AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯತ್ವ ಪಡೆದು, ಮೇಕೆದಾಟು ಹೋರಾಟಕ್ಕೆ ಬೆಂಬಲ ಕೋರಿದ ಡಿಕೆ ಶಿವಕುಮಾರ್​

DK Shivakumar: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​ ಪಾದಯಾತ್ರೆ ನಡೆಸಲಿದೆ. ಅದಕ್ಕೆ ಹಲವು ಸಂಘಟನೆಗಳಿಗೆ ಆಹ್ವಾನ ನೀಡಲಾಗುತ್ತಿದೆ. ಈ ಸಲುವಾಗಿ ಡಿಕೆಶಿ ಇಂದು (ಡಿ.30) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ತೆರಳಿದ್ದರು.

ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯತ್ವ ಪಡೆದು, ಮೇಕೆದಾಟು ಹೋರಾಟಕ್ಕೆ ಬೆಂಬಲ ಕೋರಿದ ಡಿಕೆ ಶಿವಕುಮಾರ್​
ಎನ್​ಎಂ ಸುರೇಶ್​, ಡಿಕೆ ಶಿವಕುಮಾರ್​, ಜೈರಾಜ್​
TV9 Web
| Updated By: ಮದನ್​ ಕುಮಾರ್​|

Updated on:Dec 30, 2021 | 3:46 PM

Share

ರಾಜಕಾರಣಿ ಡಿ.ಕೆ. ಶಿವಕುಮಾರ್​ (DK Shivakumar) ಅವರಿಗೆ ಚಿತ್ರರಂಗದ ಜೊತೆ ಇರುವ ನಂಟು ಇಂದು-ನಿನ್ನೆಯದಲ್ಲ. ವಿತರಕನಾಗಿ, ಪ್ರದರ್ಶಕನಾಗಿ ಅವರು ದಶಕಗಳ ಹಿಂದೆಯೇ ಕೆಲಸ ಮಾಡಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Karnataka Film Chamber of Commerce) ಸದಸ್ಯರೂ ಆಗಿದ್ದರು. ರಾಜಕಾರಣದಲ್ಲಿ ಸಕ್ರಿಯರಾದ ನಂತರ ಚಿತ್ರರಂಗದ (Kannada Film Industry) ಜೊತೆಗಿನ ಅವರ ಒಡನಾಟ ಸ್ವಲ್ಪ ಕಮ್ಮಿ ಆಗಿತ್ತು. ಆದರೆ ಈಗ ಅವರು ಮತ್ತೆ ಸಿನಿಮಾ ಕ್ಷೇತ್ರದ ನಂಟನ್ನು ಗಟ್ಟಿ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ಮಲ್ಟಿಪ್ಲೆಕ್ಸ್​ ಹೊಂದಿರುವ ಡಿ.ಕೆ. ಶಿವಕುಮಾರ್​ ಅವರು ಪ್ರದರ್ಶಕನಾಗಿ ಮತ್ತೆ ಸಕ್ರಿಯರಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯತ್ವ ಪಡೆದುಕೊಂಡಿದ್ದಾರೆ. ಇದೇ ವೇಳೆ ಅವರು ಮೇಕೆದಾಟು (Mekedatu Padayatra) ಹೋರಾಟಕ್ಕೆ  ಕನ್ನಡ ಚಿತ್ರರಂಗವನ್ನು ಆಹ್ವಾನಿಸಿದ್ದಾರೆ.

ಡಿ.ಕೆ. ಶಿವಕುಮಾರ್​ ಅವರು ಗುರುವಾರ (ಡಿ.30) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿದರು. ಮಂಡಳಿಯ ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿದ ಅವರು, ಸದಸ್ಯತ್ವ ಫಾರ್ಮ್​ ಭರ್ತಿ ಮಾಡಿ ಕೊಟ್ಟರು. ವಾಣಿಜ್ಯ ಮಂಡಳಿಗೆ ಭೇಟಿ ನೀಡಿದ ಉದ್ದೇಶವನ್ನೂ ಅವರು ವಿವರಿಸಿದರು.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​ ಪಾದಯಾತ್ರೆ ನಡೆಸಲಿದೆ. ಅದಕ್ಕೆ ಹಲವು ಸಂಘಟನೆಗಳಿಗೆ ಆಹ್ವಾನ ನೀಡಲಾಗುತ್ತಿದೆ. ಈ ಸಲುವಾಗಿ ಡಿಕೆಶಿ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ತೆರಳಿದ್ದರು. ಮಂಡಳಿ ಅಧ್ಯಕ್ಷ ಜೈರಾಜ್​, ಕಾರ್ಯದರ್ಶಿ ನಾಗಣ್ಣ, ಮಾಜಿ ಅಧ್ಯಕ್ಷ ಚಿನ್ನೇಗೌಡ, ಸಾ.ರಾ. ಗೋವಿಂದು ಮುಂತಾದವರು ಉಪಸ್ಥಿತರಿದ್ದರು.

‘ಚಿತ್ರೋದ್ಯಮಕ್ಕೆ ವಾಣಿಜ್ಯ ಮಂಡಳಿಯೇ ಬೇರು. ಕಲಾವಿದರು, ನಿರ್ಮಾಪಕರು, ಪ್ರದರ್ಶಕರು ಎಲ್ಲರೂ ಇಲ್ಲಿಯೇ ಬಂದು ನ್ಯಾಯ ಕೇಳಬೇಕು. ಸುದೀಪ್​, ಶಿವರಾಜ್​ಕುಮಾರ್​, ಯಶ್​, ದರ್ಶನ್​ ಸೇರಿದಂತೆ ಎಲ್ಲ ನಟರಿಗೂ ವಾಣಿಜ್ಯ ಮಂಡಳಿ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಆದರೆ ಯಾರಿಗೂ ಬಲವಂತ ಮಾಡುವುದಿಲ್ಲ’ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ.

‘ನಮ್ಮ ನೀರು ನಮ್ಮ ಹಕ್ಕು. ಪಾದಯಾತ್ರೆಯಲ್ಲಿ ಪ್ರತಿ ದಿನ ನಡೆಯಿರಿ ಅಂತ ನಾನು ಹೇಳಲ್ಲ. ಒಂದು ದಿನ ಅಥವಾ ಅರ್ಧ ದಿನ ಬೇಕಿದ್ದರೂ ನಡೆಯಬಹುದು. ಬಂದು ಈ ಹೋರಾಟಕ್ಕೆ ಬೆಂಬಲ ನೀಡಬೇಕಾದ್ದು ಅವರ ಧರ್ಮ. ಅವರೆಲ್ಲರ ಮೇಲೆ ನನಗೆ ವಿಶ್ವಾಸ ಇದೆ. ಯಾವಾಗಲೂ ಈ ನಾಡಿನ ಹಿತಕ್ಕಾಗಿ ಅವರು ಸಹಾಯ ಮಾಡಿಕೊಂಡು ಬಂದಿದ್ದಾರೆ. ಇದು ಪಕ್ಷಾತೀತ, ಜಾತ್ಯಾತೀತವಾಗಿ ಎಲ್ಲ ವರ್ಗಕ್ಕೂ ಸೇರಿದ ವಿಚಾರ. ವಾಣಿಜ್ಯ ಮಂಡಳಿ ಮೂಲಕ ಎಲ್ಲ ಕಲಾವಿದರಿಗೂ ಆಹ್ವಾನ ತಲುಪಿಸುತ್ತೇನೆ. ಖುದ್ದಾಗಿ ದೂರವಾಣಿ ಕರೆ​ ಮಾಡಿ ಕರೆಯುತ್ತೇನೆ. ಎಲ್ಲರಿಗೂ ಫೋನ್​ ಕರೆ ಮಾಡಲು ಸಾಧ್ಯವಾಗದೇ ಇರಬಹುದು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:

ಮೇಕೆದಾಟು ಯೋಜನೆ ಜಾರಿ ಒತ್ತಾಯಿಸಿ ಜನವರಿ 9ರಂದು ಪಾದಯಾತ್ರೆ : ಪ್ರಕಟಣೆ ಹೊರಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​

ಜೋಡೆತ್ತುಗಳಲ್ಲಿ ಒಂದು ಈಗ ಮೇಕೆದಾಟು ಕಡೆ ಹೊಂಟೈತೆ ಎಂದು ಡಿಕೆ ಶಿವಕುಮಾರ್​ಗೆ ಲೇವಡಿ ಮಾಡಿದ ರೇವಣ್ಣ

Published On - 3:41 pm, Thu, 30 December 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!