AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ದಿವ್ಯಾ ಸುರೇಶ್​ ನಟನೆಯ ‘ರೌಡಿ ಬೇಬಿ’ ಚಿತ್ರ ಫೆ.11ಕ್ಕೆ ರಿಲೀಸ್​; ಸದ್ದು ಮಾಡ್ತಿದೆ ಟ್ರೇಲರ್​

‘ಎಲ್ಲಿ ಪ್ರೀತಿ ಇರುತ್ತೋ ಅಲ್ಲಿ ನೋವು ಇದ್ದೇ ಇರುತ್ತೆ’ ಎಂಬ ಥೀಮ್​ ಇಟ್ಟುಕೊಂಡು ರೌಡಿ ಬೇಬಿ ಸಿನಿಮಾ ತಯಾರಾಗಿದೆ. ಈ ಚಿತ್ರದಲ್ಲಿ ದಿವ್ಯಾ ಸುರೇಶ್​, ರವಿ ಗೌಡ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

ಬಿಗ್​ ಬಾಸ್​ ದಿವ್ಯಾ ಸುರೇಶ್​ ನಟನೆಯ ‘ರೌಡಿ ಬೇಬಿ’ ಚಿತ್ರ ಫೆ.11ಕ್ಕೆ ರಿಲೀಸ್​; ಸದ್ದು ಮಾಡ್ತಿದೆ ಟ್ರೇಲರ್​
ದಿವ್ಯಾ ಸುರೇಶ್​, ರವಿ ಗೌಡ
TV9 Web
| Edited By: |

Updated on: Feb 03, 2022 | 5:56 PM

Share

ಬಿಗ್​ ಬಾಸ್​ ಕಾರ್ಯಕ್ರಮದಿಂದ ಜನಪ್ರಿಯತೆ ಹೆಚ್ಚಿಸಿಕೊಂಡ ನಟಿ ದಿವ್ಯಾ ಸುರೇಶ್​ (Divya Suresh) ಅವರು ಈಗ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರು ಅಭಿನಯಿಸಿರುವ ಹೊಸ ಸಿನಿಮಾ ‘ರೌಡಿ ಬೇಬಿ’ ಬಿಡುಗಡೆಗೆ ಸಜ್ಜಾಗಿದೆ. ಫೆ.11ರಂದು ಈ ಚಿತ್ರ ರಿಲೀಸ್​ ಆಗಲಿದೆ. ಫೆ.3ರಂದು ‘ರೌಡಿ ಬೇಬಿ’ (Rowdy Baby Movie) ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ‘ಮದಗಜ’ ಸಿನಿಮಾದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಂಜಯ್ ಗೌಡ, ರಘು ಗೌಡ, ವಿತರಕ ಸುರೇಶ್ ಮುಂತಾದವರು ಉಪಸ್ಥಿತರಿದ್ದರು. ಈ ಸಿನಿಮಾದಲ್ಲಿ ದಿವ್ಯಾ ಸುರೇಶ್​ ಜೊತೆ ಎಸ್​.ಎಸ್.​ ರವಿ ಗೌಡ (SS Ravi Gowda) ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಹೀರ್​ ಕೌರ್​, ಅಮಿತ್​ ವಿ., ಕೆಂಪೇಗೌಡ, ಅರುಣಾ ಬಾಲರಾಜ್​, ಶ್ರೀನಾಥ್​ ವಸಿಷ್ಠ, ಅವಿನಾಶ್​ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ. Epuru Krishna ನಿರ್ದೇಶನ ಮಾಡಿದ್ದು, ಅರಮಾನ್​ ಮೆರುಗು ಸಂಗೀತ ನೀಡಿದ್ದಾರೆ. ವಾರ್​ ಫೂಟ್​ ಸ್ಟುಡಿಯೋಸ್​ ಮತ್ತು ಸುಮುಖ ಎಂಟರ್​ಟೇನರ್ಸ್​ ಸಂಸ್ಥೆ ಮೂಲಕ ‘ರೌಡಿ ಬೇಬಿ’ ಚಿತ್ರ ತಯಾರಾಗಿದೆ.

‘ಎಲ್ಲಿ ಪ್ರೀತಿ ಇರುತ್ತೋ ಅಲ್ಲಿ ನೋವು ಇದ್ದೇ ಇರುತ್ತೆ ಅನ್ನೋದನ್ನು ಈ ಸಿನಿಮಾದಲ್ಲಿ ತೋರಿಸಿದ್ದೇವೆ. ಎಲ್ಲರೂ ಫಸ್ಟ್​ ಲವ್​ಗೆ ಹೆಚ್ಚು ಮಹತ್ವ ನೀಡುತ್ತಾರೆ. ಆದರೆ ಒಬ್ಬರಿಗೆ ಎಷ್ಟೇ ಬಾರಿ ಪ್ರೀತಿ ಆದರೂ ಅದರ ತೀವ್ರತೆ ಅದೇ ರೀತಿ ಇರುತ್ತೆ ಎಂಬ ಪರಿಕಲ್ಪನೆಯನ್ನು ಇದರಲ್ಲಿ ಹೇಳಿದ್ದೇನೆ’ ಎಂದಿದ್ದಾರೆ ನಿರ್ದೇಶಕರು. ಈ ಸಿನಿಮಾದ ಟ್ರೇಲರ್​ನಲ್ಲಿ ದಿವ್ಯಾ ಸುರೇಶ್​ ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಈ ಟ್ರೇಲರ್ ವೈರಲ್​ ಆಗಿದೆ.

ಟ್ರೇಲರ್​ ರಿಲೀಸ್​ ಆಗಿದ್ದಕ್ಕೆ ದಿವ್ಯಾ ಸುರೇಶ್​ ಖುಷಿ ಆಗಿದ್ದಾರೆ. ‘ಕೊರೊನಾ ಹಾವಳಿ ಕಡಿಮೆ ಆಗಿದ್ದು ನಮ್ಮ ಸಿನಿಮಾ ರಿಲೀಸ್​ ಆಗುತ್ತಿರುವುದು ಸಂತಸ ತಂದಿದೆ. ಟೈಟಲ್​ ರೀತಿಯೇ ನನ್ನ ಪಾತ್ರ ರೌಡಿ ಬೇಬಿ ರೀತಿ ಇದೆ. ಪ್ರತಿ ಕಾಲೇಜ್​ ಗ್ಯಾಂಗ್​ನಲ್ಲಿ ಒಬ್ಬಳು ಹುಡುಗಿ ಆ ಥರ ಇರುತ್ತಾಳೆ. ಆ ಪಾತ್ರವನ್ನು ನಾನು ಮಾಡಿದ್ದೀನಿ’ ಎಂದಿದ್ದಾರೆ ದಿವ್ಯಾ ಸುರೇಶ್​.

‘ಸಿನಿಮಾದವರ ನಡುವೆ ಯಾವುದೇ ಬೇಧ-ಭಾವ ಇಲ್ಲ. ನಾವೆಲ್ಲ ಕಲಾದೇವತೆಯ ಮಕ್ಕಳು. ಕನ್ನಡದ ಸಿನಿಮಾಗಳು ಹೆಚ್ಚು ಬೆಳೆಯಬೇಕು. ಸಿನಿಮಾ ಮಾಡುವುದು ಎಷ್ಟು ಕಷ್ಟ ಇದೆಯೋ, ರಿಲೀಸ್​ ಮಾಡುವುದು ಅದಕ್ಕಿಂತ ಹೆಚ್ಚು ಕಷ್ಟ. ರಿಲೀಸ್​ ಸಮಯದಲ್ಲಿ ಕಲಾವಿದರು ಜೊತೆಯಲ್ಲಿ ನಿಂತು ಪ್ರಚಾರ ಮಾಡಬೇಕು’ ಎಂದು ಉಮಾಪತಿ ಶ್ರೀನಿವಾಸ ಗೌಡ ಹೇಳಿದರು.

ಇದನ್ನೂ ಓದಿ:

ಅಪಘಾತ ಸಂಭವಿಸಿದ್ದು ಹೇಗೆ? ಟಿವಿ9ಗೆ ಎಲ್ಲವನ್ನೂ ವಿವರಿಸಿದ ದಿವ್ಯಾ ಸುರೇಶ್​

Divya Suresh: ಬಿಗ್​ ಬಾಸ್​ ಖ್ಯಾತಿಯ ದಿವ್ಯಾ ಸುರೇಶ್​ಗೆ ಅಪಘಾತ; ಈಗ ಹೇಗಿದೆ ಪರಿಸ್ಥಿತಿ?

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ