ಶಾಲೆ ತೆರೆಯುವ ಬಗ್ಗೆ ತಮ್ಮ ‘ಮುಕ್ತ’ ಅಭಿಪ್ರಾಯ ಹಂಚಿಕೊಂಡ TN ಸೀತಾರಾಂ

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಶಾಲಾ ಕಾಲೇಜುಗಳನ್ನು ತೆರೆಯಬೇಕಾ ಅಥವಾ ಬೇಡವಾ ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಈ ನಡುವೆ ಖ್ಯಾತ ನಿರ್ದೇಶಕ TN ಸೀತಾರಾಂ ಕೂಡ ಈ ಚರ್ಚೆಗೆ ತಮ್ಮ ದನಿ ಸೇರಿಸಿದ್ದಾರೆ. ‘ಒಂದು ವರ್ಷ ಮಕ್ಕಳಿಗೆ ಸುಮ್ಮನೆ promotion ಕೊಟ್ಟರೆ ನಷ್ಟವೇನಿಲ್ಲ’ ಇಂಥ ಕೊರೊನಾ ಅಬ್ಬರ ನಡುವೆ ಪುಟ್ಟ ಮಕ್ಕಳ ಶಾಲೆಗಳನ್ನು ಬೇರೆ ತೆರೆಯುತ್ತಾರಂತೆ. ಯಾವ ವಾದ ಏನೇ ಇರಲಿ. ಒಂದೇ ಒಂದು ಪುಟ್ಟ ಮಗುವಿಗೆ ಏನಾದರೂ ಕೊರೊನಾ ಸಂಬಂಧಿತ ಅಪಾಯವಾದರೆ ಇಡೀ ರಾಜ್ಯದ […]

ಶಾಲೆ ತೆರೆಯುವ ಬಗ್ಗೆ ತಮ್ಮ ‘ಮುಕ್ತ’ ಅಭಿಪ್ರಾಯ ಹಂಚಿಕೊಂಡ TN ಸೀತಾರಾಂ
ಸಾಧು ಶ್ರೀನಾಥ್​

Updated on: Oct 10, 2020 | 1:29 PM

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಶಾಲಾ ಕಾಲೇಜುಗಳನ್ನು ತೆರೆಯಬೇಕಾ ಅಥವಾ ಬೇಡವಾ ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಈ ನಡುವೆ ಖ್ಯಾತ ನಿರ್ದೇಶಕ TN ಸೀತಾರಾಂ ಕೂಡ ಈ ಚರ್ಚೆಗೆ ತಮ್ಮ ದನಿ ಸೇರಿಸಿದ್ದಾರೆ.

‘ಒಂದು ವರ್ಷ ಮಕ್ಕಳಿಗೆ ಸುಮ್ಮನೆ promotion ಕೊಟ್ಟರೆ ನಷ್ಟವೇನಿಲ್ಲ’
ಇಂಥ ಕೊರೊನಾ ಅಬ್ಬರ ನಡುವೆ ಪುಟ್ಟ ಮಕ್ಕಳ ಶಾಲೆಗಳನ್ನು ಬೇರೆ ತೆರೆಯುತ್ತಾರಂತೆ. ಯಾವ ವಾದ ಏನೇ ಇರಲಿ. ಒಂದೇ ಒಂದು ಪುಟ್ಟ ಮಗುವಿಗೆ ಏನಾದರೂ ಕೊರೊನಾ ಸಂಬಂಧಿತ ಅಪಾಯವಾದರೆ ಇಡೀ ರಾಜ್ಯದ ತಂದೆ ತಾಯಿಗಳು ಆತಂಕ ಮತ್ತು ಹಿಂಸೆ ಪಡಲು ಶುರು ಮಾಡುತ್ತಾರೆ ಎಂದು ಖ್ಯಾತ ನಿರ್ದೇಶಕ TN ಸೀತಾರಾಂ ಹೇಳಿದ್ದಾರೆ.

ಸೋಂಕು ಹೆಚ್ಚು ಆದರಂತೂ ರಾಜ್ಯದ ಅಂತಃ ಕಳೆ ಮಂಕಾಗಿ ಎಲ್ಲರೂ ಪಾಪ ಪ್ರಜ್ಞೆ ಅನುಭವಿಸ ಬೇಕಾಗುತ್ತದೆ. ಬೇಕಾ ಇದೆಲ್ಲಾ… ಒಂದು ವರ್ಷ ಮಕ್ಕಳಿಗೆ ಸುಮ್ಮನೆ promotion ಕೊಟ್ಟರೆ ನಷ್ಟವೇನಿಲ್ಲ. ಮುಂದೆ ಅದನ್ನು ಸರಿ ಮಾಡಿಕೊಳ್ಳಬಲ್ಲ ಬುದ್ಧ, ಚಾಣಾಕ್ಷತೆ ಮಕ್ಕಳಿಗಿರುತ್ತದೆ. ಸಧ್ಯಕ್ಕೆ ಶಾಲೆ ಶುರುಮಾಡುವುದು ಬೇಡ ಎಂದು CSP ಖ್ಯಾತಿಯ ಸೀತಾರಾಂ ತಮ್ಮ ವಾದ ಮಂಡಿಸಿದ್ದಾರೆ.

Published On - 1:08 pm, Thu, 8 October 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us