ರವಿಚಂದ್ರನ್, ಅಪ್ಪು, ಸುದೀಪ್ ಬಗ್ಗೆ ಡಿ.ಕೆ.ಶಿವಕುಮಾರ್ ಮಾತು: ಡಿಕೆಶಿ ಪುತ್ರಿ ಬಗ್ಗೆ ರವಿಚಂದ್ರನ್ ಹೇಳಿದ್ದೇನು?

DK Shivakumar: ತಮ್ಮ ಒಡೆತನದ ಗ್ಲೋಬಲ್ ಡಿವಿನಿಟಿ ಮಾಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು, ರವಿಚಂದ್ರನ್, ಪುನೀತ್ ರಾಜ್​ಕುಮಾರ್ ಹಾಗೂ ಸುದೀಪ್ ಬಗ್ಗೆ ಮಾತನಾಡಿದರು.

ರವಿಚಂದ್ರನ್, ಅಪ್ಪು, ಸುದೀಪ್ ಬಗ್ಗೆ ಡಿ.ಕೆ.ಶಿವಕುಮಾರ್ ಮಾತು: ಡಿಕೆಶಿ ಪುತ್ರಿ ಬಗ್ಗೆ ರವಿಚಂದ್ರನ್ ಹೇಳಿದ್ದೇನು?
ಡಿಕೆ ಶಿವಕುಮಾರ್
Follow us
|

Updated on:Jun 24, 2023 | 10:05 PM

ಡಿಕೆ ಶಿವಕುಮಾರ್ (DK Shivakumar) ಒಡೆತನದ ಬೆಂಗಳೂರಿನ ನಾಯಂಡಹಳ್ಳಿ ಸಮೀಪದ ಗ್ಲೋಬಲ್ ಡಿವಿನಿಟಿ ಮಾಲ್​ (Global Divinity Mall) ಉದ್ಘಾಟನೆ ಕಾರ್ಯಕ್ರಮ ಇಂದು (ಜೂನ್ 24) ರ ಸಂಜೆ ಅದ್ಧೂರಿಯಾಗಿ ನೆರವೇರಿತು. ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಕುಟುಂಬದ ಜೊತೆಗೆ ನಟ ಕಿಚ್ಚ ಸುದೀಪ್ (Kichcha Sudeep), ಕ್ರೇಜಿಸ್ಟಾರ್ ರವಿಚಂದ್ರನ್ (Ravichandran), ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರುಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರವಿಚಂದ್ರ, ಪುನೀತ್ ರಾಜ್​ಕುಮಾರ್ ಹಾಗೂ ಸುದೀಪ್ ಬಗ್ಗೆ ಆಪ್ತ ಮಾತುಗಳನ್ನಾಡಿದರು.

ರವಿಚಂದ್ರನ್ ಸ್ನೇಹವನ್ನು ನೆನಪಿಸಿಕೊಂಡ ಡಿಕೆ ಶಿವಕುಮಾರ್, ನಾನೂ ಹಾಗೂ ರವಿಚಂದ್ರನ್ ಬಾಲ್ಯದ ಗೆಳೆಯರು. ಇಬ್ಬರೂ ಸಹ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಒಟ್ಟಿಗೆ ಓದಿದೆವು. ಈ ಹಿಂದೆ ಚುನಾವಣಾ ಸಮಯದಲ್ಲಿ ಮಾಲ್ ಒಂದರ ಉದ್ಘಾಟನೆ ಮಾಡಿಸಬೇಕಿತ್ತು ಆದರೆ ನಾನೂ ಹಾಜರಿರಲಿಲ್ಲವಾದ್ದರಿಂದ ಕರೆಯಲಾಗಿರಲಿಲ್ಲ. ಆದರೆ ಈಗ ಸಮಯ ಕೂಡಿ ಬಂತು. ಬಂದು ಉದ್ಘಾಟನೆ ಮಾಡಿಕೊಡಿ ಎಂದಾಗ ಬಂದಿದ್ದಾರೆ. ಅವರಿಗೆ ಧನ್ಯವಾದ ಎಂದರು.

ಪುನೀತ್ ರಾಜ್​ಕುಮಾರ್ ಅವರನ್ನು ಕಾರ್ಯಕ್ರಮದಲ್ಲಿ ನೆನಪಿಸಿಕೊಂಡ ಡಿಕೆ ಶಿವಕುಮಾರ್, ”ನನ್ನ ಆತ್ಮೀಯ ಗೆಳೆಯ ಪುನೀತ್ ರಾಜ್​ಕುಮಾರ್ ಇದ್ದಿದ್ದರೆ ನಮ್ಮ ಎರಡೂ ಮಾಲ್​ನ ಉದ್ಘಾಟನಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿರುತ್ತಿದ್ದರು. ಆದರೆ ಅವರ ಧರ್ಮಪತ್ನಿ, ಸಹೋದರಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ನಮ್ಮ ಆಹ್ವಾನ ಮನ್ನಿಸಿ ಬಂದಿದ್ದಾರೆ ಅವರಿಗೆ ಆಭಾರಿಯಾಗಿದ್ದೇನೆ ಎಂದರು. ನಟ ಸುದೀಪ್ ಬಗ್ಗೆಯೂ ಮಾತನಾಡಿ, ಅವರು ಆಗಮಿಸಿರುವುದಕ್ಕೆ ಬಹಳ ಸಂತೋಷವಿದೆ. ನಮ್ಮ ಸಂಸ್ಥೆಯ ಹಲವು ಕಾರ್ಯಕ್ರಮಗಳಿಗೆ ಅವರು ಆಗಮಿಸಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು ಸಹ ಡಿಕೆಶಿ ಹೇಳಿದರು.

ಇದನ್ನೂ ಓದಿ:ರವಿಚಂದ್ರನ್ ಮನೆ ಮುಂದೆ ಅಭಿಮಾನಿಗಳ ದಂಡು, ರವಿಮಾಮನ ನೋಡಲು ದೂರದೂರದಿಂದ ಬಂದ ಅಭಿಮಾನಿಗಳು

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ರವಿಚಂದ್ರನ್, ”ಯಾವುದೇ ಕೆಲಸ ಮಾಡಬೇಕಾದರೂ ಉದ್ದೇಶ ಚೆನ್ನಾಗಿರಬೇಕು ಎನ್ನುತ್ತಾರೆ. ಅಂತೆಯೇ ಈ ಕಾರ್ಯಕ್ರಮದ ಉದ್ದೇಶ ಚೆನ್ನಾಗಿದೆ. ಐಶ್ವರ್ಯಾರ ಹುಮ್ಮಸ್ಸು ಸಹ ಚೆನ್ನಾಗಿದೆ ಹಾಗಾಗಿ ಒಳ್ಳೆಯದೇ ಆಗುತ್ತದೆ. ಐಶ್ವರ್ಯಾ ಅವರು ಬಹಳ ಉತ್ಸಾಹದಿಂದ ಕಾರ್ಯಕ್ರಮ ಮಾಡುತ್ತಿದ್ದಾರೆ. ಅಪ್ಪನಿಗೆ ತಕ್ಕ ಮಗಳು ಅನ್ನುತ್ತಾರಲ್ಲ ಹಾಗೆಯೇ ಡಿಕೆ ಶಿವಕುಮಾರ್​ಗೆ ತಕ್ಕ ಮಗಳು ಐಶ್ವರ್ಯಾ ಎಂದು ಹೊಗಳಿದರು. ಮಾಲ್ ಬಗ್ಗೆ ಮಾತನಾಡಿ, ”ಗ್ಲೋಬಲ್ ಜೊತೆಗೆ ಡಿವಿನಿಟಿ ಹೆಸರು ಸೇರಿಸಿದ್ದು ಬಹಳ ಖುಷಿಯಾಯಿತು. ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಬೇಕೆಂಬ ಅವರ ಉದ್ದೇಶ ಸಫಲವಾಗಲಿ, ಸಾಕಷ್ಟು ಜನರಿಗೆ ಇಲ್ಲಿ ಉದ್ಯೋಗ ಸಿಗಲಿ” ಎಂದಿದ್ದಾರೆ ಕ್ರೇಜಿಸ್ಟಾರ್.

ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಅವರು ನಟ ರವಿಚಂದ್ರನ್ ಹಾಗೂ ಸುದೀಪ್ ಅವರನ್ನು ಸನ್ಮಾನಿಸಿದರು. ಡಿ.ಕೆ.ಶಿವಕುಮಾರ್ ಪತ್ನಿ, ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಸನ್ಮಾನ ಮಾಡಿದರು. ಅತಿಥಿಗಳಿಗೆ ನೆನಪಿನ ಕಾಣಿಕೆಗಳನ್ನು ವಿತರಣೆ ಮಾಡಲಾಯ್ತು. ಕಾರ್ಯಕ್ರಮವನ್ನು ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಅವರೇ ನಡೆಸಿದರು. ಡಿಕೆಶಿ ಪುತ್ರ ಸಹ ವೇದಿಕೆ ಮೇಲಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:04 pm, Sat, 24 June 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ