AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ನಿರ್ಮಾಣ ಸಂಸ್ಥೆ ಆರಂಭಿಸಿದ ಪ್ರೇಮ್-ರಕ್ಷಿತಾ: ಉದ್ದೇಶವೇನು?

Director Prem: ‘ಕೆಡಿ’ ಸಿನಿಮಾದ ಹಾಡಿನ ವಿವಾದದಿಂದ ಹೊರ ಬಂದಂತಿರುವ ಪ್ರೇಮ್ ಅವರು ತಮ್ಮ ಪತ್ನಿ ರಕ್ಷಿತಾ ಅವರೊಟ್ಟಿಗೆ ಸೇರಿ ಹೊಸ ಸ್ಟುಡಿಯೋ ಕಮ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಪ್ರತಿಭಾವಂತ ಹೊರಬರಿಗೆ ಅವಕಾಶ ಕೊಡುವ ಉದ್ದೇಶ ಈ ಸ್ಟುಡಿಯೋ ನಿರ್ಮಾಣದ ಹಿಂದೆ ಇದೆಯಂತೆ.

ಹೊಸ ನಿರ್ಮಾಣ ಸಂಸ್ಥೆ ಆರಂಭಿಸಿದ ಪ್ರೇಮ್-ರಕ್ಷಿತಾ: ಉದ್ದೇಶವೇನು?
Prem Rakshita
ಮಂಜುನಾಥ ಸಿ.
|

Updated on:Mar 31, 2026 | 12:40 PM

Share

ನಿರ್ದೇಶಕ ಪ್ರೇಮ್ (Director Prem) ಇತ್ತೀಚೆಗೆ ‘ಕೆಡಿ’ ಸಿನಿಮಾದ ಹಾಡಿನ ವಿವಾದದಿಂದ ಬಹಳ ಸುದ್ದಿಯಲ್ಲಿದ್ದರು. ಅವರು ಬರೆದಿರುವ ‘ಕೆಡಿ’ ಸಿನಿಮಾದ ಹಾಡಿನ ವಿರುದ್ಧ ತೀವ್ರ ಆಕ್ಷೇಪ ಎದ್ದಿತ್ತು. ಸ್ವತಃ ಪ್ರೇಮ್ ಸೇರಿದಂತೆ ಹಲವರಿಗೆ ನೊಟೀಸ್ ಸಹ ಜಾರಿ ಆಗಿತ್ತು. ಇದೀಗ ಆ ವಿವಾದದಿಂದ ಹೊರ ಬಂದಂತಿರುವ ಪ್ರೇಮ್ ಅವರು ತಮ್ಮ ಪತ್ನಿ ರಕ್ಷಿತಾ ಅವರೊಟ್ಟಿಗೆ ಸೇರಿ ಹೊಸ ಸ್ಟುಡಿಯೋ ಕಮ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಪ್ರತಿಭಾವಂತ ಹೊರಬರಿಗೆ ಅವಕಾಶ ಕೊಡುವ ಉದ್ದೇಶ ಈ ಸ್ಟುಡಿಯೋ ನಿರ್ಮಾಣದ ಹಿಂದೆ ಇದೆಯಂತೆ.

​ಸ್ಯಾಂಡಲ್‌ವುಡ್‌ನ ಸ್ಟಾರ್ ನಿರ್ದೇಶಕ ಜೋಗಿ ಪ್ರೇಮ್ ಹಾಗೂ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಚಿತ್ರರಂಗದಲ್ಲಿ ಈಗ ಹೊಸ ಅಧ್ಯಾಯವೊಂದನ್ನು ಆರಂಭಿಸಿದ್ದಾರೆ. ತಮ್ಮ ಕನಸಿನ ಹೊಸ ನಿರ್ಮಾಣ ಸಂಸ್ಥೆ ‘ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್’ ಅನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಟಾರ್ ನಟ-ನಟಿಯರೊಟ್ಟಿಗೆ ಭಾರಿ ಬಜೆಟ್​ನ ಸಿನಿಮಾಗಳನ್ನು ಮಾಡುವ ಪ್ರೇಮ್ ಅವರು ಹೊಸಬರಿಗೆ ಅವಕಾಶ ನೀಡಬೇಕು ಎಂಬ ಸದುದ್ದೇಶದಿಂದ ಈ ನಿರ್ಮಾಣ ಸಂಸ್ಥೆಯನ್ನು ಆರಂಭ ಮಾಡಿದ್ದಾರಂತೆ.

ತಮ್ಮ ಈ ಹೊಸ ನಿರ್ಮಾಣ ಸಂಸ್ಥೆಯ ಮೂಲಕ ತಮ್ಮದೇ ಗರಡಿಯಲ್ಲಿ ಪಳಗಿರುವ ತಮ್ಮದೇ ಶಿಷ್ಯ ಮಂಜುನಾಥ್ ಬಿಎಸ್ ನಿರ್ದೇಶನ ಮಾಡಲಿರುವ ಹೊಸ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ಕಳೆದ ಹಲವು ವರ್ಷಗಳಿಂದ ಪ್ರೇಮ್ ಅವರ ಜೊತೆ ಸಹ-ನಿರ್ದೇಶಕರಾಗಿ ಹಾಗೂ ಚಿತ್ರಸಾಹಿತಿಯಾಗಿ ಗುರುತಿಸಿಕೊಂಡಿರುವ ಮಂಜುನಾಥ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಸಿನಿಮಾ. ಅವರ ಸಿನಿಮಾಕ್ಕೆ ಗುರು ಪ್ರೇಮ್ ಅವರದ್ದೇ ಬಂಡವಾಳ.

ಇದನ್ನೂ ಓದಿ:‘ಸರ್ಸೆ ಸೆರಗು’ ಹಾಡು ವಿವಾದ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಪ್ರೇಮ್​​ಗೆ ನೊಟೀಸ್

ಈಗ ನಿರ್ಮಾಣ ಮಾಡುತ್ತಿರುವ ಹೊಸ ಸಿನಿಮಾಕ್ಕೆ ‘ಏಕ್ ಲವ್ ಯಾ’ ಖ್ಯಾತಿಯ ಯುವ ನಟ ರಾಣಾ ನಾಯಕನಾಗಿ ಆಯ್ಕೆಯಾಗಿದ್ದಾರೆ. ನಟಿ ರಕ್ಷಿತಾ ಅವರ ಸಹೋದರ ಸಹ ಆಗಿದ್ದಾರೆ ರಾಣಾ. ಖ್ಯಾತ ಛಾಯಾಗ್ರಾಹಕ ವಿಲಿಯಂ ಡೆವಿಡ್ ಈ ಸಿನಿಮಾಕ್ಕೆ ಸಿನಿಮಾಟೊಗ್ರಫಿ ಮಾಡಲಿದ್ದಾರೆ. ಯುವ ಪ್ರತಿಭೆ ರೋಮಿಯೋ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ನಿರ್ದೇಶಕರಾಗಿ ಭಾರಿ ಹೆಸರು ಮಾಡಿರುವ ಪ್ರೇಮ್ ಅವರು ಈಗ ನಿರ್ಮಾಪಕರಾಗಿ ಯಶಸ್ವಿ ಆಗುತ್ತಾರೆಯೇ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Tue, 31 March 26

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ