AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಮಾಸ್ಕ್ ಹಾಕಿ ಸಾಗರ ಜಾತ್ರೆ ಸುತ್ತಾಡಿದ ದಿವ್ಯಾ ಉರುಡುಗ; ಫ್ಯಾನ್ಸ್ ಗುರುತಿಸಿದ್ರಾ?

ದಿವ್ಯಾ ಉರುಡುಗ ಅವರು ಸಾಗರದ ಜಾತ್ರೆಗೆ ತೆರಳಿದ್ದಾರೆ. ಈ ವಿಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Divya Uruduga: ಮಾಸ್ಕ್ ಹಾಕಿ ಸಾಗರ ಜಾತ್ರೆ ಸುತ್ತಾಡಿದ ದಿವ್ಯಾ ಉರುಡುಗ; ಫ್ಯಾನ್ಸ್ ಗುರುತಿಸಿದ್ರಾ?
ದಿವ್ಯಾ ಉರುಡುಗ
ರಾಜೇಶ್ ದುಗ್ಗುಮನೆ
|

Updated on:Feb 14, 2023 | 8:47 AM

Share

ದಿವ್ಯಾ ಉರುಡುಗ (Divya Uruduga) ಅವರು ಎರಡು ಬಾರಿ ಬಿಗ್ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧೆ ಮಾಡಿ ಬಂದಿದ್ದಾರೆ. ಅವರು ಸ್ಪರ್ಧೆ ಮಾಡಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್​ 9’ ಕಳೆದ ವರ್ಷಾಂತ್ಯಕ್ಕೆ ಪೂರ್ಣಗೊಂಡಿದೆ. ‘ಬಿಗ್​ ಬಾಸ್​​’ನಿಂದ ದಿವ್ಯಾ ಉರುಡುಗ ಖ್ಯಾತಿ ಹೆಚ್ಚಿದೆ. ಈಗ ದಿವ್ಯಾ ಉರುಡುಗ ಅವರು ಸಾಗರದ ಜಾತ್ರೆಯಲ್ಲಿ ಮಾಸ್ಕ್ ಹಾಕಿ ಸುತ್ತಾಡಿದ್ದಾರೆ. ಈ ವಿಡಿಯೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ದಿವ್ಯಾ ಉರುಡುಗ ಅವರು ತೀರ್ಥಹಳ್ಳಿಯವರು. ಅವರಿಗೆ ಊರಿನ ಬಗ್ಗೆ ಸಾಕಷ್ಟು ಪ್ರೀತಿ ಇದೆ. ಅನೇಕ ಬಾರಿ ಇದನ್ನು ಅವರು ಹೇಳಿಕೊಂಡಿದ್ದಿದೆ. ಈಗ ದಿವ್ಯಾ ಉರುಡುಗ ಅವರು ಸಾಗರದ ಜಾತ್ರೆಗೆ ತೆರಳಿದ್ದಾರೆ. ಈ ವಿಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕಂಡರೆ ಮುತ್ತಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಮಾಸ್ಕ್ ಹಾಕಿ ಅವರು ಓಡಾಡಿದ್ದಾರೆ. ಹೀಗಾಗಿ, ಅವರನ್ನು ಗುರುತಿಸೋದು ಕಷ್ಟವಾಗಿದೆ.

ಇದನ್ನೂ ಓದಿ
Image
ಬಿಗ್ ಬಾಸ್​ನಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ ನೋಡಿ ಮನೆ ಮಂದಿ ಹೇಳಿದ್ದು ಒಂದೇ ಮಾತು
Image
ಅರವಿಂದ್ ಬಳಿಕ ಬಿಗ್ ಬಾಸ್ ಮನೆಗೆ ಕಾಲಿಟ್ಟ ವಾಸುಕಿ ವೈಭವ್​; ಸ್ಪರ್ಧಿಗಳಿಗೆ ಸಿಕ್ಕಾಪಟ್ಟೆ ಸರ್​ಪ್ರೈಸ್​
Image
ದಿವ್ಯಾ ಉರುಡುಗಗೆ ಕಣ್ಣೀರು ಹಾಕಿಸಿದ್ದ ರೂಪೇಶ್ ರಾಜಣ್ಣ; ದೊಡ್ಮನೆಯಲ್ಲಿ ಟಾಂಗ್ ಕೊಟ್ಟ ಅರವಿಂದ್ ಕೆಪಿ
Image
Divya Uruduga: ದಿವ್ಯಾ ಉರುಡುಗ ಸಲುವಾಗಿ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ ಅರವಿಂದ್ ಕೆಪಿ

ದಿವ್ಯಾ ಉರುಡುಗ ಹಂಚಿಕೊಂಡಿರುವ ರೀಲ್ಸ್​ಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ನಾನು ಜಾತ್ರೆಯಲ್ಲಿದ್ದರೂ ನಿಮ್ಮನ್ನು ಗುರುತಿಸೋಕೆ ಸಾಧ್ಯವಾಗಲಿಲ್ಲವಲ್ಲ’ ಎಂದಿದ್ದಾರೆ. ಇನ್ನೂ ಕೆಲವರು ‘ಅರವಿಂದ್ ಕೆಪಿ ಬಂದಿಲ್ಲವೇ, ಅವರಿಗೂ ಜಾತ್ರೆ ತೋರಿಸಬಹುದಿತ್ತು’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.

View this post on Instagram

A post shared by DU✨ (@divya_uruduga)

ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಮೊದಲ ಬಾರಿಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟರು. ಅಲ್ಲಿ ಬೈಕರ್ ಅರವಿಂದ್ ಕೆಪಿ ಪರಿಚಯ ಅವರಿಗೆ ಆಯಿತು. ಇಬ್ಬರೂ ಪರಸ್ಪರ ಪ್ರೀತಿಸೋಕೆ ಆರಂಭಿಸಿದರು. ಈ ಕಾರಣಕ್ಕೂ ಅವರು ಹೆಚ್ಚು ಗಮನ ಸೆಳೆದರು. ಎಂಟನೇ ಸೀಸನ್​ನಲ್ಲಿ ಅವರು ಎರಡನೇ ರನ್ನರ್ ಅಪ್ ಆದರು. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲೂ ದಿವ್ಯಾ ಸ್ಪರ್ಧೆ ಮಾಡಿದ್ದರು. ಅರವಿಂದ್ ಇಲ್ಲ ಎನ್ನುವ ಕಾರಣಕ್ಕೆ ಅವರು ಕೊಂಚ ಡಲ್ ಆದರು. ಆದರೆ, ಕೊನೆಯಲ್ಲಿ ಒಳ್ಳೆಯ ಪರ್ಫಾರ್ಮೆನ್ಸ್ ನೀಡಿದರು. 9ನೇ ಸೀಸನ್​ನಲ್ಲಿ ದಿವ್ಯಾ ಉರುಡುಗ ಅವರು ನಾಲ್ಕನೇ ರನ್ನರ್ ಅಪ್ ಆದರು.

View this post on Instagram

A post shared by DU✨ (@divya_uruduga)

ಇದನ್ನೂ ಓದಿ:Divya Uruduga: ಅರವಿಂದ್ ಕೆಪಿ ಜನ್ಮದಿನಕ್ಕಾಗಿ ದಿವ್ಯಾ ಉರುಡುಗ ವಿಶೇಷ ಸಾಲುಗಳು; ಇಲ್ಲಿದೆ ಆ ಕವಿತೆ

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಈ ಚಿತ್ರಕ್ಕೆ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:45 am, Tue, 14 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು