AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ

ಟಗರು ಸಿನಿಮಾದಲ್ಲಿ ಡಾಲಿ ಹೆಸರಿನ ರೌಡಿ ಆಗಿ ಕಾಣಿಸಿಕೊಂಡಿದ್ದ ಧನಂಜಯ್ ಈಗ ಬಹುಬೇಡಿಕೆಯ ನಟ. ಧನಂಜಯ್​ ಹೆಸರನ್ನು ಬಳಕೆ ಮಾಡಿಕೊಂಡು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ
ಧನಂಜಯ್
Skanda
| Edited By: |

Updated on:Dec 07, 2020 | 2:46 PM

Share

ಆನ್​ಲೈನ್​ನಲ್ಲಿ ಇತ್ತೀಚೆಗೆ ವಂಚನೆ ಮಾಡುವ ಜಾಲಗಳ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹುಟ್ಟಿಕೊಳ್ಳುತ್ತಿದೆ. ನಿಮ್ಮ ಬ್ಯಾಂಕ್​ ಖಾತೆಗೆ ಕನ್ನ ಹಾಕುವವರದ್ದೇ ಒಂದು ಗುಂಪಾದರೆ, ಅವಕಾಶ ನೀಡುತ್ತೇನೆಂದು ಪಂಗನಾಮ ಹಾಕುವವರದ್ದು ಮತ್ತೊಂದು ಗುಂಪು. ಇದೇ ರೀತಿ ಡಾಲಿ ಧನಂಜಯ್​ ಹೆಸರಲ್ಲಿ ಅವಕಾಶ ನೀಡುತ್ತೇನೆಂದು ಪೋಸ್ಟ್​​ಗಳನ್ನು ಹಾಕುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಆ ಬಗ್ಗೆ ಖುದ್ದು ಧನಂಜಯ್​ ಎಚ್ಚರಿಕೆ ನೀಡಿದ್ದಾರೆ.

ಟಗರು ಸಿನಿಮಾದಲ್ಲಿ ಡಾಲಿ ಹೆಸರಿನ ರೌಡಿ ಆಗಿ ಕಾಣಿಸಿಕೊಂಡಿದ್ದ ಧನಂಜಯ್​, ನಂತರ ಅದೇ ಹೆಸರಲ್ಲಿ ಖ್ಯಾತಿ ಪಡೆದುಕೊಂಡು ಬಿಟ್ಟರು. ಈಗಲೂ ಕೂಡ ಅನೇಕ ನಿರ್ದೇಶಕರು ಡಾಲಿ ಧನಂಜಯ್​ ಕಾಲ್​ಶೀಟ್​ಗೆ ಕಾದು ನಿಲ್ಲುತ್ತಾರೆ. ಈ ಮಧ್ಯೆ ಅನೇಕರು, ಧನಂಜಯ್​ ಹೆಸರನ್ನು ಬಳಕೆ ಮಾಡಿಕೊಂಡು ಅವಕಾಶ ನೀಡುವುದಾಗಿ ನಕಲಿ ಪೋಸ್ಟ್​ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಧನಂಜಯ್​ ತಮ್ಮ ಟ್ವಿಟರ್ ಅಕೌಂಟ್​ನಲ್ಲಿ ಫೇಸ್​ಬುಕ್​ನಲ್ಲಿ ಪ್ರಕಟವಾಗಿದ್ದ ಸ್ಕ್ರೀನ್​ಶಾಟ್​ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಅದರಲ್ಲಿ, ಹೊಸ ಕನ್ನಡ ಸಿನಿಮಾಗೆ ನಾವು ಪೋಷಕ ಪಾತ್ರಧಾರಿಗಳನ್ನು ಹುಡುಕುತ್ತಿದ್ದೇವೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್​ ನಟಿಸುತ್ತಿದ್ದಾರೆ. ಯಾರಿಗಾದರೂ ಆಸಕ್ತಿ ಇದ್ದರೆ ಇನ್​ಬಾಕ್ಸ್​ನಲ್ಲಿ ಮೆಸೇಜ್​ ಮಾಡಿ. ವೃತ್ತಿಪರರಿಗೆ ಮಾತ್ರ ಆದ್ಯತೆ ಎಂದಿತ್ತು.

ಈ ಬಗ್ಗೆ ಬರೆದಿರುವ ಧನಂಜಯ್​, ಈ ರೀತಿಯ ಪೋಸ್ಟ್​​​ಗಳನ್ನು ನಂಬಿ ಮೋಸ ಹೋಗಬೇಡಿ. ಈ ತರಹ ಎರಡು ಮೂರು ಘಟನೆಗಳು ಗಮನಕ್ಕೆ ಬಂದಿವೆ. ಸಾಮಾಜಿಕ ಜಾಲತಾಣದಲ್ಲಿ ಬರುವ ಯಾವುದೇ ವಿಚಾರವನ್ನು ನಂಬುವ ಮೊದಲು ಪರಿಶೀಲನೆ ನಡೆಸಿ ಎಂದು ಕೋರಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ಡಾಲಿ ಧನಂಜಯ್​ 10ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಲಗ, ಯುವರತ್ನ ಸೇರಿ ಪ್ರಮುಖ ಸಿನಿಮಾಗಳು ಅವರ ಕೈಯಲ್ಲಿವೆ. ತೆಲುಗಿನ ಪುಷ್ಪ ಚಿತ್ರದಲ್ಲೂ ಧನಂಜಯ್​ ಬಣ್ಣ ಹಚ್ಚುತ್ತಿದ್ದಾರೆ.

ಮರಳಿ ಬನ್ನಿ ಚಿತ್ರಮಂದಿರಗಳಿಗೆ.. ಕಲಾವಿದರಿಂದ ಪ್ರೇಕ್ಷಕ ಮಹಾಪ್ರಭುಗೆ ವೀಡಿಯೊ ಆಹ್ವಾನ!

Published On - 2:45 pm, Mon, 7 December 20

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ