AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲಾ ಬಿಟ್ಟು ಆದಿಮಾನವ ಆಗೋಣ’; ಚುನಾವಣೆ ಮುಗಿದ ಬಳಿಕ ಬದಲಾದ ಯೋಗರಾಜ್ ಭಟ್

ಮತದಾನ ಮುಗಿದ ಬಳಿಕ ‘ನಿಮ್ಮದು ಯಾವ ಪಕ್ಷ, ಯಾರಿಗೆ ವೋಟ್ ಮಾಡಿದ್ರಿ’ ಎಂದು ಕೇಳಲಾಗುತ್ತದೆ. ಇದೇ ವಿಚಾರ ಇಟ್ಟುಕೊಂಡು ನಿರ್ದೇಶಕ ಯೋಗರಾಜ್ ಭಟ್ ವಿಡಿಯೋ ಒಂದನ್ನು ಮಾಡಿದ್ದಾರೆ.

‘ಎಲ್ಲಾ ಬಿಟ್ಟು ಆದಿಮಾನವ ಆಗೋಣ’; ಚುನಾವಣೆ ಮುಗಿದ ಬಳಿಕ ಬದಲಾದ ಯೋಗರಾಜ್ ಭಟ್
ಯೋಗರಾಜ್ ಭಟ್
ರಾಜೇಶ್ ದುಗ್ಗುಮನೆ
|

Updated on:May 11, 2023 | 7:22 AM

Share

ವಿಧಾನಸಭೆ ಚುನಾವಣೆ ಮುಗಿದಿದೆ. ಹಲವು ದಿನಗಳ ಕಾಲ ಅಬ್ಬರದ ಪ್ರಚಾರ ಮಾಡಿದ್ದ ರಾಜಕೀಯ ನಾಯಕರು ಈಗ ವಿಶ್ರಾಂತಿಯಲ್ಲಿದ್ದಾರೆ. ಹಲವು ಸಿನಿಮಾ ಕಲಾವಿದರು ಈ ಬಾರಿ ಚುನಾವಣಾ ಪ್ರಚಾರಕ್ಕೆ ಧುಮುಕಿದ್ದರು. ವಿವಿಧ ಹೀರೋಗಳು ಬೇರೆ ಬೇರೆ ಪಕ್ಷದ ಪರ ಪ್ರಚಾರ ನಡೆಸಿದ್ದರು. ಅವರು ಕೂಡ ಈಗ ವಿಶ್ರಾಂತಿಗೆ ತೆರಳಿದ್ದಾರೆ. ಮತದಾನ ಮುಗಿದ ಬಳಿಕ ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ‘ನಿಮ್ಮದು ಯಾವ ಪಕ್ಷ, ಯಾರಿಗೆ ವೋಟ್ ಮಾಡಿದ್ರಿ’ ಎಂದು ಕೇಳಲಾಗುತ್ತದೆ. ಇದೇ ವಿಚಾರ ಇಟ್ಟುಕೊಂಡು ನಿರ್ದೇಶಕ ಯೋಗರಾಜ್ ಭಟ್ (Yogaraj Bhat) ವಿಡಿಯೋ ಒಂದನ್ನು ಮಾಡಿದ್ದಾರೆ. ಈ ವಿಡಿಯೋ ಸಖತ್ ಫನ್ನಿ ಆಗಿದೆ.

ಮಹಿಳೆ: ಸರ್ ವೋಟ್ ಹಾಕಿದ್ರಾ?

ಯೋಗರಾಜ್ ಭಟ್: ಹೌದು ನನ್ನ ಕರ್ತವ್ಯ ನಿರ್ವಹಿಸಿದ್ದೇನೆ.

ಮಹಿಳೆ: ನಿಮ್ಮದು ಯಾವ ಪಕ್ಷ, ಯಾರ ಪರ ನೀವು?

ಯೋಗರಾಜ್ ಭಟ್: ನಮ್ಮನ್ನು ಸಿನಿಮಾ ನಿರ್ದೇಶಕರು, ದಿಕ್ಕು ದರ್ಶಕರು ಅಂತಾರೆ. ಟಾಪ್​, ಬಾಟಮ್, ಫ್ರಂಟ್, ಬ್ಯಾಕ್, ಎಡ, ಬಲ ಎಲ್ಲಾ ಒಂದೇ ನಮಗೆ. ಮನುಷ್ಯತ್ವ ಮುಖ್ಯ. ಮನುಷ್ಯನ ದಿಕ್ಕು ತೆಗೆದುಕೊಂಡು ಏನು ಮಾಡೋಣ? ನಾವು ನಿರ್ಲಿಪ್ತ ನಾಗರೀಕರು.

ಮಹಿಳೆ: ಹಾಗಿದ್ರೆ ಎಲ್ಲಾ ರೌಂಡ್ ರೌಂಡ್​. ಇಡೀ ಲೋಕ ಎಲ್ಲಾ ರೌಂಡ್?

ಯೋಗರಾಜ್ ಭಟ್​: ಹೌದು. ನಮ್ಮದು 360 ಡಿಗ್ರಿ ಸಪೋರ್ಟ್​.

ಮಹಿಳೆ: ಸಿನಿಮಾದವರು ಅಲ್ಲಿ ಇಲ್ಲಿ ಪ್ರಚಾರಕ್ಕೆ ಹೋಗಿದಾರೆ ನೀವು ಹೋಗಿಲ್ವಾ?

ಯೋಗರಾಜ್ ಭಟ್: ಅದು ಅವರವರ ಆಸೆ, ಅವರವರ ಆಯ್ಕೆ. ಕೆಲವೊಂದನ್ನ ತಪ್ಪು ಸರಿ ಚರ್ಚೆ ಮಾಡೋಕೆ ಹೋಗಬಾರದು. ಕಾಸು ಖುಷಿ ಕೆಡಿಸ್ತು, ಮಾತು ಮನೆ ಕೆಡಿಸ್ತು, ತೂತು ಒಲೆ ಕೆಡಿಸ್ತು ಎನ್ನುವ ಗಾದೆ ಇದೆ.

ಮಹಿಳೆ: ಯಾವ ಪಾರ್ಟಿ ಬರಬಹುದು?

ಯೋಗರಾಜ್​ ಭಟ್: ಜಮಾನಾ ಫಾಸ್ಟ್​ ಆಗಿದೆ. ಮನುಷ್ಯ ಸ್ಪೀಡ್ ಮಾಡ್ತಾ ಇದಾನೆ. ಮುಂಚೆ 5 ದಿನದ ಟೆಸ್ಟ್​ ಕ್ರಿಕೆಟ್​ ಇತ್ತು. ಆಮೇಲೆ ಒಂದು ದಿನ ಆಡೋದೆ ಕಷ್ಟ ಆಯ್ತು. ಈಗ 20 ಓವರ್​ಗೆ ಬಂದಿದೆ. ಮುಂದೆ ಕೇವಲ ಹೈಲೈಟ್ಸ್ ನೋಡೋದು ಬರಬಹುದು. ಮಕ್ಕಳು ಏಳು ತಿಂಗಳಿಗೆ ಹುಟ್ತಿದಾರೆ. ಜನನ ಕೂಡ ಫಾಸ್ಟ್. 3 ಗಂಟೆ ಸಿನಿಮಾದಿಂದ 20 ಸೆಕೆಂಡ್​ ರೀಲ್ಸ್​ಗೆ ಬಂದಿದೆ. ಇನ್ನು ಐದು ವರ್ಷಕ್ಕೊಂದು ಎಲೆಕ್ಷನ್. ನಾಲ್ಕೈದು ಜನ ಕುರ್ಚಿ ಮೇಲೆ ಕೂತು ಏಳ್ತಾರೆ. ವರ್ಷಕ್ಕೆ ಒಬ್ಬರು ಕೂರ್ತಾರೆ ಅಂದ್ರೆ ವರ್ಷಕ್ಕೆ ಒಂದು ಎಲೆಕ್ಷನ್ ಲೆಕ್ಕವೇ ಆಯ್ತು. ಕಾಲನೇ ಫಾಸ್ಟ್ ಆಗಿದೆ. ಹೀಗಾಗಿ, ಕಾಲನ ಪ್ರಶ್ನೆ ಮಾಡಬಾರದು.

ಮಹಿಳೆ: ನೀವ್ ಏನಾಗ್ತೀರಾ?

ಯೋಗರಾಜ್ ಭಟ್: ಆದಿ ಮಾನವ ಆಗೋಣ ಅಂತಿದೀನಿ. ಎಲ್ಲದರಿಂದ ಮುಕ್ತ.

ಮಹಿಳೆಯ ಮಗಳು: ಈಗ ಹಾಗೇ ಇರೋದು. ಮತ್ತೇಕೆ ಆದಿಮಾನವ ಆಗಬೇಕು?

ಮುಕ್ತಾಯ..

Published On - 7:19 am, Thu, 11 May 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ