AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Suresh: ದಿವ್ಯಾ ಸುರೇಶ್ ಈಗ ರೌಡಿ ಬೇಬಿ; ಮಾದಕ ಲುಕ್​ನಲ್ಲಿ ಬಿಗ್​ ಬಾಸ್​ ಸ್ಪರ್ಧಿ

‘ರೌಡಿ ಬೇಬಿ‘ ಚಿತ್ರವನ್ನು ರೆಡ್ಡಿ ಕೃಷ್ಣ ನಿರ್ದೇಶಿಸಿದ್ದಾರೆ. ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಕಾರ್ಯ ನಿರ್ವಹಿಸಿ ಅನುಭವವಿರುವ ರೆಡ್ಡಿ ಕೃಷ್ಣ ಅವರಿಗೆ ಇದು ಚೊಚ್ಚಲ ನಿರ್ದೇಶನ.

Divya Suresh: ದಿವ್ಯಾ ಸುರೇಶ್ ಈಗ ರೌಡಿ ಬೇಬಿ; ಮಾದಕ ಲುಕ್​ನಲ್ಲಿ ಬಿಗ್​ ಬಾಸ್​ ಸ್ಪರ್ಧಿ
ದಿವ್ಯಾ ಸುರೇಶ್​ ಸಿನಿಮಾ ರೌಡಿ ಬೇಬಿ ಚಿತ್ರದ ಫೋಟೋ
ರಾಜೇಶ್ ದುಗ್ಗುಮನೆ
|

Updated on:May 19, 2021 | 5:16 PM

Share

ಬಿಗ್​ ಬಾಸ್​ ಮೂಲಕ ನಟಿ ದಿವ್ಯಾ ಸುರೇಶ್​ ಖ್ಯಾತಿ ದುಪ್ಪಟ್ಟಾಗಿದೆ. ಮನೆಯಲ್ಲಿ ಅವರು ಸ್ಟ್ರಾಂಗ್​ ಮಹಿಳಾ ಸ್ಪರ್ಧಿಯಾಗಿ, ಮಂಜು ಪಾವಗಡ ಜತೆಗಿನ ಗೆಳೆತನದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಈಗ ಅವರ ನಟನೆಯ ‘ರೌಡಿ ಬೇಬಿ’ ಚಿತ್ರದ ಲಿರಿಕಲ್​ ಸಾಂಗ್​ ರಿಲೀಸ್​ ಆಗಿದೆ. ಈ ಹಾಡನ್ನು ನೋಡಿ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ರೌಡಿ ಬೇಬಿ‘ ಚಿತ್ರವನ್ನು ರೆಡ್ಡಿ ಕೃಷ್ಣ ನಿರ್ದೇಶಿಸಿದ್ದಾರೆ. ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಕಾರ್ಯ ನಿರ್ವಹಿಸಿ ಅನುಭವವಿರುವ ರೆಡ್ಡಿ ಕೃಷ್ಣ ಅವರಿಗೆ ಇದು ಚೊಚ್ಚಲ ನಿರ್ದೇಶನ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿಕೊಂಡಿದ್ದು, ಲಾಕ್ ಡೌನ್ ಮುಕ್ತಾಯದ ಬಳಿಕ ರಿಲೀಸ್​ ಆಗಲಿದೆ.

ಎಸ್ ಎಸ್ ರವಿಗೌಡ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ದಿವ್ಯಾ ಸುರೇಶ್ ಹಾಗೂ ಹೀರ್ ಕೌರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ‘ನಾ ನೀನಾದರೆ..’ ಎಂಬ ಹಾಡಿನ ಲಿರಿಕಲ್ ವಿಡಿಯೋವನ್ನು ಚಿತ್ರತಂಡ ರಿಲೀಸ್ ಮಾಡಿದೆ. ಈ ಹಾಡಿನಲ್ಲಿ ಅವರು ಗ್ಲಾಮರ್​ ಅವತಾರ ತಾಳಿದ್ದಾರೆ. ಈ ಹಾಡಿನಲ್ಲಿ ಅವರು ಲಿಪ್​ ಲಾಕ್​ ಕೂಡ ಮಾಡಿದ್ದು ಸ್ಟಿಲ್​ಗಳು ವೈರಲ್​ ಆಗಿವೆ.  ಈ ಹಾಡಿನಿಂದ ಚಿತ್ರಕ್ಕೆ ಮೈಲೇಜ್​ ಹೆಚ್ಚಾಗುವ ಎಲ್ಲಾ ಲಕ್ಷಣ ಇದೆ.

Divya Suresh

ರೌಡಿ ಬೇಬಿಯಲ್ಲಿ ದಿವ್ಯಾ ಸುರೇಶ್

ಅರಮಾನ್ ಹಾಗೂ ಅಭಿಷೇಕ್ ರಫಸ್ ಸಂಗೀತ ನಿರ್ದೇಶನ, ಸಾಮ್ರಾಟ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ ಹಾಗೂ ಚಂದ್ರು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದಲ್ಲಿರುವ ನಾಲ್ಕು ಹಾಡುಗಳಿಗೆ ವಿ.ನಾಗೇಂದ್ರ ಪ್ರಸಾದ್, ಸಿಂಪಲ್ ಸುನಿ ಹಾಗೂ ಕಿನಾಲ್ ರಾಜ್ ಸಾಹಿತ್ಯ ಬರೆದಿದ್ದಾರೆ.

ಬಿಗ್​ ಬಾಸ್​ ಮನೆಯಿಂದ ಹೊರ ಬಂದ ಸ್ಪರ್ಧಿಗಳಿಗೆ ಸಿನಿಮಾ ಆಫರ್​ ಹೆಚ್ಚುತ್ತಿದೆ. ರಘು ಗೌಡ ಅವರು ಬಿಗ್​ ಬಾಸ್ ಮನೆಯಿಂದ ಹೊರ ಬರುತ್ತಿದ್ದಂತೆ ಅವರ ನಟನೆಯ ದ್ವಿಪಾತ್ರ ಚಿತ್ರದ ಪೋಸ್ಟರ್​ ರಿಲೀಸ್​ ಆಗಿತ್ತು. ಈಗ ದಿವ್ಯಾ ಸುರೇಶ್​ ನಟಿಸುತ್ತಿರುವ ಸಿನಿಮಾದ ಸಾಂಗ್​ ರಿಲೀಸ್​ ಆಗಿದೆ.

ಇದನ್ನೂ ಓದಿ: Bigg Boss Kannada: ನೀನೆಂಥ ಮೋಸಗಾರ ಅಂತ 10 ವಾರದ ನಂತರ ಗೊತ್ತಾಯ್ತು; ಮಂಜುಗೆ ತಿವಿದ ದಿವ್ಯಾ​

Divya Suresh: ‘ನನ್ನನ್ನು ಮದುವೆಗೆ ಆಮಂತ್ರಿಸು’ ಎನ್ನುವ ಮೂಲಕ ಮಂಜುಗೆ ಎಲ್ಲವನ್ನೂ ಸ್ಪಷ್ಟಪಡಿಸಿದ ದಿವ್ಯಾ ಸುರೇಶ್​

Published On - 5:11 pm, Wed, 19 May 21

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?