AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ

ಆನ್​ಲೈನ್​ನಲ್ಲಿ ಇತ್ತೀಚೆಗೆ ವಂಚನೆ ಮಾಡುವ ಜಾಲಗಳ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹುಟ್ಟಿಕೊಳ್ಳುತ್ತಿದೆ. ನಿಮ್ಮ ಬ್ಯಾಂಕ್​ ಖಾತೆಗೆ ಕನ್ನ ಹಾಕುವವರದ್ದೇ ಒಂದು ಗುಂಪಾದರೆ, ಅವಕಾಶ ನೀಡುತ್ತೇನೆಂದು ಪಂಗನಾಮ ಹಾಕುವವರದ್ದು ಮತ್ತೊಂದು ಗುಂಪು. ಇದೇ ರೀತಿ ಡಾಲಿ ಧನಂಜಯ್​ ಹೆಸರಲ್ಲಿ ಅವಕಾಶ ನೀಡುತ್ತೇನೆಂದು ಪೋಸ್ಟ್​​ಗಳನ್ನು ಹಾಕುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಆ ಬಗ್ಗೆ ಖುದ್ದು ಧನಂಜಯ್​ ಎಚ್ಚರಿಕೆ ನೀಡಿದ್ದಾರೆ.

ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ
ಧನಂಜಯ್
Digi Tech Desk
| Edited By: |

Updated on:Apr 03, 2026 | 6:19 AM

Share

ಆನ್​ಲೈನ್​ನಲ್ಲಿ ಇತ್ತೀಚೆಗೆ ವಂಚನೆ ಮಾಡುವ ಜಾಲಗಳ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹುಟ್ಟಿಕೊಳ್ಳುತ್ತಿದೆ. ನಿಮ್ಮ ಬ್ಯಾಂಕ್​ ಖಾತೆಗೆ ಕನ್ನ ಹಾಕುವವರದ್ದೇ ಒಂದು ಗುಂಪಾದರೆ, ಅವಕಾಶ ನೀಡುತ್ತೇನೆಂದು ಪಂಗನಾಮ ಹಾಕುವವರದ್ದು ಮತ್ತೊಂದು ಗುಂಪು. ಇದೇ ರೀತಿ ಡಾಲಿ ಧನಂಜಯ್​ ಹೆಸರಲ್ಲಿ ಅವಕಾಶ ನೀಡುತ್ತೇನೆಂದು ಪೋಸ್ಟ್​​ಗಳನ್ನು ಹಾಕುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಆ ಬಗ್ಗೆ ಖುದ್ದು ಧನಂಜಯ್​ ಎಚ್ಚರಿಕೆ ನೀಡಿದ್ದಾರೆ.

ಟಗರು ಸಿನಿಮಾದಲ್ಲಿ ಡಾಲಿ ಹೆಸರಿನ ರೌಡಿ ಆಗಿ ಕಾಣಿಸಿಕೊಂಡಿದ್ದ ಧನಂಜಯ್​, ನಂತರ ಅದೇ ಹೆಸರಲ್ಲಿ ಖ್ಯಾತಿ ಪಡೆದುಕೊಂಡು ಬಿಟ್ಟರು. ಈಗಲೂ ಕೂಡ ಅನೇಕ ನಿರ್ದೇಶಕರು ಡಾಲಿ ಧನಂಜಯ್​ ಕಾಲ್​ಶೀಟ್​ಗೆ ಕಾದು ನಿಲ್ಲುತ್ತಾರೆ. ಈ ಮಧ್ಯೆ ಅನೇಕರು, ಧನಂಜಯ್​ ಹೆಸರನ್ನು ಬಳಕೆ ಮಾಡಿಕೊಂಡು ಅವಕಾಶ ನೀಡುವುದಾಗಿ ನಕಲಿ ಪೋಸ್ಟ್​ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಧನಂಜಯ್​ ತಮ್ಮ ಟ್ವಿಟರ್ ಅಕೌಂಟ್​ನಲ್ಲಿ ಫೇಸ್​ಬುಕ್​ನಲ್ಲಿ ಪ್ರಕಟವಾಗಿದ್ದ ಸ್ಕ್ರೀನ್​ಶಾಟ್​ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಅದರಲ್ಲಿ, ಹೊಸ ಕನ್ನಡ ಸಿನಿಮಾಗೆ ನಾವು ಪೋಷಕ ಪಾತ್ರಧಾರಿಗಳನ್ನು ಹುಡುಕುತ್ತಿದ್ದೇವೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್​ ನಟಿಸುತ್ತಿದ್ದಾರೆ. ಯಾರಿಗಾದರೂ ಆಸಕ್ತಿ ಇದ್ದರೆ ಇನ್​ಬಾಕ್ಸ್​ನಲ್ಲಿ ಮೆಸೇಜ್​ ಮಾಡಿ. ವೃತ್ತಿಪರರಿಗೆ ಮಾತ್ರ ಆದ್ಯತೆ ಎಂದಿತ್ತು.

ಈ ಬಗ್ಗೆ ಬರೆದಿರುವ ಧನಂಜಯ್​, ಈ ರೀತಿಯ ಪೋಸ್ಟ್​​​ಗಳನ್ನು ನಂಬಿ ಮೋಸ ಹೋಗಬೇಡಿ. ಈ ತರಹ ಎರಡು ಮೂರು ಘಟನೆಗಳು ಗಮನಕ್ಕೆ ಬಂದಿವೆ. ಸಾಮಾಜಿಕ ಜಾಲತಾಣದಲ್ಲಿ ಬರುವ ಯಾವುದೇ ವಿಚಾರವನ್ನು ನಂಬುವ ಮೊದಲು ಪರಿಶೀಲನೆ ನಡೆಸಿ ಎಂದು ಕೋರಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ಡಾಲಿ ಧನಂಜಯ್​ 10ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಲಗ, ಯುವರತ್ನ ಸೇರಿ ಪ್ರಮುಖ ಸಿನಿಮಾಗಳು ಅವರ ಕೈಯಲ್ಲಿವೆ. ತೆಲುಗಿನ ಪುಷ್ಪ ಚಿತ್ರದಲ್ಲೂ ಧನಂಜಯ್​ ಬಣ್ಣ ಹಚ್ಚುತ್ತಿದ್ದಾರೆ.

Published On - 2:45 pm, Mon, 7 December 20

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ