AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ಡೈರೆಕ್ಟರ್ ರಮೇಶ್ ಕಿಟ್ಟಿ ಬಂಧನ

Kichcha Sudeep: ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣವನ್ನು ತನಿಖೆ ನಡೆಸಿದ ಸಿಸಿಬಿ ಪೊಲೀಸರು ಸುದೀಪ್​ಗೆ ಆಪ್ತವಾಗಿದ್ದ ನಿರ್ದೇಶಕ ರಮೇಶ್ ಕಿಟ್ಟಿ ಎಂಬುವರನ್ನು ಬಂಧಿಸಿದ್ದಾರೆ.

ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ಡೈರೆಕ್ಟರ್ ರಮೇಶ್ ಕಿಟ್ಟಿ ಬಂಧನ
ರಮೇಶ್ ಕಿಟ್ಟಿ
Follow us
ಮಂಜುನಾಥ ಸಿ.
|

Updated on: May 05, 2023 | 8:50 PM

ಕಿಚ್ಚ ಸುದೀಪ್ (Sudeep)​ ಅವರಿಗೆ ಅನಾಮಧೇಯ ಬೆದರಿಕೆ ಪತ್ರ (Threat Letter) ಬರೆದಿದ್ದ ಪ್ರಕರಣವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ಆರೋಪಿ ಡೈರೆಕ್ಟರ್ ರಮೇಶ್ ಕಿಟ್ಟಿಯನ್ನು ಬಂಧಿಸಲಾಗಿದೆ. ಆರೋಪಿ ರಮೇಶ್ ಕಿಟ್ಟಿ, ಸುದೀಪ್​ಗೆ ಆಪ್ತನೇ ಆಗಿದ್ದ, ಕಿಚ್ಚ ಸುದೀಪ ಚಾರಿಟೇಬಲ್​ ಟ್ರಸ್ಟ್​ನ ಅಧ್ಯಕ್ಷನಾಗಿದ್ದ ಆದರೆ ಸುದೀಪ್ ಅವರೊಟ್ಟಿಗೆ ಹಣಕಾಸು ವಿಷಯವಕ್ಕೆ ಭಿನ್ನಾಭಿಪ್ರಾಯ ಉಂಟಾದ ಕಾರಣ ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾನೆ.

ಈ ಹಿಂದೆ ಹಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ರಮೇಶ್ ಕಿಟ್ಟಿ, 2004 ರಲ್ಲಿ ಒಂದು ಕನ್ನಡ ಸಿನಿಮಾ ನಿರ್ದೇಶನವನ್ನೂ ಮಾಡಿದ್ದಾರೆ. ಆ ಬಳಿಕ ಕಿಚ್ಚ ಸುದೀಪ ಚಾರಿಟೇಬಲ್ ಟ್ರಸ್ಟ್​ ಅಧ್ಯಕ್ಷರಾಗಿ ಕೆಲಸ ಮಾಡಲು ಆರಂಭಿಸಿದ್ದಾರೆ.

ಚಾರಿಟೇಬಲ್ ಟ್ರಸ್ಟ್​ಗೆ ರಮೇಶ್ ಎರಡು ಕೋಟಿ ಹಣ ಹೂಡಿಕೆ ಮಾಡಿದ್ದರಂತೆ. ಆ ಹಣವನ್ನು ವಾಪಸ್ ಕೇಳಿದಾಗ ಸುದೀಪ್ ಕೊಡಲಿಲ್ಲ ಎಂಬ ಕಾರಣಕ್ಕೆ ಸುದೀಫ್ ಅವರೊಟ್ಟಿಗೆ ವೈಮನಸ್ಯ ಮೂಡಿಸಿಕೊಂಡು ಸುದೀಪ್​ಗೆ ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ. ತಾವೇ ಬೆದರಿಕೆ ಪತ್ರ ಬರೆದಿರುವುದಾಗಿ ಸಿಸಿಬಿ ಪೊಲೀಸರ ಬಳಿ ರಮೇಶ್ ಕಿಟ್ಟಿ ಒಪ್ಪಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ಇನ್ನೂ ಕೆಲವರ ಕೈವಾಡ ಇರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಸುದೀಪ್​ ಬಿಜೆಪಿ ಸೇರಲಿದ್ದಾರೆ ಎಂಬ ಗಾಳಿ ಸುಬ್ಬಿದ ಸಂದರ್ಭದಲ್ಲಿಯೇ ಸುದೀಪ್​ಗೆ ಎರಡು ಬೆದರಿಕೆ ಪತ್ರಗಳು ಬಂದಿದ್ದವು. ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರದಲ್ಲಿ ಬೆದರಿಕೆ ಹಾಕಲಾಗಿತ್ತು ಅಲ್ಲದೆ ಅವಾಚ್ಯ ಶಬ್ದಗಳನ್ನು ಸಹ ಬಳಸಲಾಗಿತ್ತು. ಈ ಬಗ್ಗೆ ಸುದೀಪ್​ರ ಆಪ್ತ, ನಿರ್ಮಾಪಕ ಜಾಕ್ ಮಂಜು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸುದೀಪ್​ ಸಹ ಈ ಬಗ್ಗೆ ಪ್ರತಿಕ್ರಿಯೆ ನಡೆಸಿ, ಇದು ರಾಜಕೀಯದವರ ಕೃತ್ಯ ಅಲ್ಲ, ಇದನ್ನು ನಮ್ಮವರೇ ಮಾಡಿದ್ದಾರೆ ಅದು ಯಾರೆಂದು ಗೊತ್ತಿದೆ ಅವರಿಗೆ ಕಾನೂನಾತ್ಮಕವಾಗಿ ತಕ್ಕ ಉತ್ತರವನ್ನೇ ನೀಡಲಿದ್ದೇನೆ ಎಂದಿದ್ದರು.

ಇದನ್ನೂ ಓದಿ:ನಕಲಿ ನಂಬರ್​ ಪ್ಲೇಟ್​ ಇರುವ ಕಾರಿನಲ್ಲಿ ಬಂದು ಸುದೀಪ್​ಗೆ ಬೆದರಿಕೆ ಪತ್ರ ಪೋಸ್ಟ್​ ಮಾಡಿರುವ ಕಿಡಿಗೇಡಿಗಳು

ಪ್ರಕರಣದ ತನಿಖೆಯ ಪ್ರಾರಂಭಿಕ ಹಂತದಲ್ಲಿ ಸ್ವಿಫ್ಟ್ ಕಾರಿನಲ್ಲಿ ಬಂದ ಅಗಂತುಕರು ದೊಡ್ಡಮಲೂರಿನಲ್ಲಿ ಪೋಸ್ಟ್​ ಬಾಕ್ಸ್​ಗೆ ಪತ್ರ ಹಾಕಿರುವುದು ಬೆಳಕಿಗೆ ಬಂದಿತ್ತು. ಆದರೆ ಕಾರಿನ ನಂಬರ್ ಪ್ಲೇಟ್ ಪರಿಶೀಲನೆ ಮಾಡಿದಾಗ ನಕಲಿ ನಂಬರ್ ಪ್ಲೇಟ್ ಬಳಸಿರುವುದು ತಿಳಿದು ಬಂದಿತ್ತು. ತನಿಖೆ ಮುಂದುವರೆಸಿದ ಸಿಸಿಬಿ ಪೊಲೀಸರು, ಆಪ್ತರೇ ಈ ಕೃತ್ಯ ಎಸಗಿರುವುದಾಗಿ ಸುದೀಪ್ ಅನುಮಾನ ವ್ಯಕ್ತಪಡಿಸಿದ್ದ ಕಾರಣ ಅವರ ಆಪ್ತವಲಯದವರ ವಿಚಾರಣೆ ನಡೆಸಲಾಗಿ ರಮೇಶ್ ಕಿಟ್ಟಿ ವಿಷಯ ತಿಳಿದು ವಿಚಾರಣೆ ನಡೆಸಿ ಇದೀಗ ಬಂಧಿಸಿದ್ದಾರೆ.

ಕಿಚ್ಚ ಸುದೀಪ ಚಾರಿಟೇಬಲ್ ಟ್ರಸ್ಟ್ ಕೋವಿಡ್ ಸಮಯದಲ್ಲಿ ಬಹಳ ಸಕ್ರಿಯಾಗಿ ಕೆಲಸ ಮಾಡಿತ್ತು. ಆಮ್ಲಜನಕ ಸಿಲಿಂಡರ್​ಗಳ ವಿತರಣೆ, ಶಾಲೆಗಳ ದತ್ತು ಸ್ವೀಕಾರ ಸೇರಿದಂತೆ ಒಬ್ಬರಿಗೆ ಚಿಕ್ಕ ಮನೆಯನ್ನು ಕಟ್ಟಿಕೊಡುವ ಕಾರ್ಯವನ್ನೂ ಮಾಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ