ. ಆದರೂ, ಅವರ ಹೊಸ ಚಿತ್ರದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈಗ ನರ್ತನ್ ಅವರು ಈ ವಿಚಾರದ ಕುರಿತು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಅವರು ಯಶ್ ಮುಂದಿನ ಪ್ರಾಜೆಕ್ಟ್ ಬಗ್ಗೆ ಮಾಹಿತಿ ನೀಡಿದ್ದಾರೆ.

‘ಕೆಜಿಎಫ್ 2’ ಚಿತ್ರದಿಂದ ಯಶ್ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಪಡೆದುಕೊಂಡಿದ್ದಾರೆ. ಅವರಿಗೆ ಪರ ಭಾಷೆಗಳಿಂದಲೂ ಆಫರ್​ಗಳು ಬರುತ್ತಿದೆ ಎನ್ನಲಾಗುತ್ತಿದೆ. ಅವರು ಏಕಕಾಲಕ್ಕೆ ಹಲವು ಸಿನಿಮಾಗಳನ್ನು ಘೋಷಣೆ ಮಾಡಲಿದ್ದಾರೆ ಎನ್ನುವ ಸುದ್ದಿಯೂ ಇತ್ತೀಚೆಗೆ ಹರಿದಾಡಿತ್ತು. ಆದರೆ, ಈ ವಿಚಾರವನ್ನು ಯಾರೊಬ್ಬರೂ ಅಧಿಕೃತ ಮಾಡಿಲ್ಲ. ನರ್ತನ್ ಜತೆಗಿನ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲ ಇದೆ. ಈ ವಿಚಾರವಾಗಿ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಬಗ್ಗೆ ನರ್ತನ್ ಅವರು ಟಿವಿ9 ಕನ್ನಡದ ಜತೆಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.

‘ಯಶ್ 19 ಚಿತ್ರದ ಕೆಲಸ ಕೊಂಚ ವಿಳಂಬ ಆಗುತ್ತಿದೆ. ಇನ್ನೊಂದು ವಾರದಲ್ಲಿ ಎಲ್ಲವೂ ಫೈನಲ್ ಆಗಲಿದೆ’ ಎಂದು ನರ್ತನ್​ ಹೇಳಿದ್ದಾರೆ. ಯಶ್ ಅವರು ‘ಕೆಜಿಎಫ್ 3’ ಬಗ್ಗೆ ಹೆಚ್ಚು ಒಲವು ತೋರುತ್ತಿದ್ದಾರೆ ಎಂಬ ವದಂತಿಯೂ ಇದೆ. ಈ ಬಗ್ಗೆಯೂ ನರ್ತನ್ ಪ್ರತಿಕ್ರಿಯೆ ನೀಡಿದ್ದಾರೆ. ‘ಸಿನಿಮಾ ರಂಗ ಎಂದಮೇಲೆ ವದಂತಿಗಳು ಸಾಮಾನ್ಯ. ಇಲ್ಲಿ ಏನುಬೇಕಾದರೂ ಆಗಬಹುದು’ ಎಂದಷ್ಟೇ ಹೇಳಿದ್ದಾರೆ ನರ್ತನ್.

ಇದನ್ನೂ ಓದಿ: ಪ್ರಶಾಂತ್ ನೀಲ್ ಹೊಸ ಸಿನಿಮಾದಲ್ಲಿ ನಟಿಸ್ತಾರಾ ಯಶ್?​; ಹರಿದಾಡುತ್ತಿದೆ ಹೊಸ ಸುದ್ದಿ

ಶಿವರಾಜ್​ಕುಮಾರ್ ಹಾಗೂ ಶ್ರೀಮುರಳಿ ನಟನೆಯ ‘ಮಫ್ತಿ’ ಸಿನಿಮಾ ನಿರ್ದೇಶನ ಮಾಡುವ ಮೂಲಕ ನರ್ತನ್ ಅವರು ಸಾಕಷ್ಟು ಗಮನ ಸೆಳೆದರು. ಅವರಿಗೆ ಈ ಚಿತ್ರ ಸಾಕಷ್ಟು ಖ್ಯಾತಿ ನೀಡಿತು. ಈಗ ಅವರು ನಿರ್ದೇಶನ ಮಾಡಲಿರುವ ಮುಂದಿನ ಚಿತ್ರ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಕಾಡುತ್ತಿದೆ. ಯಶ್ 19ನೇ ಚಿತ್ರಕ್ಕೆ ನರ್ತನ್​ ಅವರೇ ಡೈರೆಕ್ಷನ್ ಮಾಡುತ್ತಾರಾ ಅಥವಾ ಬೇರೆ ಚಿತ್ರವನ್ನು ಅವರು ಘೋಷಣೆ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇನ್ನು ಕೆಲವೇ ದಿನಗಳಲ್ಲಿ ಇದಕ್ಕೆ ಉತ್ತರ ಸಿಗಲಿದೆ.

Published On - 5:27 pm, Thu, 14 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ