AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ

ಆನ್​ಲೈನ್​ನಲ್ಲಿ ಇತ್ತೀಚೆಗೆ ವಂಚನೆ ಮಾಡುವ ಜಾಲಗಳ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹುಟ್ಟಿಕೊಳ್ಳುತ್ತಿದೆ. ನಿಮ್ಮ ಬ್ಯಾಂಕ್​ ಖಾತೆಗೆ ಕನ್ನ ಹಾಕುವವರದ್ದೇ ಒಂದು ಗುಂಪಾದರೆ, ಅವಕಾಶ ನೀಡುತ್ತೇನೆಂದು ಪಂಗನಾಮ ಹಾಕುವವರದ್ದು ಮತ್ತೊಂದು ಗುಂಪು. ಇದೇ ರೀತಿ ಡಾಲಿ ಧನಂಜಯ್​ ಹೆಸರಲ್ಲಿ ಅವಕಾಶ ನೀಡುತ್ತೇನೆಂದು ಪೋಸ್ಟ್​​ಗಳನ್ನು ಹಾಕುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಆ ಬಗ್ಗೆ ಖುದ್ದು ಧನಂಜಯ್​ ಎಚ್ಚರಿಕೆ ನೀಡಿದ್ದಾರೆ.

ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ
ಧನಂಜಯ್
Kannada Tech Desk
| Edited By: |

Updated on:Apr 03, 2026 | 6:19 AM

Share

ಆನ್​ಲೈನ್​ನಲ್ಲಿ ಇತ್ತೀಚೆಗೆ ವಂಚನೆ ಮಾಡುವ ಜಾಲಗಳ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹುಟ್ಟಿಕೊಳ್ಳುತ್ತಿದೆ. ನಿಮ್ಮ ಬ್ಯಾಂಕ್​ ಖಾತೆಗೆ ಕನ್ನ ಹಾಕುವವರದ್ದೇ ಒಂದು ಗುಂಪಾದರೆ, ಅವಕಾಶ ನೀಡುತ್ತೇನೆಂದು ಪಂಗನಾಮ ಹಾಕುವವರದ್ದು ಮತ್ತೊಂದು ಗುಂಪು. ಇದೇ ರೀತಿ ಡಾಲಿ ಧನಂಜಯ್​ ಹೆಸರಲ್ಲಿ ಅವಕಾಶ ನೀಡುತ್ತೇನೆಂದು ಪೋಸ್ಟ್​​ಗಳನ್ನು ಹಾಕುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಆ ಬಗ್ಗೆ ಖುದ್ದು ಧನಂಜಯ್​ ಎಚ್ಚರಿಕೆ ನೀಡಿದ್ದಾರೆ.

ಟಗರು ಸಿನಿಮಾದಲ್ಲಿ ಡಾಲಿ ಹೆಸರಿನ ರೌಡಿ ಆಗಿ ಕಾಣಿಸಿಕೊಂಡಿದ್ದ ಧನಂಜಯ್​, ನಂತರ ಅದೇ ಹೆಸರಲ್ಲಿ ಖ್ಯಾತಿ ಪಡೆದುಕೊಂಡು ಬಿಟ್ಟರು. ಈಗಲೂ ಕೂಡ ಅನೇಕ ನಿರ್ದೇಶಕರು ಡಾಲಿ ಧನಂಜಯ್​ ಕಾಲ್​ಶೀಟ್​ಗೆ ಕಾದು ನಿಲ್ಲುತ್ತಾರೆ. ಈ ಮಧ್ಯೆ ಅನೇಕರು, ಧನಂಜಯ್​ ಹೆಸರನ್ನು ಬಳಕೆ ಮಾಡಿಕೊಂಡು ಅವಕಾಶ ನೀಡುವುದಾಗಿ ನಕಲಿ ಪೋಸ್ಟ್​ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಧನಂಜಯ್​ ತಮ್ಮ ಟ್ವಿಟರ್ ಅಕೌಂಟ್​ನಲ್ಲಿ ಫೇಸ್​ಬುಕ್​ನಲ್ಲಿ ಪ್ರಕಟವಾಗಿದ್ದ ಸ್ಕ್ರೀನ್​ಶಾಟ್​ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಅದರಲ್ಲಿ, ಹೊಸ ಕನ್ನಡ ಸಿನಿಮಾಗೆ ನಾವು ಪೋಷಕ ಪಾತ್ರಧಾರಿಗಳನ್ನು ಹುಡುಕುತ್ತಿದ್ದೇವೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್​ ನಟಿಸುತ್ತಿದ್ದಾರೆ. ಯಾರಿಗಾದರೂ ಆಸಕ್ತಿ ಇದ್ದರೆ ಇನ್​ಬಾಕ್ಸ್​ನಲ್ಲಿ ಮೆಸೇಜ್​ ಮಾಡಿ. ವೃತ್ತಿಪರರಿಗೆ ಮಾತ್ರ ಆದ್ಯತೆ ಎಂದಿತ್ತು.

ಈ ಬಗ್ಗೆ ಬರೆದಿರುವ ಧನಂಜಯ್​, ಈ ರೀತಿಯ ಪೋಸ್ಟ್​​​ಗಳನ್ನು ನಂಬಿ ಮೋಸ ಹೋಗಬೇಡಿ. ಈ ತರಹ ಎರಡು ಮೂರು ಘಟನೆಗಳು ಗಮನಕ್ಕೆ ಬಂದಿವೆ. ಸಾಮಾಜಿಕ ಜಾಲತಾಣದಲ್ಲಿ ಬರುವ ಯಾವುದೇ ವಿಚಾರವನ್ನು ನಂಬುವ ಮೊದಲು ಪರಿಶೀಲನೆ ನಡೆಸಿ ಎಂದು ಕೋರಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ಡಾಲಿ ಧನಂಜಯ್​ 10ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಲಗ, ಯುವರತ್ನ ಸೇರಿ ಪ್ರಮುಖ ಸಿನಿಮಾಗಳು ಅವರ ಕೈಯಲ್ಲಿವೆ. ತೆಲುಗಿನ ಪುಷ್ಪ ಚಿತ್ರದಲ್ಲೂ ಧನಂಜಯ್​ ಬಣ್ಣ ಹಚ್ಚುತ್ತಿದ್ದಾರೆ.

Published On - 2:45 pm, Mon, 7 December 20

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ