AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa: ‘ಕೆಜಿಎಫ್’ ಜೊತೆ ‘ಕಬ್ಜ’ ಹೋಲಿಕೆ ಬೇಡ: ಕಾರಣ ನೀಡಿದ ಉಪೇಂದ್ರ

ಕೆಜಿಎಫ್ ಸಿನಿಮಾದೊಂದಿಗೆ ಕಬ್ಜ ಸಿನಿಮಾವನ್ನು ಹೋಲಿಸಬೇಡಿ ಎಂದು ನಟ ಉಪೇಂದ್ರ ಹೇಳಿದ್ದಾರೆ. ಇದಕ್ಕೆ ಕಾರಣವನ್ನೂ ಉಪ್ಪಿ ನೀಡಿದ್ದಾರೆ.

Kabzaa: 'ಕೆಜಿಎಫ್' ಜೊತೆ 'ಕಬ್ಜ' ಹೋಲಿಕೆ ಬೇಡ: ಕಾರಣ ನೀಡಿದ ಉಪೇಂದ್ರ
ಕಬ್ಜ
ಮಂಜುನಾಥ ಸಿ.
| Edited By: |

Updated on:Mar 09, 2023 | 5:40 PM

Share

ಉಪೇಂದ್ರ (Upendra) ನಟಿಸಿ, ಆರ್ ಚಂದ್ರು (R Chandru) ನಿರ್ದೇಶನ ಮಾಡಿರುವ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ (Kabzaa) ಭಾರತದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಸಿನಿಮಾದ ಪ್ರಚಾರ ಜೋರಾಗಿ ನಡೆಯುತ್ತಿದ್ದು, ಉಪೇಂದ್ರ, ಸುದೀಪ್, ನಾಯಕಿ ಶ್ರೆಯಾ ಶಿರಿನ್ ಇನ್ನಿತರರು ಮುಂಬೈನಲ್ಲಿ ಸಿನಿಮಾದ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಸಿನಿಮಾದ ಟೀಸರ್, ಟ್ರೈಲರ್ ನೋಡಿದ ಬಹುತೇಕರು ಇದು ಮತ್ತೊಂದು ಕೆಜಿಎಫ್ ಎಂದಿದ್ದರು, ಆದರೆ ಇದನ್ನು ಅಲ್ಲಗಳೆದಿರುವ ಉಪೇಂದ್ರ, ‘ಕೆಜಿಎಫ್’ ಜೊತೆ ಕಬ್ಜ ಸಿನಿಮಾವನ್ನು ಹೋಲಿಸಬೇಡಿ ಎಂದಿದ್ದಾರೆ.

ಮುಂಬೈನಲ್ಲಿ ನೀಡಿರುವ ಸಂದರ್ಶನವೊಂದರಲ್ಲಿ ಮಾತನಾಡಿರುವ ಉಪೇಂದ್ರ, ”ಕೆಜಿಎಫ್’ ಸಿನಿಮಾದೊಂದಿಗೆ ‘ಕಬ್ಜ’ ಸಿನಿಮಾವನ್ನು ಹೋಲಿಸಬೇಡಿ. ಎರಡೂ ಬೇರೆ-ಬೇರೆ ಸಿನಿಮಾಗಳು. ಟೀಸರ್ ನೋಡಿದ ಹಲವರು ‘ಕೆಜಿಎಫ್’ ಸಿನಿಮಾದಂತಿದೆ ಎಂದಿದ್ದರು ಆದರೆ ಟ್ರೈಲರ್ ನೋಡಿದ ಮೇಲೆ ಗೊತ್ತಾಗಿದೆ ಅದೇ ಬೇರೆ ಕತೆ ಇದೇ ಬೇರೆ ಕತೆ ಎಂಬುದು. ಸಿನಿಮಾದ ಲುಕ್, ಫೀಲ್ ಒಂದೇ ಥರ ಇದೆಯಾದರೂ ಎರಡೂ ಸಂಪೂರ್ಣ ಬೇರೆಯದ್ದೇ ಕತೆಗಳು” ಎಂದಿದ್ದಾರೆ.

ಸಿನಿಮಾದ ಟೀಸರ್ ಬಿಡುಗಡೆ ಆದಾಗಲಂತೂ ‘ಕೆಜಿಎಫ್’ ಕತೆಯನ್ನೇ ಕಬ್ಜ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿತ್ತು, ಆಗ ಮಾತನಾಡಿದ್ದ ಉಪೇಂದ್ರ, ”ಕೆಜಿಎಫ್’ ಥರ ಸಿನಿಮಾ ಮಾಡಿ ಅಂತಾರೆ, ‘ಕೆಜಿಎಫ್’ ಥರ ಮಾಡಿದರೆ ‘ಕೆಜಿಎಫ್’ ಥರಹ ಮಾಡಿದ್ದೀರಿ ಅಂತಾರೆ. ಏನು ಮಾಡಿದರೂ ಕೆಲವರು ಟೀಕೆ ಮಾಡ್ತಾರೆ” ಎಂದು ತಮಾಷೆ ಮಾಡಿದ್ದರು.

ಇತ್ತೀಚೆಗೆ ಬಿಡುಗಡೆ ಆದ ಟ್ರೈಲರ್​ನಲ್ಲಿ ‘ಕಬ್ಜ’ ಸಿನಿಮಾದ ಕತೆಯ ಕೆಲವು ಭಾಗಗಳು ರಿವೀಲ್ ಆಗಿದ್ದು ‘ಕೆಜಿಎಫ್’ ಕತೆಗೂ ‘ಕಬ್ಜ’ ಸಿನಿಮಾದ ಕತೆಗೂ ಸಾಕಷ್ಟು ಅಂತರ ಇರುವುದು ತಿಳಿದು ಬರುತ್ತಿದೆ. ‘ಕೆಜಿಎಫ್’ ಸಿನಿಮಾದಲ್ಲಿ ನಾಯಕ ಆರಂಭದಿಂದಲೇ ರೌಡಿ ಆಗಿರುತ್ತಾನೆ. ಆದರೆ ‘ಕಬ್ಜ’ ಸಿನಿಮಾದಲ್ಲಿ ಉಪೇಂದ್ರ ಏರ್​ಪೋರ್ಸ್ ಅಧಿಕಾರಿಯಾಗಿರುತ್ತಾರೆ. ‘ಕಬ್ಜ’ ಸಿನಿಮಾವು ಸ್ವಾತಂತ್ರ್ಯ ಪೂರ್ವದ ಕತೆಯನ್ನು ಹೊಂದಿದೆ. ಆದರೆ ‘ಕೆಜಿಎಫ್’ ಸ್ವಾತಂತ್ರ್ಯಾನಂತರದ ಕತೆಯನ್ನು ಒಳಗೊಂಡಿದೆ. ‘ಕೆಜಿಎಫ್’ ನಲ್ಲಿ ರಾಕಿಭಾಯ್ ಹೊರತಾಗಿ ಇನ್ಯಾವುದೇ ನಾಯಕ ಪಾತ್ರಗಳು ಇರಲಿಲ್ಲ ಆದರೆ ‘ಕಬ್ಜ’ ಸಿನಿಮಾದಲ್ಲಿ ಸುದೀಪ್, ಶಿವಣ್ಣ ಅವರುಗಳು ಮುಖ್ಯ ಪಾತ್ರದಲ್ಲಿದ್ದಾರೆ. ಇನ್ನೂ ಹಲವು ವ್ಯತ್ಯಾಸಗಳು ಎರಡೂ ಸಿನಿಮಾಕ್ಕೆ ಇವೆ.

ಆದರೆ ಕೆಜಿಎಫ್ ಮಾದರಿಯ ಲುಕ್ ಹಾಗೂ ಟೋನ್ ಕಬ್ಜ ಸಿನಿಮಾಕ್ಕೂ ಇದೆ. ಅದೇ ಕಪ್ಪು ಹಿನ್ನೆಲೆಯಲ್ಲಿಯೇ ‘ಕಬ್ಜ’ ಸಿನಿಮಾವನ್ನು ಆರ್ ಚಂದ್ರು ಚಿತ್ರೀಕರಿಸಿದ್ದಾರೆ. ಈ ಬಗ್ಗೆ ಈ ಹಿಂದೆ ಮಾತನಾಡಿದ್ದ ಆರ್ ಚಂದ್ರು, ”ಕೆಜಿಎಫ್’ ಸಿನಿಮಾದಿಂದ ಸ್ಪೂರ್ತಿ ಪಡೆದೇ ನಾನು ಈ ಸಿನಿಮಾ ಮಾಡಿದ್ದೇನೆ. ಅದೇ ರೀತಿಯ ಫೀಲ್ ನೀಡುವುದು ನನ್ನ ಉದ್ದೇಶವಾಗಿತ್ತು. ಅದೇ ಮಾದರಿಯ ಫೀಲ್ ತರಲು ಬಹಳ ಶ್ರಮಪಟ್ಟಿದ್ದೇವೆ” ಎಂದಿದ್ದರು. ಆರ್ ಚಂದ್ರು ಶ್ರಮ ಫಲ ನೀಡಿರುವುದು ಟೀಸರ್ ಹಾಗೂ ಟ್ರೈಲರ್​ನಿಂದ ತಿಳಿದು ಬರುತ್ತಿದೆ.

‘ಕಬ್ಜ’ ಸಿನಿಮಾವು ಮಾರ್ಚ್ 17ಕ್ಕೆ ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದೆ. ಸಿನಿಮಾದಲ್ಲಿ ಉಪೇಂದ್ರ, ಶ್ರಿಯಾ ಶಿರಿನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದರೆ. ಸುದೀಪ್, ಶಿವರಾಜ್ ಕುಮಾರ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:32 pm, Thu, 9 March 23

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ