AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಮಾಸ್ಕ್ ಹಾಕಿ ಸಾಗರ ಜಾತ್ರೆ ಸುತ್ತಾಡಿದ ದಿವ್ಯಾ ಉರುಡುಗ; ಫ್ಯಾನ್ಸ್ ಗುರುತಿಸಿದ್ರಾ?

ದಿವ್ಯಾ ಉರುಡುಗ ಅವರು ಸಾಗರದ ಜಾತ್ರೆಗೆ ತೆರಳಿದ್ದಾರೆ. ಈ ವಿಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Divya Uruduga: ಮಾಸ್ಕ್ ಹಾಕಿ ಸಾಗರ ಜಾತ್ರೆ ಸುತ್ತಾಡಿದ ದಿವ್ಯಾ ಉರುಡುಗ; ಫ್ಯಾನ್ಸ್ ಗುರುತಿಸಿದ್ರಾ?
ದಿವ್ಯಾ ಉರುಡುಗ
ರಾಜೇಶ್ ದುಗ್ಗುಮನೆ
|

Updated on:Feb 14, 2023 | 8:47 AM

Share

ದಿವ್ಯಾ ಉರುಡುಗ (Divya Uruduga) ಅವರು ಎರಡು ಬಾರಿ ಬಿಗ್ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧೆ ಮಾಡಿ ಬಂದಿದ್ದಾರೆ. ಅವರು ಸ್ಪರ್ಧೆ ಮಾಡಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್​ 9’ ಕಳೆದ ವರ್ಷಾಂತ್ಯಕ್ಕೆ ಪೂರ್ಣಗೊಂಡಿದೆ. ‘ಬಿಗ್​ ಬಾಸ್​​’ನಿಂದ ದಿವ್ಯಾ ಉರುಡುಗ ಖ್ಯಾತಿ ಹೆಚ್ಚಿದೆ. ಈಗ ದಿವ್ಯಾ ಉರುಡುಗ ಅವರು ಸಾಗರದ ಜಾತ್ರೆಯಲ್ಲಿ ಮಾಸ್ಕ್ ಹಾಕಿ ಸುತ್ತಾಡಿದ್ದಾರೆ. ಈ ವಿಡಿಯೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ದಿವ್ಯಾ ಉರುಡುಗ ಅವರು ತೀರ್ಥಹಳ್ಳಿಯವರು. ಅವರಿಗೆ ಊರಿನ ಬಗ್ಗೆ ಸಾಕಷ್ಟು ಪ್ರೀತಿ ಇದೆ. ಅನೇಕ ಬಾರಿ ಇದನ್ನು ಅವರು ಹೇಳಿಕೊಂಡಿದ್ದಿದೆ. ಈಗ ದಿವ್ಯಾ ಉರುಡುಗ ಅವರು ಸಾಗರದ ಜಾತ್ರೆಗೆ ತೆರಳಿದ್ದಾರೆ. ಈ ವಿಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕಂಡರೆ ಮುತ್ತಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಮಾಸ್ಕ್ ಹಾಕಿ ಅವರು ಓಡಾಡಿದ್ದಾರೆ. ಹೀಗಾಗಿ, ಅವರನ್ನು ಗುರುತಿಸೋದು ಕಷ್ಟವಾಗಿದೆ.

ಇದನ್ನೂ ಓದಿ
Image
ಬಿಗ್ ಬಾಸ್​ನಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ ನೋಡಿ ಮನೆ ಮಂದಿ ಹೇಳಿದ್ದು ಒಂದೇ ಮಾತು
Image
ಅರವಿಂದ್ ಬಳಿಕ ಬಿಗ್ ಬಾಸ್ ಮನೆಗೆ ಕಾಲಿಟ್ಟ ವಾಸುಕಿ ವೈಭವ್​; ಸ್ಪರ್ಧಿಗಳಿಗೆ ಸಿಕ್ಕಾಪಟ್ಟೆ ಸರ್​ಪ್ರೈಸ್​
Image
ದಿವ್ಯಾ ಉರುಡುಗಗೆ ಕಣ್ಣೀರು ಹಾಕಿಸಿದ್ದ ರೂಪೇಶ್ ರಾಜಣ್ಣ; ದೊಡ್ಮನೆಯಲ್ಲಿ ಟಾಂಗ್ ಕೊಟ್ಟ ಅರವಿಂದ್ ಕೆಪಿ
Image
Divya Uruduga: ದಿವ್ಯಾ ಉರುಡುಗ ಸಲುವಾಗಿ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ ಅರವಿಂದ್ ಕೆಪಿ

ದಿವ್ಯಾ ಉರುಡುಗ ಹಂಚಿಕೊಂಡಿರುವ ರೀಲ್ಸ್​ಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ನಾನು ಜಾತ್ರೆಯಲ್ಲಿದ್ದರೂ ನಿಮ್ಮನ್ನು ಗುರುತಿಸೋಕೆ ಸಾಧ್ಯವಾಗಲಿಲ್ಲವಲ್ಲ’ ಎಂದಿದ್ದಾರೆ. ಇನ್ನೂ ಕೆಲವರು ‘ಅರವಿಂದ್ ಕೆಪಿ ಬಂದಿಲ್ಲವೇ, ಅವರಿಗೂ ಜಾತ್ರೆ ತೋರಿಸಬಹುದಿತ್ತು’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.

View this post on Instagram

A post shared by DU✨ (@divya_uruduga)

ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಮೊದಲ ಬಾರಿಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟರು. ಅಲ್ಲಿ ಬೈಕರ್ ಅರವಿಂದ್ ಕೆಪಿ ಪರಿಚಯ ಅವರಿಗೆ ಆಯಿತು. ಇಬ್ಬರೂ ಪರಸ್ಪರ ಪ್ರೀತಿಸೋಕೆ ಆರಂಭಿಸಿದರು. ಈ ಕಾರಣಕ್ಕೂ ಅವರು ಹೆಚ್ಚು ಗಮನ ಸೆಳೆದರು. ಎಂಟನೇ ಸೀಸನ್​ನಲ್ಲಿ ಅವರು ಎರಡನೇ ರನ್ನರ್ ಅಪ್ ಆದರು. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲೂ ದಿವ್ಯಾ ಸ್ಪರ್ಧೆ ಮಾಡಿದ್ದರು. ಅರವಿಂದ್ ಇಲ್ಲ ಎನ್ನುವ ಕಾರಣಕ್ಕೆ ಅವರು ಕೊಂಚ ಡಲ್ ಆದರು. ಆದರೆ, ಕೊನೆಯಲ್ಲಿ ಒಳ್ಳೆಯ ಪರ್ಫಾರ್ಮೆನ್ಸ್ ನೀಡಿದರು. 9ನೇ ಸೀಸನ್​ನಲ್ಲಿ ದಿವ್ಯಾ ಉರುಡುಗ ಅವರು ನಾಲ್ಕನೇ ರನ್ನರ್ ಅಪ್ ಆದರು.

View this post on Instagram

A post shared by DU✨ (@divya_uruduga)

ಇದನ್ನೂ ಓದಿ:Divya Uruduga: ಅರವಿಂದ್ ಕೆಪಿ ಜನ್ಮದಿನಕ್ಕಾಗಿ ದಿವ್ಯಾ ಉರುಡುಗ ವಿಶೇಷ ಸಾಲುಗಳು; ಇಲ್ಲಿದೆ ಆ ಕವಿತೆ

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಈ ಚಿತ್ರಕ್ಕೆ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:45 am, Tue, 14 February 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ