ಅಭಿಜಿತ್​ ನಟನೆಯ ‘ಅಡವಿಕಟ್ಟೆ’ ಸಿನಿಮಾದ ಟ್ರೇಲರ್​ ನೋಡಿ ಡಿಕೆ ಸುರೇಶ್ ಹೇಳಿದ್ದೇನು?

ಡಿ.ಕೆ. ಸುರೇಶ್ ಅವರು ಕನ್ನಡದ ‘ಅಡವಿಕಟ್ಟೆ’ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಿದ್ದಾರೆ. ಸಸ್ಪೆನ್ಸ್, ಥ್ರಿಲ್ಲರ್​, ಹಾರರ್​ ಕಥಾಹಂದರ ಇರುವ ಈ ಸಿನಿಮಾದಲ್ಲಿ ಅಭಿಜಿತ್, ನಾಗರಾಜು ಮುಂತಾದವರು ನಟಿಸಿದ್ದಾರೆ. ಟ್ರೇಲರ್​ ನೋಡಿ ಡಿ.ಕೆ. ಸುರೇಶ್​ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಟ್ರೇಲರ್​ ಅನಾವರಣ ಮಾಡಿದ ಅವರಿಗೆ ಅಭಿಜಿತ್​ ಅವರು ಧನ್ಯವಾದ ಅರ್ಪಿಸಿದರು.

ಅಭಿಜಿತ್​ ನಟನೆಯ ‘ಅಡವಿಕಟ್ಟೆ’ ಸಿನಿಮಾದ ಟ್ರೇಲರ್​ ನೋಡಿ ಡಿಕೆ ಸುರೇಶ್ ಹೇಳಿದ್ದೇನು?
ಅಭಿಜಿತ್​, ಡಿ.ಕೆ. ಸುರೇಶ್​, ನಾಗರಾಜು
Follow us
|

Updated on: Jun 30, 2024 | 5:56 PM

ಕನ್ನಡ ಚಿತ್ರರಂಗದ ಅನುಭವಿ ಕಲಾವಿದ ಅಭಿಜಿತ್ ಹಾಗೂ ಹೊಸ ನಟ ನಾಗರಾಜು ಅವರು ‘ಅಡವಿಕಟ್ಟೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾಂಗ್ರೆಸ್​ ಮುಖಂಡ ಡಿ.ಕೆ. ಸುರೇಶ್ ಅವರು ಟ್ರೇಲರ್​ ಬಿಡುಗಡೆ ಮಾಡಿ ಶುಭ ಹಾರೈಸಿದರು. ಟ್ರೇಲರ್​ ನೋಡಿದ ಅವರು ಸಿನಿಮಾ ತಂಡದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು. ಉಮಾ ಎಸ್. ಅವರು ‘ಅಡವಿಕಟ್ಟೆ’ ಸಿನಿಮಾವನ್ನು ನಿರ್ಮಿಸಿದ್ದಾರೆ. ಸಂಜೀವ್ ಗಾವಂಡಿ ಅವರು ನಿರ್ದೇಶನ ಮಾಡಿದ್ದಾರೆ.

‘ಅಡವಿಕಟ್ಟೆ’ ಟ್ರೇಲರ್​ ಬಿಡುಗಡೆ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್​ ಕೂಡ ಬರಬೇಕಾಗಿತ್ತು. ಆದರೆ ಕಾರಣಾಂತರಗಳಿಂದ ಅವರು ಬರಲಿಲ್ಲ. ಅವರ ಪರವಾಗಿ ಟ್ರೇಲರ್​ ಬಿಡುಗಡೆ ಮಾಡಿದ ಡಿ.ಕೆ. ಸುರೇಶ್​ ಅವರು ತಮ್ಮ ಅನಿಸಿಕೆ ತಿಳಿಸಿದರು. ‘ಚಿತ್ರರಂಗದಲ್ಲಿ ಹೊಸ ಪ್ರಯತ್ನಗಳು ಆಗುತ್ತಲೇ ಇರುತ್ತವೆ. ಅಡವಿಕಟ್ಟೆ ತಂಡದವರು ಕೂಡ ಹೊಸತನದ ಪ್ರಯತ್ನ ಮಾಡಿದ್ದಾರೆ. ಈ ಸಿನಿಮಾದ ಕಥೆ ಸಸ್ಪೆನ್ಸ್​ ಆಗಿದೆ. ಟ್ರೇಲರ್​ ನೋಡಿದಾಗ ಹಳ್ಳಿಯ ಜೀವನ, ಯುವಕರ ಮಾನಸಿಕ ಒತ್ತಡ, ಅಡವಿಯಲ್ಲಿ ನಡೆಯುವ ಘಟನೆಗಳು ಈ ಸಿನಿಮಾದಲ್ಲಿ ಇದೆ ಅಂತ ನಾನು ಭಾವಿಸಿದ್ದೇನೆ. ಈ ಸಿನಿಮಾ ತಂಡಕ್ಕೆ ಯಶಸ್ಸು ಸಿಗಲಿ’ ಎಂದು ಡಿ.ಕೆ. ಸುರೇಶ್​ ಹೇಳಿದ್ದಾರೆ.

‘ಅಭಿಜಿತ್​ ಅವರ ನಾಯಕತ್ವದಲ್ಲಿ ಈ ಸಿನಿಮಾ ಮೂಡಿಬಂದಿದೆ. ಹೊಸ ನಟ ನಾಗರಾಜ್​ ಅವರು ನಮ್ಮ ಊರಿನವರು. ಅವರು ಹೊಸ ಪ್ರಯತ್ನ ಮಾಡಿದ್ದಾರೆ. ಇಲ್ಲಿ ಯಾವುದೂ ಅಸಾಧ್ಯ ಎಂಬುದು ಇಲ್ಲ. ಹೊಸ ಪ್ರಯತ್ನಕ್ಕೆ ಯಶಸ್ಸು ಸಿಗುತ್ತದೆ. ಕನ್ನಡಿಗರು ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸಬೇಕು. ಕನ್ನಡ ಉಳಿಯಬೇಕು. ಕನ್ನಡ ಚಿತ್ರರಂಗ ಉಳಿಯಬೇಕು. ಹೆಚ್ಚು ಹೆಚ್ಚು ಹೊಸ ಸಿನಿಮಾಗಳು ಬರಬೇಕು. ಕನ್ನಡ ಚಿತ್ರರಂಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಅದು ಮುಂದುವರಿಯಲಿ’ ಎಂದರು ಡಿ.ಕೆ. ಸುರೇಶ್​.

ಇದನ್ನೂ ಓದಿ: ನೀವು ಮಠಕ್ಕೆ ಕಾಲಿಡಬೇಡಿ: ಡಿಕೆ ಶಿವಕುಮಾರ್​​ಗೆ ಪ್ರಣವಾನಂದ ಸ್ವಾಮೀಜಿ ಹೀಗೆ ಹೇಳಿದ್ಯಾಕೆ?

ಟ್ರೇಲರ್ ಬಿಡುಗಡೆ ಮಾಡಿದ ಡಿ.ಕೆ. ಸುರೇಶ್ ಅವರಿಗೆ ನಟ ಅಭಿಜಿತ್ ಅವರು ಧನ್ಯವಾದ ತಿಳಿಸಿದರು. ‘ಈ ಸಿನಿಮಾದಲ್ಲಿ ನನಗೆ ವಿಶೇಷವಾದ ಪಾತ್ರ ಇದೆ. ಸಿನಿಮಾ ನೋಡಿದಾಗ ಪ್ರೇಕ್ಷಕರಿಗೆ ನನ್ನ ಪಾತ್ರ ಇಷ್ಟ ಆಗುತ್ತದೆ. ಈ ಸಿನಿಮಾ ಚೆನ್ನಾಗಿ ಮೂಡಿಬಂದಿದೆ’ ಎಂದು ಅವರು ಹೇಳಿದರು. ನಟ ನಾಗರಾಜು ಮಾತನಾಡಿ, ‘ನಾನು ಕನಕಪುರ ಬಳಿಯ ಹಳ್ಳಿಯಿಂದ, ಬಡ ಕುಟುಂಬದಿಂದ ಬಂದವನು. ಸಿನಿಮಾದಲ್ಲಿ ನಟಿಸಬೇಕು ಎಂಬುದು ನನ್ನ ಆಸೆ ಆಗಿತ್ತು. ಈಗ ಅದು ನನಸಾಗಿದೆ’ ಎಂದರು.

‘ಅಡವಿಕಟ್ಟೆ’ ಸಿನಿಮಾ ಉತ್ತಮವಾಗಿ ಮೂಡಿಬರಲು ಸಹಕರಿಸಿದ ಚಿತ್ರತಂಡಕ್ಕೆ ನಿರ್ಮಾಪಕಿ ಉಮಾ ಅವರು ಧನ್ಯವಾದ ತಿಳಿಸಿದರು. ನಟಿಯರಾದ ಶಾಂತಿ, ಮಂಜುಳಾ ಮತ್ತು ವಿತರಕ ಶ್ರೀಧರ್ ಕೂಡ ಸಿನಿಮಾ ಕುರಿತು ಮಾತನಾಡಿದರು. ‘ಇದೊಂದು ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾ. ಜೊತೆಗೆ ಹಾರರ್ ಕೂಡ ಇದೆ. ಈ ಸಿನಿಮಾ ಭಿನ್ನವಾಗಿದೆ. ಶೀರ್ಷಿಕೆಯೇ ಹೇಳುವಂತೆ, ಅಡವಿ ಅಂದರೆ ಕಾಡಿನಲ್ಲಿ ನಡೆಯುವ ಕಹಾನಿ ಇದರಲ್ಲಿ ಇದೆ. ಗೋಕಾಕ್ ಸುತ್ತಮುತ್ತ ಶೂಟಿಂಗ್​ ಮಾಡಿದ್ದೇವೆ. ಸದ್ಯದಲ್ಲೇ ಸಿನಿಮಾ ಬಿಡುಗಡೆ ಮಾಡುತ್ತೇವೆ’ ಎಂದು ನಿರ್ದೇಶಕ ಸಂಜೀವ್ ಗಾವಂಡಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಬಸ್​ಗೆ ಚಾಲನೆ ನೀಡಿ ಜನರ ಕುಂದು-ಕೊರತೆ ಅಲಿಸಿದ ಶಾಸಕ ಸಿಮೆಂಟ್ ಮಂಜು
ಬಸ್​ಗೆ ಚಾಲನೆ ನೀಡಿ ಜನರ ಕುಂದು-ಕೊರತೆ ಅಲಿಸಿದ ಶಾಸಕ ಸಿಮೆಂಟ್ ಮಂಜು
ಹಾಸನ: ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ
ಹಾಸನ: ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ