Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧದಿಂದ ಹೆಚ್ಚಿತು ಕಿರಿಕ್? ‘ಆಕಾಶ ದೀಪ’ ನಟಿ ದಿವ್ಯಾ ಪತಿ ಅಮ್ಜದ್ ಅರೆಸ್ಟ್​

ಅಕ್ಟೋಬರ್ 14 ರಂದು ಅರ್ಮದ್​ ಅವರನ್ನು ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಕರೆಸಲಾಯಿತು. ನಂತರ ಅವರನ್ನು ಅಲ್ಲಿಯೇ ಬಂಧಿಸಲಾಗಿದೆ. ಸದ್ಯ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಅನೈತಿಕ ಸಂಬಂಧದಿಂದ ಹೆಚ್ಚಿತು ಕಿರಿಕ್? ‘ಆಕಾಶ ದೀಪ’ ನಟಿ ದಿವ್ಯಾ ಪತಿ ಅಮ್ಜದ್ ಅರೆಸ್ಟ್​
ದಿವ್ಯಾ ಶ್ರೀಧರ್-ಅಮ್ಜದ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 15, 2022 | 7:41 PM

ಕನ್ನಡದ ‘ಆಕಾಶ ದೀಪ’ ಧಾರಾವಾಹಿ (Akasha Deepa) ಮೂಲಕ ಫೇಮಸ್ ಆದ ನಟಿ ದಿವ್ಯಾ ಶ್ರೀಧರ್ ಹಾಗೂ ಅಮ್ಜದ್ ಖಾನ್ ನಡುವಿನ ಕೌಟುಂಬಿಕ ಜಗಳ ಬೀದಿಗೆ ಬಂದಿತ್ತು. ತನಗೆ ಪತಿಯಿಂದ ಕಿರುಕುಳ ಆಗುತ್ತಿದೆ ಎಂದು ನಟಿ ದೂರು ನೀಡಿದ್ದರು. ಈ ಪ್ರಕರಣ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಸಂಬಂಧ ನಟಿ ದೂರು ಕೂಡ ದಾಖಲು ಮಾಡಿದ್ದರು. ಈಗ ಈ ಪ್ರಕರಣಕ್ಕೆ ಸಂಬಂಧಿಸಿ ಅಮ್ಜದ್ ಖಾನ್​ರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.  ದೂರು ದಾಖಲು ಮಾಡುವ ವೇಳೆ, ನಟಿ ಕಿರುಕುಳದ ಜತೆಗೆ ಅನೈಕ ಸಂಬಂಧದ ವಿಚಾರವನ್ನೂ ಉಲ್ಲೇಖ ಮಾಡಿದ್ದಾರೆ.

ಅಕ್ಟೋಬರ್ 14 ರಂದು ಅರ್ಮದ್​ ಅವರನ್ನು ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಕರೆಸಲಾಯಿತು. ನಂತರ ಅವರನ್ನು ಅಲ್ಲಿಯೇ ಬಂಧಿಸಲಾಗಿದೆ. ಸದ್ಯ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಹೀಗಿರುವಾಗಲೇ ವಿಡಿಯೋ ಒಂದು ವೈರಲ್ ಆಗಿದೆ. ಅಮ್ಜದ್ ಮತ್ತು ದಿವ್ಯಾ ಜಗಳವಾಡುತ್ತಿರುವ ವಿಡಿಯೋ ಇದಾಗಿದೆ. ತಮ್ಮಿಬ್ಬರ ಮಧ್ಯೆ ಬಂದ ಹುಡುಗಿ ವಿಚಾರದಲ್ಲಿ ದಿವ್ಯಾ ಹಾಗೂ ಅಮ್ಜದ್ ನಡುವೆ ಕಿರಿಕ್ ಆಗಿದೆ. ಇದು ಅಮ್ಜದ್ ಗರ್ಲ್​ಫ್ರೆಂಡ್ ಎನ್ನಲಾಗಿದೆ. ಪತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ಅಮ್ಜದ್ ಕೂಡ ದಿವ್ಯಾ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ. ‘ನಾನು ಆಕೆ ಮೇಲೆ ಯಾವ ಹಲ್ಲೆಯನ್ನೂ ನಡೆಸಿಲ್ಲ. ಬೇಕಾದ್ರೆ ನಮ್ಮ ಮನೆಯ ಸಿಸಿ ಕ್ಯಾಮರಾ ಚೆಕ್​ ಮಾಡಿ. ಆಕೆ ಕೆಲವು ಕೆಟ್ಟ ಸ್ನೇಹಿತರ ಜೊತೆ ಸೇರಿ ಇದೆಲ್ಲಾ ಮಾಡ್ತಿದ್ದಾಳೆ. ಅಬಾರ್ಷನ್​ ಮಾಡಿಸಲು ನಾಟಕ ಆಡ್ತಿರೋ ಹಾಗಿದೆ. ಏನೇ ಆದ್ರೂ ನನಗೆ ಮಗು ಬೇಕೇ ಬೇಕು. ಕಮಿಷನರ್​ಗೆ ದೂರು ನೀಡಲು ರೆಡಿಯಾಗಿದ್ದೇನೆ’ ಎಂದು ಅಮ್ಜದ್​ ಖಾನ್ ಈ ಮೊದಲು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ‘ಆಕಾಶ ದೀಪ’ ಧಾರಾವಾಹಿ ನಟಿ ದಿವ್ಯಾ ಹೊರಿಸಿದ ಆರೋಪಕ್ಕೆ ಸ್ಪಷ್ಟನೆ ನೀಡಿದ ಪತಿ ಅಮ್ಜದ್​ ಖಾನ್​

ದಿವ್ಯಾ ಶ್ರೀಧರ್ ಅವರು ಕನ್ನಡ ಕಿರುತೆರೆ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ‘ಆಕಾಶ ದೀಪ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. 2015ರಲ್ಲಿ ಪ್ರಸಾರ ಕಂಡ ತಮಿಳಿನ ‘ಕೆಳದಿ ಕಣ್ಮಣಿ’ ಧಾರಾವಾಹಿಯ ಸಹ ನಟ ಅಮ್ಜದ್ ಖಾನ್​ ಅವರನ್ನು ದಿವ್ಯಾ ಮದುವೆ ಆಗಿದ್ದರು. ಆದರೆ ಈಗ ಇವರ ಸಂಸಾರದಲ್ಲಿ ಬಿರುಕು ಮೂಡಿದೆ. ಈ ಪ್ರಕರಣ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Published On - 7:41 pm, Sat, 15 October 22

ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ