AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ನೀಲ್ ಸಂಭಾವನೆ ಎಷ್ಟು? ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಸ್ಟಾರ್ ಡೈರೆಕ್ಟರ್

Prashanth Neel Remuneration: ಕೆ.ಜಿ.ಎಫ್. ಚಾಪ್ಟರ್ 2 ಇನ್ನೇನು ತೆರೆಕಾಣಲು ಬಹುಪಾಲು ತಯಾರಾಗಿದೆ. ಯಶ್, ಶ್ರೀನಿಧಿ ಶೆಟ್ಟಿ, ರವೀನಾ, ಸಂಜಯ್ ದತ್, ಪ್ರಕಾಶ್ ರಾಜ್ ಸಹಿತ ಹಲವು ಸ್ಟಾರ್​ಗಳು ಸಿನಿಮಾದ ಭಾಗವಾಗಿದ್ದಾರೆ.

ಪ್ರಶಾಂತ್ ನೀಲ್ ಸಂಭಾವನೆ ಎಷ್ಟು? ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಸ್ಟಾರ್ ಡೈರೆಕ್ಟರ್
ಪ್ರಶಾಂತ್​​ ನೀಲ್​
TV9 Web
| Edited By: |

Updated on:Jun 09, 2021 | 9:19 AM

Share

ಸೌತ್ ಇಂಡಿಯನ್ ಸಿನಿಮಾದ ಟಾಪ್ ನಿರ್ದೇಶಕರು ಯಾರ್ಯಾರು ಎಂಬ ಪ್ರಶ್ನೆ ಬಂದರೆ ಮೊದಲ ಸಾಲಿನಲ್ಲಿ ಬರುವ ಹೆಸರುಗಳು ಎಸ್.ಎಸ್. ರಾಜಮೌಳಿ, ಶಂಕರ್ ಹಾಗೂ ನಮ್ಮ ಕನ್ನಡದ ಪ್ರಶಾಂತ್ ನೀಲ್. ರಾಜಮೌಳಿ ಬಾಹುಬಲಿ ಸಿನಿಮಾ ಮೂಲಕ ಭಾರತದಲ್ಲಿ ಮತ್ರವಲ್ಲ, ವಿದೇಶದಲ್ಲೂ ಖ್ಯಾತರಾಗಿದ್ದಾರೆ. ಆಧುನಿಕ ತಂತ್ರಜ್ಞಾನವನ್ನು ಪಳಗಿಸುವ ಮತ್ತು ಕಥೆಯಲ್ಲೂ ಅದನ್ನು ಅಳವಡಿಸಿ ಮಿಂಚಿದ ಶಂಕರ್ ಎಂದರೆ ಎಲ್ಲರಿಗೂ ಗೌರವವಿದೆ. ಈಗ ಪ್ರಶಾಂತ್ ನೀಲ್ ಕೂಡ ಆ ಸಾಲಿಗೆ ಸೇರಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ನಾಯಕ ನಟನೆಯ, ಹೊಂಬಾಳೆ ಫಿಲಂಸ್ ನಿರ್ಮಾಣದ ಕೆ.ಜಿ.ಎಫ್. ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಧೂಳೆಬ್ಬಿಸಿದ್ದು ಎಲ್ಲರಿಗೂ ಗೊತ್ತೇ ಇದೆ. ಕೆ.ಜಿ.ಎಫ್. ಸಿನಿಮಾದ ಭಾಗ 2 ಕೂಡ ತೆರೆಕಾಣಲು ತಯಾರಾಗಿದೆ. ಅದರ ಟ್ರೈಲರ್ ಯೂಟ್ಯೂಬ್ ವೀಕ್ಷಣೆಯಲ್ಲಿ ಸಾರ್ವಕಾಲಿಕ ದಾಖಲೆ ಮಾಡಿದೆ. ಪ್ರಶಾಂತ್ ನೀಲ್ ನಿರ್ದೇಶನಕ್ಕೆ ಈಗ ಭಾರತೀಯ ಸಿನಿಮಾದ ಹಲವು ಸೂಪರ್ ಸ್ಟಾರ್​ಗಳು ಫಿದಾ ಆಗಿದ್ದಾರೆ. ನೀಲ್ ಖ್ಯಾತಿ ಭಾರತೀಯ ಸಿನಿಮಾ ವಲಯದಲ್ಲಿ ಹಬ್ಬಿದೆ.

ಕೆ.ಜಿ.ಎಫ್. ಚಾಪ್ಟರ್ 2 ಇನ್ನೇನು ತೆರೆಕಾಣಲು ಬಹುಪಾಲು ತಯಾರಾಗಿದೆ. ಯಶ್, ಶ್ರೀನಿಧಿ ಶೆಟ್ಟಿ, ರವೀನಾ, ಸಂಜಯ್ ದತ್, ಪ್ರಕಾಶ್ ರಾಜ್ ಸಹಿತ ಹಲವು ಸ್ಟಾರ್​ಗಳು ಸಿನಿಮಾದ ಭಾಗವಾಗಿದ್ದಾರೆ. ಯಂಗ್ ಅಂಡ್ ಎನರ್ಜಿಟಿಕ್ ನಟ ಪ್ರಭಾಸ್ ಹೀರೋ ಆಗಿ ನಟಿಸುವ ಮತ್ತೊಂದು ಹೊಸ ಸಿನಿಮಾಗೆ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳಲಿದ್ದಾರೆ. ಸಲಾರ್ ಸಿನಿಮಾ ಈಗಾಗಲೇ ಭಾರೀ ಕುತೂಹಲ ಮೂಡಿಸಿದೆ. ಜೂನಿಯರ್ ಎನ್​ಟಿಆರ್ ಜೊತೆಗೂ ಹೊಸ ಯೋಜನೆಗೆ ನೀಲ್ ಸಹಿ ಹಾಕಿದ್ದಾರೆ.

ಸಿನಿಮಾ ಇಂಡಸ್ಟ್ರಿಯ ಹೊಸ ಗುಲ್ಲಿನ ಪ್ರಕಾರ, ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ಪ್ರಶಾಂತ್ ನೀಲ್​ಗೆ ಭರ್ಜರಿ 15 ಕೋಟಿಯ ಚೆಕ್ ನೀಡಿ ಸ್ವಾಗತಿಸಿದೆ. ಈ ಮೂಲಕ ಕನ್ನಡದ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕರಾಗಿ ಪ್ರಶಾಂತ್ ನೀಲ್ ಕಂಡುಬರಲಿದ್ದಾರೆ.

ಇತ್ತೀಚೆಗೆ ಮಾಧ್ಯಮದ ಜೊತೆಗೆ ಮಾತನಾಡಿದ ಪ್ರಶಾಂತ್ ನೀಲ್, ತಮ್ಮ ಸಂಭಾವನೆಯ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ್ದಾರೆ. ಈಗ ನಾನೇ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕ ಎಂದು ನನಗೆ ಅನಿಸುವುದಿಲ್ಲ. ಇದು ಚರ್ಚಿಸಬೇಕಾದ ವಿಚಾರ ಎಂದು ಕೂಡ ನಾನು ಅಂದುಕೊಂಡಿಲ್ಲ. ಅದು ನನ್ನ ವೈಯಕ್ತಿಕ ವಿಚಾರ ಎಂದಷ್ಟೇ ಹೇಳಿದ್ದಾರೆ. ಆದರೆ, ಸೂಪರ್ ಸಿನಿಮಾ ನೀಡಿದ ನಿರ್ದೇಶಕನ ಸಂಭಾವನೆಯ ಬಗ್ಗೆ ಗುಸುಗುಸುವಂತೂ ಸಿನಿಮಾ ವಲಯದಲ್ಲಿ ಸಾಕಷ್ಟು ಓಡಾಡುತ್ತಿದೆ. ಚರ್ಚಗೂ ಕಾರಣವಾಗಿದೆ.

ಇದನ್ನೂ ಓದಿ: ಲಸಿಕೆ ಪಡೆದ ಆ ಯುವಕನ ರೀತಿಯೇ ವೈರಲ್​ ಆಯ್ತು ಪ್ರಶಾಂತ್​ ನೀಲ್ ಫೋಟೋ​; ಆದರೆ ಕಾರಣ ಬೇರೆ

ಪ್ರಶಾಂತ್ ನೀಲ್ ಸಿನಿಮಾದಲ್ಲಿ ಇರಲ್ವಾ ನಾಯಕಿಗೆ ಪ್ರಾಮುಖ್ಯತೆ.. ನೋಡಿ ಈ ಸ್ಟೋರಿ

Published On - 9:33 pm, Tue, 8 June 21

Follow Us
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!