AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಮೊದಲ ವಾರದ ಕಲೆಕ್ಷನ್ ಬಗ್ಗೆ ನಿರ್ದೇಶಕ ಶಶಾಂಕ್ ಟ್ವೀಟ್

Kausalya Supraja Rama: ತಮ್ಮ ನಿರ್ದೇಶನದ 'ಕೌಸಲ್ಯ ಸುಪ್ರಜಾ ರಾಮ' ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಬಗ್ಗೆ ಶಶಾಂಕ್ ಟ್ವೀಟ್ ಮಾಡಿದ್ದಾರೆ.

'ಕೌಸಲ್ಯ ಸುಪ್ರಜಾ ರಾಮ' ಸಿನಿಮಾ ಮೊದಲ ವಾರದ ಕಲೆಕ್ಷನ್ ಬಗ್ಗೆ ನಿರ್ದೇಶಕ ಶಶಾಂಕ್ ಟ್ವೀಟ್
ಕೌಸಲ್ಯ ಸುಪ್ರಜಾ ರಾಮ
ಮಂಜುನಾಥ ಸಿ.
|

Updated on: Aug 05, 2023 | 6:48 PM

Share

ಕಳೆದ ಶುಕ್ರವಾರ (ಜುಲೈ 28) ಚಂದನವನದ ಪಾಲಿಗೆ ಶುಭ ಶುಕ್ರವಾರವಾಗಿತ್ತು. ಕಳೆದ ವಾರ ಮೂರು ಪ್ರಮುಖ ಕನ್ನಡ ಸಿನಿಮಾಗಳು ಬಿಡುಗಡೆ ಆದವು. ‘ಆಚಾರ್ ಆಂಡ್ ಕೋ‘ (Aachar And Co), ‘ಕೌಸಲ್ಯ ಸುಪ್ರಜಾ ರಾಮ‘ (Kausalya Supraja Rama) ಸಿನಿಮಾಗಳು ಪ್ರೇಕ್ಷಕರಿಂದ ಹಾಗೂ ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದ ಜೊತೆಗೆ ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಗಳಿಕೆಯನ್ನೂ ಮಾಡುತ್ತಿವೆ. ಅದರ ಹಿಂದಿನ ವಾರ ಬಿಡುಗಡೆ ಆಗಿದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಸಹ ಹಿಟ್ ಎನಿಸಿಕೊಂಡಿದೆ. ಅದರಲ್ಲಿಯೂ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾವನ್ನು ಪ್ರೇಕ್ಷಕರು ಕೊಂಡಾಡುತ್ತಿದ್ದಾರೆ. ಅದರ ಸಂದೇಶ, ನವಿರುತನ, ಆಯ್ಕೆ ಮಾಡಿಕೊಂಡಿರುವ ವಿಷಯದ ಬಗ್ಗೆ ಭರಪೂರ ಪ್ರಶಂಸೆ ವ್ಯಕ್ತವಾಗುತ್ತಿದೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಬಿಡುಗಡೆ ಆಗಿ ವಾರವಾಗಿದ್ದು ಸಿನಿಮಾದ ಮೊದಲ ವಾರದ ಕಲೆಕ್ಷನ್ ಬಗ್ಗೆ ಮಾಡಲಾಗಿದ್ದ ಊಹಾಪೋಹದ ಟ್ವೀಟ್​ಗೆ ಪ್ರತಿಕ್ರಿಯೆಯಾಗಿ ಸಿನಿಮಾದ ನಿರ್ದೇಶಕ ಹಾಗೂ ಸಹ ನಿರ್ಮಾಪಕರೂ ಆಗಿರುವ ಶಶಾಂಕ್ ಟ್ವೀಟ್ ಮಾಡಿದ್ದಾರೆ.

”ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಒಂದು ವಾರದ ಕಲೆಕ್ಷನ್ 1.65 ಕೋಟಿಯಿಂದ 1.80 ಕೋಟಿ ವರೆಗೂ ಆಗಿದೆ” ಎಂದು ಟ್ವೀಟ್ಟರ್ ಹ್ಯಾಂಡಲ್ ಒಂದರ ಮೂಲಕ ಟ್ವೀಟ್ ಮಾಡಲಾಗಿತ್ತು, ಆ ಟ್ವೀಟ್​ಗೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರುವ ನಿರ್ದೇಶಕ ಶಶಾಂಕ್, ”ಈ ಅಂಕಿ-ಸಂಖ್ಯೆಗಳು ನಿಮಗೆ ಎಲ್ಲಿಂದ ಸಿಗುತ್ತವೆ, ಸಿನಿಮಾ ನಿಜಕ್ಕೂ ಬಹಳ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ. ನೀವು ನೀಡಿರುವ ಸಂಖ್ಯೆಗಿಂತಲೂ ಬಹಳ ಹೆಚ್ಚಿನ ಮೊತ್ತವನ್ನು ಸಿನಿಮಾ ಈವರೆಗೆ ಕಲೆಕ್ಷನ್ ಮಾಡಿದೆ. ಆತುರಪಟ್ಟು ತಪ್ಪು-ತಪ್ಪಾದ, ಊಹಿಸಿದ ಮೊತ್ತವನ್ನು ಬರೆದು ಗೊಂದಲ ಸೃಷ್ಟಿಸಬೇಡಿ, ನಾವೇ ಘೋಷಣೆ ಮಾಡುವ ವರೆಗೆ ತಾಳ್ಮೆಯಿಂದ ಕಾಯಿರಿ” ಎಂದಿದ್ದಾರೆ.

ಇದನ್ನೂ ಓದಿ:‘ಕೌಸಲ್ಯ ಸುಪ್ರಜಾ ರಾಮ’ ಚಿತ್ರಕ್ಕೆ ಟಿಎನ್​ ಸೀತಾರಾಮ್​ ಮೆಚ್ಚುಗೆ; ಸಾಹಿತಿಗಳಿಗೆ ಇಷ್ಟವಾಯ್ತು ಶಶಾಂಕ್​ ಸಿನಿಮಾ

ಶಶಾಂಕ್​ರ ಟ್ವೀಟ್​ ಆಧರಿಸಿ ಸಿನಿಮಾದ ಕಲೆಕ್ಷನ್ ಮೊದಲ ವಾರು ಸುಮಾರು 10 ಕೋಟಿಗೂ ಹೆಚ್ಚು ಆಗಿರಬಹುದು ಎಂದು ಕೆಲವರು ಅಂದಾಜಿಸುತ್ತಿದ್ದಾರೆ. ಅದು ಸಾಧ್ಯವೂ ಇದೆ. ಏಕೆಂದರೆ ಬಿಡುಗಡೆ ಆದ ಒಂದು ವಾರದ ಬಳಿಕವೂ ಸಿನಿಮಾದ ಶೋಗಳ ಸಂಖ್ಯೆಯಲ್ಲಿ ಹೆಚ್ಚಿನ ಇಳಿಕೆಯೇನೂ ಆಗಿಲ್ಲ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಸಹ ಸಿನಿಮಾದ ಬಗ್ಗೆ ಧನಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಫ್ಯಾಮಿಲಿ ಆಡಿಯೆನ್ಸ್ ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಪುರುಷ ಅಹಂನ ವಿಷಯವನ್ನು ಆಧರಿಸಿದ ಕತೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿದ್ದಾರೆ. ಬೃಂದಾ ಆಚಾರ್ಯ ಹಾಗೂ ಮಿಲನಾ ನಾಗರಾಜ್ ನಾಯಕಿ. ರಂಘಾಯಣ ರಘು, ಸುಧಾ ಬೆಳವಾಡಿ, ನಾಗಭೂಷಣ ಅವರುಗಳು ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಶಶಾಂಕ್ ಒಟ್ಟಿಗೆ ಮಾಜಿ ಸಚಿವ ಬಿಸಿ ಪಾಟೀಲ್ ಸಹ ಬಂಡವಾಳ ಹೂಡಿದ್ದಾರೆ. ಕಳೆದ ವಾರ ಬಿಡುಗಡೆ ಆಗಿದ್ದ ಈ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ