AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗರಾಜ್​ ಭಟ್​ ಸಿನಿಮಾದಲ್ಲಿ ನಟಿಸೋ ಆಫರ್​ ಗಿಟ್ಟಿಸಿಕೊಂಡ ‘ಬಿಗ್​ ಬಾಸ್’​ ದಿವ್ಯಾ ಉರುಡುಗ

ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರ್ ಫಿಲ್ಮ್ಸ್​ ಜಂಟಿ ನಿರ್ಮಾಣದಲ್ಲಿ ‘ಪದವಿಪೂರ್ವ’ ಸಿನಿಮಾ ಮೂಡಿ ಬರುತ್ತಿದೆ. ಹರಿಪ್ರಸಾದ್ ಜಯಣ್ಣ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಗೆ ಬಿಗ್ ಬಾಸ್ ಖ್ಯಾತಿಯ ನಟಿ ದಿವ್ಯಾ ಉರುಡುಗ ಪ್ರವೇಶ ಪಡೆದುಕೊಂಡಿದ್ದಾರೆ.

ಯೋಗರಾಜ್​ ಭಟ್​ ಸಿನಿಮಾದಲ್ಲಿ ನಟಿಸೋ ಆಫರ್​ ಗಿಟ್ಟಿಸಿಕೊಂಡ ‘ಬಿಗ್​ ಬಾಸ್’​ ದಿವ್ಯಾ ಉರುಡುಗ
ಯೋಗರಾಜ್​ ಭಟ್​-ದಿವ್ಯಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 01, 2021 | 3:28 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಎರಡನೇ ರನ್ನರ್​ ಅಪ್​ ದಿವ್ಯಾ ಉರುಡುಗ ಅವರಿಗೆ ಸಾಕಷ್ಟು ಖ್ಯಾತಿ ಸಿಕ್ಕಿದೆ. ಈ ಮೊದಲು ಹಲವು ಸಿನಿಮಾಗಳಲ್ಲಿ ನಟಿಸಿದ್ದ ಅವರಿಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಸಾಕಷ್ಟು ನಿರ್ಮಾಪಕರು ದಿವ್ಯಾ ಅವರ ಮನೆ ಬಾಗಿಲು ತಟ್ಟಿದ್ದಾರೆ. ಆದರೆ, ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಕಥೆ ಹಾಗೂ ಪಾತ್ರ ಉತ್ತಮವಾಗಿದ್ದರೆ ಮಾತ್ರ ಅವರು ಚಿತ್ರವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗ ನಿರ್ದೇಶಕ ಯೋಗರಾಜ್​ ಭಟ್​ ಅವರ ಸಿನಿಮಾದಲ್ಲಿ ನಟಿಸೋ ಅವಕಾಶವನ್ನು ಅವರು ಗಿಟ್ಟಿಸಿಕೊಂಡಿದ್ದಾರೆ. ಈ ವಿಚಾರ ಕೇಳಿ ದಿವ್ಯಾ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರ್ ಫಿಲ್ಮ್ಸ್​ ಜಂಟಿ ನಿರ್ಮಾಣದಲ್ಲಿ ‘ಪದವಿಪೂರ್ವ’ ಸಿನಿಮಾ ಮೂಡಿ ಬರುತ್ತಿದೆ. ಹರಿಪ್ರಸಾದ್ ಜಯಣ್ಣ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಗೆ ಬಿಗ್ ಬಾಸ್ ಖ್ಯಾತಿಯ ನಟಿ ದಿವ್ಯಾ ಉರುಡುಗ ಪ್ರವೇಶ ಪಡೆದುಕೊಂಡಿದ್ದಾರೆ. ಅವರು ಚಿತ್ರದಲ್ಲಿ ಅತಿಥಿ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ. ಯೋಗರಾಜ್​ ಭಟ್​ ಅವರ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಕೆಲಸ ಮಾಡುತ್ತಿರುವುದಕ್ಕೆ ದಿವ್ಯಾ ಖುಷಿ ಪಟ್ಟಿದ್ದಾರೆ. ದಿವ್ಯಾ ಅವರು ನಟಿಸಲಿರುವ ಕಥೆಯ ಚಿತ್ರೀಕರಣ ಬೆಂಗಳೂರು ಹಾಗು ಮಂಗಳೂರಿನ ಸುತ್ತಮುತ್ತ ನಡೆಯಲಿದೆ. ಈಗಾಗಲೇ ನಾಲ್ಕು ಹಂತದಲ್ಲಿ ಶೂಟಿಂಗ್​ ಮುಗಿದಿದ್ದು, ಐದನೇ ಹಂತದ ಚಿತ್ರೀಕರಣಕ್ಕೆ ತಂಡ ಸಕಲ ಸಿದ್ಧತೆ ನಡೆಸಿದೆ.

ಈ ಸಿನಿಮಾದಲ್ಲಿ ಹೊಸಬರಿಗೆ ಮಣೆ ಹಾಕಲಾಗಿದೆ. ಈ ಚಿತ್ರಕ್ಕೆ ಯುವ ಪ್ರತಿಭೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶಾ ಶಿವಕುಮಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ‘ಪದವಿಪೂರ್ವ’ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಹಾಡುಗಳಿಗೆ ಯೋಗರಾಜ್ ಭಟ್ ಸಾಹಿತ್ಯ ಇದ್ದು ಸಾಕಷ್ಟು ನಿರೀಕ್ಷೆ ಇದೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಮಧು ತುಂಬಕೆರೆಯ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ: ರೊಮ್ಯಾಂಟಿಕ್​ ಡ್ಯಾನ್ಸ್​ ಮಾಡಿದ ದಿವ್ಯಾ ಉರುಡುಗ ಮತ್ತು ಅರವಿಂದ್ ಕೆ.ಪಿ.​; ಇಲ್ಲಿದೆ ವಿಡಿಯೋ

ಅರವಿಂದ್​ಗೆ ಸಿಕ್ತು ಯೂತ್​ ಐಕಾನ್​ ಅವಾರ್ಡ್​​; ಸಂತಸ ಪಟ್ಟ ದಿವ್ಯಾ ಉರುಡುಗ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ