AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧದಿಂದ ಹೆಚ್ಚಿತು ಕಿರಿಕ್? ‘ಆಕಾಶ ದೀಪ’ ನಟಿ ದಿವ್ಯಾ ಪತಿ ಅಮ್ಜದ್ ಅರೆಸ್ಟ್​

ಅಕ್ಟೋಬರ್ 14 ರಂದು ಅರ್ಮದ್​ ಅವರನ್ನು ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಕರೆಸಲಾಯಿತು. ನಂತರ ಅವರನ್ನು ಅಲ್ಲಿಯೇ ಬಂಧಿಸಲಾಗಿದೆ. ಸದ್ಯ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಅನೈತಿಕ ಸಂಬಂಧದಿಂದ ಹೆಚ್ಚಿತು ಕಿರಿಕ್? ‘ಆಕಾಶ ದೀಪ’ ನಟಿ ದಿವ್ಯಾ ಪತಿ ಅಮ್ಜದ್ ಅರೆಸ್ಟ್​
ದಿವ್ಯಾ ಶ್ರೀಧರ್-ಅಮ್ಜದ್
TV9 Web
| Edited By: |

Updated on:Oct 15, 2022 | 7:41 PM

Share

ಕನ್ನಡದ ‘ಆಕಾಶ ದೀಪ’ ಧಾರಾವಾಹಿ (Akasha Deepa) ಮೂಲಕ ಫೇಮಸ್ ಆದ ನಟಿ ದಿವ್ಯಾ ಶ್ರೀಧರ್ ಹಾಗೂ ಅಮ್ಜದ್ ಖಾನ್ ನಡುವಿನ ಕೌಟುಂಬಿಕ ಜಗಳ ಬೀದಿಗೆ ಬಂದಿತ್ತು. ತನಗೆ ಪತಿಯಿಂದ ಕಿರುಕುಳ ಆಗುತ್ತಿದೆ ಎಂದು ನಟಿ ದೂರು ನೀಡಿದ್ದರು. ಈ ಪ್ರಕರಣ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಸಂಬಂಧ ನಟಿ ದೂರು ಕೂಡ ದಾಖಲು ಮಾಡಿದ್ದರು. ಈಗ ಈ ಪ್ರಕರಣಕ್ಕೆ ಸಂಬಂಧಿಸಿ ಅಮ್ಜದ್ ಖಾನ್​ರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.  ದೂರು ದಾಖಲು ಮಾಡುವ ವೇಳೆ, ನಟಿ ಕಿರುಕುಳದ ಜತೆಗೆ ಅನೈಕ ಸಂಬಂಧದ ವಿಚಾರವನ್ನೂ ಉಲ್ಲೇಖ ಮಾಡಿದ್ದಾರೆ.

ಅಕ್ಟೋಬರ್ 14 ರಂದು ಅರ್ಮದ್​ ಅವರನ್ನು ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಕರೆಸಲಾಯಿತು. ನಂತರ ಅವರನ್ನು ಅಲ್ಲಿಯೇ ಬಂಧಿಸಲಾಗಿದೆ. ಸದ್ಯ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಹೀಗಿರುವಾಗಲೇ ವಿಡಿಯೋ ಒಂದು ವೈರಲ್ ಆಗಿದೆ. ಅಮ್ಜದ್ ಮತ್ತು ದಿವ್ಯಾ ಜಗಳವಾಡುತ್ತಿರುವ ವಿಡಿಯೋ ಇದಾಗಿದೆ. ತಮ್ಮಿಬ್ಬರ ಮಧ್ಯೆ ಬಂದ ಹುಡುಗಿ ವಿಚಾರದಲ್ಲಿ ದಿವ್ಯಾ ಹಾಗೂ ಅಮ್ಜದ್ ನಡುವೆ ಕಿರಿಕ್ ಆಗಿದೆ. ಇದು ಅಮ್ಜದ್ ಗರ್ಲ್​ಫ್ರೆಂಡ್ ಎನ್ನಲಾಗಿದೆ. ಪತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ಅಮ್ಜದ್ ಕೂಡ ದಿವ್ಯಾ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ. ‘ನಾನು ಆಕೆ ಮೇಲೆ ಯಾವ ಹಲ್ಲೆಯನ್ನೂ ನಡೆಸಿಲ್ಲ. ಬೇಕಾದ್ರೆ ನಮ್ಮ ಮನೆಯ ಸಿಸಿ ಕ್ಯಾಮರಾ ಚೆಕ್​ ಮಾಡಿ. ಆಕೆ ಕೆಲವು ಕೆಟ್ಟ ಸ್ನೇಹಿತರ ಜೊತೆ ಸೇರಿ ಇದೆಲ್ಲಾ ಮಾಡ್ತಿದ್ದಾಳೆ. ಅಬಾರ್ಷನ್​ ಮಾಡಿಸಲು ನಾಟಕ ಆಡ್ತಿರೋ ಹಾಗಿದೆ. ಏನೇ ಆದ್ರೂ ನನಗೆ ಮಗು ಬೇಕೇ ಬೇಕು. ಕಮಿಷನರ್​ಗೆ ದೂರು ನೀಡಲು ರೆಡಿಯಾಗಿದ್ದೇನೆ’ ಎಂದು ಅಮ್ಜದ್​ ಖಾನ್ ಈ ಮೊದಲು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ‘ಆಕಾಶ ದೀಪ’ ಧಾರಾವಾಹಿ ನಟಿ ದಿವ್ಯಾ ಹೊರಿಸಿದ ಆರೋಪಕ್ಕೆ ಸ್ಪಷ್ಟನೆ ನೀಡಿದ ಪತಿ ಅಮ್ಜದ್​ ಖಾನ್​

ದಿವ್ಯಾ ಶ್ರೀಧರ್ ಅವರು ಕನ್ನಡ ಕಿರುತೆರೆ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ‘ಆಕಾಶ ದೀಪ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. 2015ರಲ್ಲಿ ಪ್ರಸಾರ ಕಂಡ ತಮಿಳಿನ ‘ಕೆಳದಿ ಕಣ್ಮಣಿ’ ಧಾರಾವಾಹಿಯ ಸಹ ನಟ ಅಮ್ಜದ್ ಖಾನ್​ ಅವರನ್ನು ದಿವ್ಯಾ ಮದುವೆ ಆಗಿದ್ದರು. ಆದರೆ ಈಗ ಇವರ ಸಂಸಾರದಲ್ಲಿ ಬಿರುಕು ಮೂಡಿದೆ. ಈ ಪ್ರಕರಣ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Published On - 7:41 pm, Sat, 15 October 22

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು