AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Doddanna Death Hoax: ದೊಡ್ಡಣ್ಣ ಮೃತಪಟ್ಟಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಅಸಲಿ ವಿಚಾರ ಏನು?

ಇಂದು ಮುಂಜಾನೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ದೊಡ್ಡಣ್ಣ ಅವರ ಫೋಟೋವನ್ನು ಹಾಕಿ RIP ಎಂದು ಬರೆದುಕೊಂಡಿದ್ದರು. ಇದು ನಿಜ ಇರಬಹುದು ಎಂದು ಕೆಲವರು ಭಾವಿಸಿದ್ದರು.

Doddanna Death Hoax: ದೊಡ್ಡಣ್ಣ ಮೃತಪಟ್ಟಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಅಸಲಿ ವಿಚಾರ ಏನು?
ದೊಡ್ಡಣ್ಣ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:May 05, 2021 | 5:56 PM

Share

ಹಿರಿಯ ನಟ ದೊಡ್ಡಣ್ಣ ಮೃತಪಟ್ಟಿದ್ದಾರೆ ಎನ್ನುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಬುಧವಾರ (ಮೇ 5​) ಕಾಡ್ಗಿಚ್ಚಿನಂತೆ ಹಬ್ಬಿತ್ತು. ಅನೇಕರಿಗೆ ಈ ವಿಚಾರ ಶಾಕ್​ ನೀಡಿತ್ತು. ‘ಇದು ಕಿಡಿಗೇಡಿಗಳ ಕೆಲಸ. ನಾನು ಆರಾಮಾಗಿದ್ದೇನೆ’ ಎಂದು ಸ್ವತಃ ದೊಡ್ಡಣ್ಣ ಸ್ಪಷ್ಟನೆ ನೀಡಿದ್ದಾರೆ.

ಇಂದು ಮುಂಜಾನೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ದೊಡ್ಡಣ್ಣ ಅವರ ಫೋಟೋವನ್ನು ಹಾಕಿ RIP ಎಂದು ಬರೆದುಕೊಂಡಿದ್ದರು. ಕೊರೊನಾದಿಂದ ಚಿತ್ರರಂಗದ ಅನೇಕರು ಮೃತಪಡುತ್ತಿದ್ದಾರೆ. ಇದು ಸಿನಿಪ್ರಿಯರಿಗೆ ಸಾಕಷ್ಟು ಬೇಸರ ತರಿಸಿದೆ. ಇತ್ತೀಚೆಗೆ ನಿರ್ಮಾಪಕ ಕೋಟಿ ರಾಮು ತೀರಿಕೊಂಡಿದ್ದು ಕನ್ನಡ ಚಿತ್ರರಂಗಕ್ಕೆ ದೊಡ್ಡ ಹೊಡೆತ ನೀಡಿತ್ತು. ಹೀಗಾಗಿ, ದೊಡ್ಡ ಮೃತಪಟ್ಟಿದ್ದಾರೆ ಎಂಬುದು ನಿಜ ಇರಬಹುದು ಎಂದು ಕೆಲವರು ಭಾವಿಸಿದ್ದರು.

ಈ ವಿಚಾರ ದೊಡ್ಡಣ್ಣ ಅವರ ಕಿವಿಗೂ ಬಿದ್ದಿದೆ. ಈ ಬಗ್ಗೆ ಅವರು ವಿಡಿಯೋ ಒಂದನ್ನು ಮಾಡಿ ಹಾಕಿದ್ದಾರೆ. ‘ಎಲ್ಲರಿಗೂ ನನ್ನ ನಮಸ್ಕಾರ. ಇವತ್ತು ಮುಂಜಾನೆ ಸಾಮಾಜಿಕ ಜಾಲತಾಣದಲ್ಲಿ ಯಾರೋ ಕಿಡಿಗೇಡಿಗಳು ನನ್ನ ಫೋಟೋ ಹಾಕಿ RIP ಎಂದು ಬರೆದಿದ್ದರು. ಹೀಗಾಗಿ ದೊಡ್ಡಣ್ಣ ನಿಧನರಾದರು ಎನ್ನುವ ಸುದ್ದಿ ಹರಿದಾಡಿತ್ತು. ಮಾಧ್ಯಮ ಮಿತ್ರರು, ನನ್ನ ಗೆಳೆಯರು, ಅಭಿಮಾನಿಗಳು ಕರೆ ಮಾಡುತ್ತಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಆರೋಗ್ಯವಾಗಿದ್ದೇನೆ. ಯಾರೂ ಭಯಪಡುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.

ದೊಡ್ಡಣ್ಣ ವಿಡಿಯೋ ಹಾಕುವುದಕ್ಕೂ ಮೊದಲು ಹಿರಿಯ ಕಲಾವಿದ ಡಿಂಗ್ರಿ ನಾಗರಾಜ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ದೊಡ್ಡಣ್ಣ ಕ್ಷೇಮವಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಸುಳ್ಳು ಸುದ್ದಿ ಎಂದು ಅವರು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ತಲೆ ಬಾಗಿ ಕ್ಷಮೆ ಕೋರುವೆ; ರಾಮು ನಿಧನದ ಬಗ್ಗೆ ಮಾಲಾಶ್ರೀಗೆ ಜಗ್ಗೇಶ್​ ಹೀಗೆ ಹೇಳಿದ್ದೇಕೆ?

Published On - 5:20 pm, Wed, 5 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ