AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧದಿಂದ ಹೆಚ್ಚಿತು ಕಿರಿಕ್? ‘ಆಕಾಶ ದೀಪ’ ನಟಿ ದಿವ್ಯಾ ಪತಿ ಅಮ್ಜದ್ ಅರೆಸ್ಟ್​

ಅಕ್ಟೋಬರ್ 14 ರಂದು ಅರ್ಮದ್​ ಅವರನ್ನು ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಕರೆಸಲಾಯಿತು. ನಂತರ ಅವರನ್ನು ಅಲ್ಲಿಯೇ ಬಂಧಿಸಲಾಗಿದೆ. ಸದ್ಯ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಅನೈತಿಕ ಸಂಬಂಧದಿಂದ ಹೆಚ್ಚಿತು ಕಿರಿಕ್? ‘ಆಕಾಶ ದೀಪ’ ನಟಿ ದಿವ್ಯಾ ಪತಿ ಅಮ್ಜದ್ ಅರೆಸ್ಟ್​
ದಿವ್ಯಾ ಶ್ರೀಧರ್-ಅಮ್ಜದ್
TV9 Web
| Edited By: |

Updated on:Oct 15, 2022 | 7:41 PM

Share

ಕನ್ನಡದ ‘ಆಕಾಶ ದೀಪ’ ಧಾರಾವಾಹಿ (Akasha Deepa) ಮೂಲಕ ಫೇಮಸ್ ಆದ ನಟಿ ದಿವ್ಯಾ ಶ್ರೀಧರ್ ಹಾಗೂ ಅಮ್ಜದ್ ಖಾನ್ ನಡುವಿನ ಕೌಟುಂಬಿಕ ಜಗಳ ಬೀದಿಗೆ ಬಂದಿತ್ತು. ತನಗೆ ಪತಿಯಿಂದ ಕಿರುಕುಳ ಆಗುತ್ತಿದೆ ಎಂದು ನಟಿ ದೂರು ನೀಡಿದ್ದರು. ಈ ಪ್ರಕರಣ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಸಂಬಂಧ ನಟಿ ದೂರು ಕೂಡ ದಾಖಲು ಮಾಡಿದ್ದರು. ಈಗ ಈ ಪ್ರಕರಣಕ್ಕೆ ಸಂಬಂಧಿಸಿ ಅಮ್ಜದ್ ಖಾನ್​ರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.  ದೂರು ದಾಖಲು ಮಾಡುವ ವೇಳೆ, ನಟಿ ಕಿರುಕುಳದ ಜತೆಗೆ ಅನೈಕ ಸಂಬಂಧದ ವಿಚಾರವನ್ನೂ ಉಲ್ಲೇಖ ಮಾಡಿದ್ದಾರೆ.

ಅಕ್ಟೋಬರ್ 14 ರಂದು ಅರ್ಮದ್​ ಅವರನ್ನು ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಕರೆಸಲಾಯಿತು. ನಂತರ ಅವರನ್ನು ಅಲ್ಲಿಯೇ ಬಂಧಿಸಲಾಗಿದೆ. ಸದ್ಯ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಹೀಗಿರುವಾಗಲೇ ವಿಡಿಯೋ ಒಂದು ವೈರಲ್ ಆಗಿದೆ. ಅಮ್ಜದ್ ಮತ್ತು ದಿವ್ಯಾ ಜಗಳವಾಡುತ್ತಿರುವ ವಿಡಿಯೋ ಇದಾಗಿದೆ. ತಮ್ಮಿಬ್ಬರ ಮಧ್ಯೆ ಬಂದ ಹುಡುಗಿ ವಿಚಾರದಲ್ಲಿ ದಿವ್ಯಾ ಹಾಗೂ ಅಮ್ಜದ್ ನಡುವೆ ಕಿರಿಕ್ ಆಗಿದೆ. ಇದು ಅಮ್ಜದ್ ಗರ್ಲ್​ಫ್ರೆಂಡ್ ಎನ್ನಲಾಗಿದೆ. ಪತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ಅಮ್ಜದ್ ಕೂಡ ದಿವ್ಯಾ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ. ‘ನಾನು ಆಕೆ ಮೇಲೆ ಯಾವ ಹಲ್ಲೆಯನ್ನೂ ನಡೆಸಿಲ್ಲ. ಬೇಕಾದ್ರೆ ನಮ್ಮ ಮನೆಯ ಸಿಸಿ ಕ್ಯಾಮರಾ ಚೆಕ್​ ಮಾಡಿ. ಆಕೆ ಕೆಲವು ಕೆಟ್ಟ ಸ್ನೇಹಿತರ ಜೊತೆ ಸೇರಿ ಇದೆಲ್ಲಾ ಮಾಡ್ತಿದ್ದಾಳೆ. ಅಬಾರ್ಷನ್​ ಮಾಡಿಸಲು ನಾಟಕ ಆಡ್ತಿರೋ ಹಾಗಿದೆ. ಏನೇ ಆದ್ರೂ ನನಗೆ ಮಗು ಬೇಕೇ ಬೇಕು. ಕಮಿಷನರ್​ಗೆ ದೂರು ನೀಡಲು ರೆಡಿಯಾಗಿದ್ದೇನೆ’ ಎಂದು ಅಮ್ಜದ್​ ಖಾನ್ ಈ ಮೊದಲು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ‘ಆಕಾಶ ದೀಪ’ ಧಾರಾವಾಹಿ ನಟಿ ದಿವ್ಯಾ ಹೊರಿಸಿದ ಆರೋಪಕ್ಕೆ ಸ್ಪಷ್ಟನೆ ನೀಡಿದ ಪತಿ ಅಮ್ಜದ್​ ಖಾನ್​

ದಿವ್ಯಾ ಶ್ರೀಧರ್ ಅವರು ಕನ್ನಡ ಕಿರುತೆರೆ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ‘ಆಕಾಶ ದೀಪ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. 2015ರಲ್ಲಿ ಪ್ರಸಾರ ಕಂಡ ತಮಿಳಿನ ‘ಕೆಳದಿ ಕಣ್ಮಣಿ’ ಧಾರಾವಾಹಿಯ ಸಹ ನಟ ಅಮ್ಜದ್ ಖಾನ್​ ಅವರನ್ನು ದಿವ್ಯಾ ಮದುವೆ ಆಗಿದ್ದರು. ಆದರೆ ಈಗ ಇವರ ಸಂಸಾರದಲ್ಲಿ ಬಿರುಕು ಮೂಡಿದೆ. ಈ ಪ್ರಕರಣ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Published On - 7:41 pm, Sat, 15 October 22

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ