AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊರಗುಂಟೆಪಾಳ್ಯ ಟ್ರಾಫಿಕ್​ ಸಮಸ್ಯೆ ಬಗ್ಗೆ ಡಿ.ಕೆ. ಶಿವಕುಮಾರ್​ ಎದುರು ಪ್ರಮುಖ ಮನವಿ ಇಟ್ಟ ನಿರ್ದೇಶಕ ಶಶಾಂಕ್​

DK Shivakumar: ನಿರ್ದೇಶಕ ಶಶಾಂಕ್​ ಅವರು ಡಿ.ಕೆ. ಶಿವಕುಮಾರ್​ ಅವರಿಗೆ ಟ್ವಿಟರ್​ನಲ್ಲಿ ಬಹಿರಂಗವಾಗಿ ಪತ್ರ ಬರೆದಿದ್ದಾರೆ. ಬೆಂಗಳೂರಿನ ಸಂಚಾರ ದಟ್ಟಣೆಯ ನಿವಾರಣೆಗೆ ಸಂಬಂಧಿಸಿದಂತೆ ಅವರು ಈ ಮನವಿ ಸಲ್ಲಿಸಿದ್ದಾರೆ.

ಗೊರಗುಂಟೆಪಾಳ್ಯ ಟ್ರಾಫಿಕ್​ ಸಮಸ್ಯೆ ಬಗ್ಗೆ ಡಿ.ಕೆ. ಶಿವಕುಮಾರ್​ ಎದುರು ಪ್ರಮುಖ ಮನವಿ ಇಟ್ಟ ನಿರ್ದೇಶಕ ಶಶಾಂಕ್​
ನಿರ್ದೇಶಕ ಶಶಾಂಕ್​, ಡಿ.ಕೆ. ಶಿವಕುಮಾರ್​
ಮದನ್​ ಕುಮಾರ್​
|

Updated on: Jun 14, 2023 | 9:04 PM

Share

ಕರ್ನಾಟಕದಲ್ಲಿ ಹೊಸ ಸರ್ಕಾರ ಕಾರ್ಯಾರಂಭ ಮಾಡಿದೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್​ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ (DK Shivakumar) ಅವರ ಎದುರಿನಲ್ಲಿ ಅನೇಕರು ಹಲವು ಬೇಡಿಕೆಗಳನ್ನು ಇಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್​ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿಯೂ ಕೆಲಸ ಮಾಡುತ್ತಿರುವುದರಿಂದ ಬೆಂಗಳೂರಿಗರು ಒಂದಷ್ಟು ಮನವಿಗಳನ್ನು ಸಲ್ಲಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ (Sandalwood) ಖ್ಯಾತ ನಿರ್ದೇಶಕ ಶಶಾಂಕ್​ ಕೂಡ 2 ಪ್ರಮುಖವಾದ ಮನವಿಗಳನ್ನು ಸಲ್ಲಿಸಿದ್ದಾರೆ. ಹಾಗಂತ ಇದು ಸಿನಿಮಾಗೆ ಸಂಬಂಧಿಸಿದ ಮನವಿ ಅಲ್ಲ. ಜನಪರವಾದ ವಿಚಾರವನ್ನು ಅವರು ಪ್ರಸ್ತಾಪಿಸಿದ್ದಾರೆ. ಆ ಬಗ್ಗೆ ಅವರು ಟ್ವಿಟರ್​ನಲ್ಲಿ ಬಹಿರಂಗವಾಗಿ ಪತ್ರ ಬರೆದಿದ್ದಾರೆ. ಬೆಂಗಳೂರಿನ ಸಂಚಾರ ದಟ್ಟಣೆಯ ನಿವಾರಣೆಗೆ ಸಂಬಂಧಿಸಿದಂತೆ ಶಶಾಂಕ್(Director Shashank) ಅವರು ಈ ಕೋರಿಕೆಗಳನ್ನು ಸಲ್ಲಿಸಿದ್ದಾರೆ.

ಶಶಾಂಕ್​ ಮಾಡಿದ ಟ್ವೀಟ್​ನಲ್ಲಿ ಏನಿದೆ?

‘ಮಾನ್ಯರೇ.. ನಮ್ಮೆಲ್ಲರ ಹೆಮ್ಮೆಯ ಬೆಂಗಳೂರು ನಗರವು ಹಲವಾರು ಮೂಲಭೂತ ಸೌಲಭ್ಯಗಳ ಕೊರತೆಯಿಂದ ನರಳುತ್ತಿರುವುದು ತಮಗೆ ಗೊತ್ತೇ ಇದೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಇದರ ನಿವಾರಣೆಯ ಕುರಿತಾಗಿ ಕಾರ್ಯಪ್ರವೃತ್ತರಾಗಿರುವುದು ನಿಜಕ್ಕೂ ಶ್ಲಾಘನೀಯ. ಇದೀಗ, ಕನ್ನಡಿಗರು ಅತ್ಯಂತ ತುರ್ತಾಗಿ ಎದುರು ನೋಡುತ್ತಿರುವ ಎರಡು ಯೋಜನೆಗಳನ್ನು ನಿಮ್ಮ ಗಮನಕ್ಕೆ ತರುವುದು ನನ್ನ ಈ ಪತ್ರದ ಮೂಲ ಉದ್ದೇಶ’ ಎಂದು ನಿರ್ದೇಶಕ ಶಶಾಂಕ್​ ಅವರು ಬರಹ ಆರಂಭಿಸಿದ್ದಾರೆ.

‘ಮೊದಲನೆಯದು- ನೆಲಮಂಗಲ ರಸ್ತೆಯ ಗೊರಗುಂಟೆಪಾಳ್ಯ ಜಂಕ್ಷನ್‌! ರಾಜಧಾನಿಯಿಂದ ಮುಕ್ಕಾಲು ಭಾಗ ಕರ್ನಾಟಕಕ್ಕೆ ಹೋಗಲು, ಇದೇ ಹೆಬ್ಬಾಗಿಲು. ಹಲವಾರು ವರ್ಷಗಳಿಂದ ಇಲ್ಲಿ ಆಗುತ್ತಿರುವ ಟ್ರಾಫಿಕ್‌ ಜಾಮ್‌ ಅಸಹನೀಯವಾಗಿದೆ. ಶೀಘ್ರವೇ ಇದಕ್ಕೆ ಪರಿಹಾರ ಕಲ್ಪಿಸಿ. ಎರಡನೆಯದು- ನೆಲಮಂಗಲ ಫೈಓವರ್‌ ಮೇಲಿನ ಹೊರೆ ತಗ್ಗಿಸಲು ಅಭಿವೃದ್ಧಿಪಡಿಸಲಾಗುತ್ತಿರುವ ಮಾಗಡಿ ರಸ್ತೆ ವಿಚಾರ. ಒಮ್ಮೆ ಈಗಿನ ರಸ್ತೆ ಕಾಮಗಾರಿ ಪೂರ್ತಿಯಾಗಿ ಸಂಚಾರಕ್ಕೆ ಮುಕ್ತಗೊಂಡರೆ, ಅದೇ ರಸ್ತೆಯಲ್ಲಿರುವ ಸುಂಕದಕಟ್ಟೆಯು ಈಗಿನ ಗೊರಗುಂಟೆಪಾಳ್ಯ ಜಂಕ್ಷನ್​ ರೀತಿ ಮುಂದಿನ ದಿನಗಳಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆಗಳನ್ನು ಸೃಷ್ಟಿಸುವುದು ಖಂಡಿತಾ. ಆದ್ದರಿಂದ ಈಗಲೇ ಅದಕ್ಕೆ ಪರಿಹಾರ ಕೊಂಡುಕೊಳ್ಳುವುದು ಸೂಕ್ತ’ ಎಂದು ಶಶಾಂಕ್​ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:  ಡಿಕೆ ಶಿವಕುಮಾರ್ ಭೇಟಿ ಮಾಡಿದ ಜಗ್ಗೇಶ್, ರಾಜಕೀಯ ಭೇಟಿಯಲ್ಲ ಎಂದ ನವರಸ ನಾಯಕ

‘ಈ ಎರಡೂ ಯೋಜನೆಗಳು ರಾಜಧಾನಿಯನ್ನು ಬಹುತೇಕ ಕರ್ನಾಟಕಕ್ಕೆ ಸಂಪರ್ಕಿಸುವ ಮತ್ತು ಕನ್ನಡಿಗರು ಅತಿ ಹೆಚ್ಚು ವಾಸವಿರುವ ಭಾಗಗಳು. ಇವುಗಳ ಅನುಷ್ಠಾನವು ಆ ಭಾಗದ ಕನ್ನಡಿಗರಿಗೆ ನೀವು ನೀಡುವ ಉತ್ತಮ ಕಾಣಿಕೆಯಾಗುತ್ತದೆ. ಇವು ಸಾರ್ವಜನಿಕ ಸಮಸ್ಯೆಗಳಾಗಿದ್ದರಿಂದ ಮನವಿಯನ್ನೂ ಸಹ ಸಾರ್ವಜನಿಕವಾಗಿ ಮಾಡುತ್ತಿದ್ದೇನೆ. ಇದನ್ನು ನೀವು ಪರಿಗಣಿಸುತ್ತೀರಿ ಎಂದು ಭಾವಿಸಿದ್ದೇನೆ’ ಎಂದು ನಿರ್ದೇಶಕ ಶಶಾಂಕ್​ ಅವರು ಟ್ವೀಟ್​ ಮಾಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ ಶಶಾಂಕ್ ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಹಲವು ಸ್ಟಾರ್​ ನಟರ ಜೊತೆ ಶಶಾಂಕ್​ ಕೆಲಸ ಮಾಡಿದ್ದಾರೆ. ಪ್ರಸ್ತುತ ಡಾರ್ಲಿಂಗ್​ ಕೃಷ್ಣ ಅಭಿನಯದ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಶಶಾಂಕ್​ ನಿರ್ದೇಶನ ಮಾಡಿದ್ದಾರೆ. ಹಾಡುಗಳ ಮೂಲಕ ಈ ಚಿತ್ರ ಗಮನ ಸೆಳೆಯುತ್ತಿದ್ದು, ಶೀಘ್ರದಲ್ಲೇ ರಿಲೀಸ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ