AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಸಲ್ಯ ಸುಪ್ರಜಾ ರಾಮ ಸಿನಿಮಾದಲ್ಲಿ ಎಣ್ಣೆ ಹಾಡು ಬೇಕಿತ್ತಾ ಎಂದವರಿಗೆ ಶಶಾಂಕ್ ಉತ್ತರ

Kausalya Supraja Rama: ಕೌಸಲ್ಯ ಸುಪ್ರಜಾ ರಾಮ ಎಂಬ ಹೆಸರಿಟ್ಟು ಇದೇನಿದು ಎಣ್ಣೆ ಹಾಡು ಎಂದು ಪ್ರಶ್ನೆ ಎತ್ತಿದ್ದವರಿಗೆ ಶಶಾಂಕ್ ಉತ್ತರ ನೀಡಿದ್ದಾರೆ.

ಕೌಸಲ್ಯ ಸುಪ್ರಜಾ ರಾಮ ಸಿನಿಮಾದಲ್ಲಿ ಎಣ್ಣೆ ಹಾಡು ಬೇಕಿತ್ತಾ ಎಂದವರಿಗೆ ಶಶಾಂಕ್ ಉತ್ತರ
ಶಶಾಂಕ್
Follow us
ಮಂಜುನಾಥ ಸಿ.
| Updated By: Digi Tech Desk

Updated on:Jul 28, 2023 | 9:34 AM

ಡಾರ್ಲಿಂಗ್ ಕೃಷ್ಣ (Darling Krishna)-ಮಿಲನಾ ನಾಗರಾಜ್ (Milana Nagaraj)-ಬೃಂದಾ ಆಚಾರ್ಯ ಅವರುಗಳು ಒಟ್ಟಿಗೆ ನಟಿಸಿರುವ ಮಹಿಳಾಪರ ಸಂದೇಶವುಳ್ಳ ಸಿನಿಮಾ ‘ಕೌಸಲ್ಯ ಸುಪ್ರಜಾ ರಾಮ’ ಜುಲೈ 28ಕ್ಕೆ ಬಿಡುಗಡೆ ಆಗುತ್ತಿದೆ. ಸಿನಿಮಾದ ಬಗ್ಗೆ ಉತ್ತಮ ನಿರೀಕ್ಷೆಗಳಿವೆ. ‘ಮೊಗ್ಗಿನ ಮನಸ್ಸು’, ‘ಕೃಷ್ಣನ್ ಲವ್ ಸ್ಟೋರಿ’, ‘ಬಚ್ಚನ್’ ಅಂಥಹಾ ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಶಶಾಂಕ್ ಈ ಸಿನಿಮಾವನ್ನೂ ನಿರ್ದೇಶನ ಮಾಡಿದ್ದಾರೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಕೆಲವು ಹಾಡುಗಳು ಈಗಾಗಲೇ ಬಿಡುಗಡೆ ಆಗಿ ಹಿಟ್ ಆಗಿದೆ. ಅದರಲ್ಲಿಯೂ ಮಿಲನಾ ನಾಗರಾಜ್ ಬಿಂದಾಸ್ ಆಗಿ ಡ್ಯಾನ್ಸ್ ಮಾಡಿರುವ ಎಣ್ಣೆ ಹಾಡು ಸಖತ್ ವೈರಲ್ ಆಗಿದೆ. ಅದರ ಬೆನ್ನಲ್ಲೆ ‘ಕೌಸಲ್ಯ ಸುಪ್ರಜಾ ರಾಮ’ ಎಂಬುವ ಧಾರ್ಮಿಕ, ಭಕ್ತಿಪೂರ್ವಕ ಹೆಸರುಳ್ಳ ಸಿನಿಮಾದಲ್ಲಿ ಇಂಥಹಾ ಎಣ್ಣೆ ಹಾಡು ಬೇಕಿತ್ತಾ ಎಂದು ಸಹ ಕೆಲವರು ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಗಳಿಗೆ ಸ್ವತಃ ಶಶಾಂಕ್ ಉತ್ತರ ನೀಡಿದ್ದಾರೆ.

”ನಮ್ಮ ಸಿನಿಮಾಕ್ಕೂ ರಾಮಾಯಣಕ್ಕೂ ಅಥವಾ ಶ್ರೀರಾಮನಿಗೂ ಯಾವುದೇ ಸಂಬಂಧ ಹೊಂದಿಲ್ಲ. ನಾವು ‘ಕೌಸಲ್ಯ ಸುಪ್ರಜಾ ರಾಮ’ ಎಂಬ ಹೆಸರು ಆಯ್ದುಕೊಂಡಿದ್ದು, ಅಮ್ಮ-ಮಗನ ಸಂಬಂಧದ ಕತೆಯನ್ನು ಸಿನಿಮಾ ಹೊಂದಿರುವ ಕಾರಣಕ್ಕಾಗಿ ಮಾತ್ರ. ‘ಕೌಸಲ್ಯ ಸುಪ್ರಜಾ ರಾಮ’ ಎಂದರೆ ಕೌಸಲ್ಯಯೆಯ ಒಳ್ಳೆಯ ಮಗನೇ ರಾಮ ಎಂದು ಅರ್ಥ” ಎಂದು ವಿವರಿಸಿದ್ದಾರೆ ಶಶಾಂಕ್.

ಹಾಡಿನ ಬಗ್ಗೆ ಮಾತನಾಡಿ, ಆ ಹಾಡನ್ನು ಕಮರ್ಷಿಯಲ್ ಅಂಶಗಳಿಗಾಗಿ ಅಥವಾ ಮಾರುಕಟ್ಟೆ ಅಂಶಗಳಿಗಾಗಿ ನಾವು ಇಟ್ಟಿದ್ದಲ್ಲ, ಆ ಹಾಡು ಕತೆಗೆ ಅತ್ಯಂತ ಅವಶ್ಯಕವಾಗಿದೆ ಹಾಗಾಗಿ ಆ ಹಾಡನ್ನು ಇಟ್ಟಿದ್ದೇವೆ. ಸಿನಿಮಾ ನೋಡಿದ ಎಲ್ಲರೂ ಆ ಹಾಡು ಬಹಳ ಚೆನ್ನಾಗಿ ಪ್ಲೇಸ್ ಆಗಿದೆ ಎಂದು ಮೆಚ್ಚಿಕೊಂಡಿದ್ದಾರೆ. ಸಿನಿಮಾ ನೋಡುವವರಿಗೂ ಅದು ಖಾತ್ರಿ ಆಗುತ್ತದೆ ಎಂಬ ನಂಬಿಕೆ ಇದೆ ” ಎಂದಿದ್ದಾರೆ ಶಶಾಂಕ್.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾವು ಗಂಡಸಿನ ಅಹಂ ಕುರಿತಾದ ಕತೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಎದುರು ಬೃಂದಾ ಆಚಾರ್ಯ ಹಾಗೂ ಮಿಲನಾ ನಾಗರಾಜ್ ನಾಯಕಿಯಾಗಿದ್ದಾರೆ. ನಟ ನಾಗಭೂಷಣ್, ಸುಧಾ ಬೆಳವಾಡಿ, ರಂಗಾಯಣ ರಘು ಇನ್ನಿತರ ಕಲಾವಿದರು ನಟಿಸಿದ್ದಾರೆ. ಸಿನಿಮಾವು ಜುಲೈ 28ಕ್ಕೆ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:56 pm, Thu, 27 July 23

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ