AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Suresh: ದಿವ್ಯಾ ಸುರೇಶ್ ಈಗ ರೌಡಿ ಬೇಬಿ; ಮಾದಕ ಲುಕ್​ನಲ್ಲಿ ಬಿಗ್​ ಬಾಸ್​ ಸ್ಪರ್ಧಿ

‘ರೌಡಿ ಬೇಬಿ‘ ಚಿತ್ರವನ್ನು ರೆಡ್ಡಿ ಕೃಷ್ಣ ನಿರ್ದೇಶಿಸಿದ್ದಾರೆ. ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಕಾರ್ಯ ನಿರ್ವಹಿಸಿ ಅನುಭವವಿರುವ ರೆಡ್ಡಿ ಕೃಷ್ಣ ಅವರಿಗೆ ಇದು ಚೊಚ್ಚಲ ನಿರ್ದೇಶನ.

Divya Suresh: ದಿವ್ಯಾ ಸುರೇಶ್ ಈಗ ರೌಡಿ ಬೇಬಿ; ಮಾದಕ ಲುಕ್​ನಲ್ಲಿ ಬಿಗ್​ ಬಾಸ್​ ಸ್ಪರ್ಧಿ
ದಿವ್ಯಾ ಸುರೇಶ್​ ಸಿನಿಮಾ ರೌಡಿ ಬೇಬಿ ಚಿತ್ರದ ಫೋಟೋ
ರಾಜೇಶ್ ದುಗ್ಗುಮನೆ
|

Updated on:May 19, 2021 | 5:16 PM

Share

ಬಿಗ್​ ಬಾಸ್​ ಮೂಲಕ ನಟಿ ದಿವ್ಯಾ ಸುರೇಶ್​ ಖ್ಯಾತಿ ದುಪ್ಪಟ್ಟಾಗಿದೆ. ಮನೆಯಲ್ಲಿ ಅವರು ಸ್ಟ್ರಾಂಗ್​ ಮಹಿಳಾ ಸ್ಪರ್ಧಿಯಾಗಿ, ಮಂಜು ಪಾವಗಡ ಜತೆಗಿನ ಗೆಳೆತನದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಈಗ ಅವರ ನಟನೆಯ ‘ರೌಡಿ ಬೇಬಿ’ ಚಿತ್ರದ ಲಿರಿಕಲ್​ ಸಾಂಗ್​ ರಿಲೀಸ್​ ಆಗಿದೆ. ಈ ಹಾಡನ್ನು ನೋಡಿ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ರೌಡಿ ಬೇಬಿ‘ ಚಿತ್ರವನ್ನು ರೆಡ್ಡಿ ಕೃಷ್ಣ ನಿರ್ದೇಶಿಸಿದ್ದಾರೆ. ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಕಾರ್ಯ ನಿರ್ವಹಿಸಿ ಅನುಭವವಿರುವ ರೆಡ್ಡಿ ಕೃಷ್ಣ ಅವರಿಗೆ ಇದು ಚೊಚ್ಚಲ ನಿರ್ದೇಶನ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿಕೊಂಡಿದ್ದು, ಲಾಕ್ ಡೌನ್ ಮುಕ್ತಾಯದ ಬಳಿಕ ರಿಲೀಸ್​ ಆಗಲಿದೆ.

ಎಸ್ ಎಸ್ ರವಿಗೌಡ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ದಿವ್ಯಾ ಸುರೇಶ್ ಹಾಗೂ ಹೀರ್ ಕೌರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ‘ನಾ ನೀನಾದರೆ..’ ಎಂಬ ಹಾಡಿನ ಲಿರಿಕಲ್ ವಿಡಿಯೋವನ್ನು ಚಿತ್ರತಂಡ ರಿಲೀಸ್ ಮಾಡಿದೆ. ಈ ಹಾಡಿನಲ್ಲಿ ಅವರು ಗ್ಲಾಮರ್​ ಅವತಾರ ತಾಳಿದ್ದಾರೆ. ಈ ಹಾಡಿನಲ್ಲಿ ಅವರು ಲಿಪ್​ ಲಾಕ್​ ಕೂಡ ಮಾಡಿದ್ದು ಸ್ಟಿಲ್​ಗಳು ವೈರಲ್​ ಆಗಿವೆ.  ಈ ಹಾಡಿನಿಂದ ಚಿತ್ರಕ್ಕೆ ಮೈಲೇಜ್​ ಹೆಚ್ಚಾಗುವ ಎಲ್ಲಾ ಲಕ್ಷಣ ಇದೆ.

Divya Suresh

ರೌಡಿ ಬೇಬಿಯಲ್ಲಿ ದಿವ್ಯಾ ಸುರೇಶ್

ಅರಮಾನ್ ಹಾಗೂ ಅಭಿಷೇಕ್ ರಫಸ್ ಸಂಗೀತ ನಿರ್ದೇಶನ, ಸಾಮ್ರಾಟ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ ಹಾಗೂ ಚಂದ್ರು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದಲ್ಲಿರುವ ನಾಲ್ಕು ಹಾಡುಗಳಿಗೆ ವಿ.ನಾಗೇಂದ್ರ ಪ್ರಸಾದ್, ಸಿಂಪಲ್ ಸುನಿ ಹಾಗೂ ಕಿನಾಲ್ ರಾಜ್ ಸಾಹಿತ್ಯ ಬರೆದಿದ್ದಾರೆ.

ಬಿಗ್​ ಬಾಸ್​ ಮನೆಯಿಂದ ಹೊರ ಬಂದ ಸ್ಪರ್ಧಿಗಳಿಗೆ ಸಿನಿಮಾ ಆಫರ್​ ಹೆಚ್ಚುತ್ತಿದೆ. ರಘು ಗೌಡ ಅವರು ಬಿಗ್​ ಬಾಸ್ ಮನೆಯಿಂದ ಹೊರ ಬರುತ್ತಿದ್ದಂತೆ ಅವರ ನಟನೆಯ ದ್ವಿಪಾತ್ರ ಚಿತ್ರದ ಪೋಸ್ಟರ್​ ರಿಲೀಸ್​ ಆಗಿತ್ತು. ಈಗ ದಿವ್ಯಾ ಸುರೇಶ್​ ನಟಿಸುತ್ತಿರುವ ಸಿನಿಮಾದ ಸಾಂಗ್​ ರಿಲೀಸ್​ ಆಗಿದೆ.

ಇದನ್ನೂ ಓದಿ: Bigg Boss Kannada: ನೀನೆಂಥ ಮೋಸಗಾರ ಅಂತ 10 ವಾರದ ನಂತರ ಗೊತ್ತಾಯ್ತು; ಮಂಜುಗೆ ತಿವಿದ ದಿವ್ಯಾ​

Divya Suresh: ‘ನನ್ನನ್ನು ಮದುವೆಗೆ ಆಮಂತ್ರಿಸು’ ಎನ್ನುವ ಮೂಲಕ ಮಂಜುಗೆ ಎಲ್ಲವನ್ನೂ ಸ್ಪಷ್ಟಪಡಿಸಿದ ದಿವ್ಯಾ ಸುರೇಶ್​

Published On - 5:11 pm, Wed, 19 May 21

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ