AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Ramya: ಜಪಾನ್​ನಲ್ಲಿ ರಮ್ಯಾ ಬರ್ತ್​​ಡೇ ಆಚರಣೆ; ವೈರಲ್ ಆಯ್ತು ಫೋಟೋ

Divya Spandana Birthday: ಕೆಲ ಸೆಲೆಬ್ರಿಟಿಗಳು ಬರ್ತ್​ಡೇ ಸಂದರ್ಭದಲ್ಲಿ ಒಂದು ಬ್ರೇಕ್ ತೆಗೆದುಕೊಂಡು ವಿದೇಶ ಪ್ರಯಾಣ ಬೆಳೆಸುತ್ತಾರೆ. ರಮ್ಯಾ ಕೂಡ ಈ ಬಾರಿ ವಿದೇಶಕ್ಕೆ ಹಾರಿದ್ದಾರೆ. ಅವರು ಹುಟ್ಟುಹಬ್ಬದ ಸಂದರ್ಭದಲ್ಲಿ ಜಪಾನ್​​ಗೆ ತೆರಳಿದ್ದಾರೆ.

Happy Birthday Ramya: ಜಪಾನ್​ನಲ್ಲಿ ರಮ್ಯಾ ಬರ್ತ್​​ಡೇ ಆಚರಣೆ; ವೈರಲ್ ಆಯ್ತು ಫೋಟೋ
ರಮ್ಯಾ
TV9 Web
| Edited By: |

Updated on:Nov 29, 2022 | 8:34 AM

Share

ನಟಿ ರಮ್ಯಾ (Ramya)  ಅವರು ಹಲವು ವರ್ಷಗಳ ಬಳಿಕ ಚಿತ್ರರಂಗಕ್ಕೆ ಮರಳಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ. ಇದರ ಜತೆಗೆ ನಿರ್ಮಾಣದಲ್ಲೂ ರಮ್ಯಾ ಬ್ಯುಸಿ ಆಗಿದ್ದಾರೆ. ‘ಆಪಲ್​ಬಾಕ್ಸ್​ ಸ್ಟುಡಿಯೋಸ್​’ (AppleBox Studios) ನಿರ್ಮಾಣ ಸಂಸ್ಥೆ ಸ್ಥಾಪಿಸಿ ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದಾರೆ. ಇಂದು (ನವೆಂಬರ್ 29) ರಮ್ಯಾ  40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಬರ್ತ್​ಡೇ ವಿಶ್ ತಿಳಿಸುತ್ತಿದ್ದಾರೆ. ಬರ್ತ್​ಡೇ ಪ್ರಯುಕ್ತ ಅವರ ಮುಂದಿನ ಚಿತ್ರದ ಲುಕ್ ರಿವೀಲ್ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಕೆಲ ಸೆಲೆಬ್ರಿಟಿಗಳು ಬರ್ತ್​ಡೇ ಸಂದರ್ಭದಲ್ಲಿ ಒಂದು ಬ್ರೇಕ್ ತೆಗೆದುಕೊಂಡು ವಿದೇಶ ಪ್ರಯಾಣ ಬೆಳೆಸುತ್ತಾರೆ. ರಮ್ಯಾ ಕೂಡ ಈ ಬಾರಿ ವಿದೇಶಕ್ಕೆ ಹಾರಿದ್ದಾರೆ. ಅವರು ಹುಟ್ಟುಹಬ್ಬದ ಸಂದರ್ಭದಲ್ಲಿ ಜಪಾನ್​​ಗೆ ತೆರಳಿದ್ದಾರೆ. ಜಪಾನ್ ಹೇಗಿದೆ ಎಂಬ ಫೋಟೋಗಳನ್ನು ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದಾರೆ ಅವರು.

2003ರಲ್ಲಿ ತೆರೆಗೆ ಬಂದ ಪುನೀತ್ ರಾಜ್​ಕುಮಾರ್ ನಟನೆಯ ‘ಅಭಿ’ ಚಿತ್ರದಿಂದ ಬಣ್ಣದ ಬದುಕು ಆರಂಭಿಸಿದವರು ನಟಿ ರಮ್ಯಾ. ನಂತರ ‘ಎಕ್ಸ್​​ಕ್ಯೂಸ್​ ಮಿ’ ಚಿತ್ರದಲ್ಲಿ ನಟಿಸಿದರು. ಬಳಿಕ ಅವರಿಗೆ ತೆಲುಗು ಹಾಗೂ ತಮಿಳು ಚಿತ್ರರಂಗದಿಂದ ಆಫರ್ ಬಂತು. ಅಲ್ಲಿಯೂ ನಟಿಸಿ ಅವರು ಸೈ ಎನಿಸಿಕೊಂಡರು. ಸುದೀಪ್ ಮೊದಲಾದ ಸ್ಟಾರ್ ನಟರ ಜತೆ ರಮ್ಯಾ ತೆರೆಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
‘ಪುಷ್ಪ 2’ ಬಗ್ಗೆ ನನಗೆ ಏನು ಅಂದ್ರೆ ಏನೂ ಗೊತ್ತಿಲ್ಲ ಎಂದ ಡಾಲಿ ಧನಂಜಯ
Image
ಡಾಲಿ ಧನಂಜಯ್​-ಅಮೃತಾ ಅಯ್ಯಂಗಾರ್​ ನಡುವೆ ಏನು ನಡೆಯುತ್ತಿದೆ? ನೇರ ಉತ್ತರ ನೀಡಿದ ನಟಿ
Image
‘ಕ್ಷೇತ್ರಪತಿ’ ಆದ ನವೀನ್​ ಶಂಕರ್​ಗೆ ಶುಭ ಕೋರಿದ ಡಾಲಿ ಧನಂಜಯ; ಮೋಷನ್​ ಪೋಸ್ಟರ್​ ರಿಲೀಸ್​
Image
‘ನೀನೇ ಬೇಕು ನೀನೇ ಬೇಕು ಎನ್ನುವಂತಾಗಲಿ’: ವಸಿಷ್ಠ ಸಿಂಹ, ಡಾಲಿ ಧನಂಜಯಗೆ ಹಂಸಲೇಖ ಹಾರೈಕೆ

ಇದನ್ನೂ ಓದಿ: ಜಪಾನ್​​ನಿಂದ ಬಂದು ರಾಘಣ್ಣನನ್ನು ಭೇಟಿ ಮಾಡಿದ ಪುನೀತ್ ರಾಜ್​ಕುಮಾರ್​ ಫ್ಯಾನ್ಸ್

ಕಳೆದ ಕೆಲ ವರ್ಷಗಳಿಂದ ರಮ್ಯಾ ರಾಜಕೀಯದಲ್ಲಿ ಬ್ಯುಸಿ ಆಗಿದ್ದರು. ಆ ಬಳಿಕ ಅವರು ರಾಜಕೀಯವನ್ನೂ ತೊರೆದರು. ಮತ್ತೆ ಚಿತ್ರರಂಗದಲ್ಲಿ ಅವರಿಗೆ ಆಸಕ್ತಿ ಬೆಳೆಯಿತು. ಈಗ ಅವರು ಹಲವು ವರ್ಷಗಳ ಬಳಿಕ ಬಣ್ಣದ ಲೋಕಕ್ಕೆ ಮರಳುತ್ತಿದ್ದಾರೆ. ‘ಉತ್ತರಕಾಂಡ’ ಚಿತ್ರದಿಂದ ಅವರು ನಟನೆಗೆ ಮರಳಿದ್ದಾರೆ.

ಇದನ್ನೂ ಓದಿ: Uttarakaanda: ರಮ್ಯಾ-ಡಾಲಿ ಧನಂಜಯ್​ ಜೋಡಿಯ ‘ಉತ್ತರಕಾಂಡ’ ಚಿತ್ರಕ್ಕೆ ಪೂಜೆ; ಇಲ್ಲಿವೆ ಮಸ್ತ್​ ಫೋಟೋಗಳು

‘ಉತ್ತರಕಾಂಡ’ ಸಿನಿಮಾವನ್ನು ವಿಜಯ್ ಕಿರಗಂದೂರು ಅರ್ಪಿಸುತ್ತಿದ್ದಾರೆ. ಕೆ.ಆರ್.ಜಿ. ಸಂಸ್ಥೆ ನಿರ್ಮಾಣ ಮಾಡುತ್ತಿದ್ದು, ರೋಹಿತ್ ಪದಕಿ ನಿರ್ದೇಶಿಸುತ್ತಿದ್ದಾರೆ. ನವೆಂಬರ್ 6ರಂದು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಈ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ‘ರತ್ನನ್ ಪ್ರಪಂಚ’ ಯಶಸ್ಸಿನ ನಂತರ ನಿರ್ದೇಶಕ ರೋಹಿತ್ ಪದಕಿ, ನಿರ್ಮಾಪಕರಾದ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್, ನಟ ಧನಂಜಯ್ ಮತ್ತೊಮ್ಮೆ ಒಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:03 am, Tue, 29 November 22

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ