ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ

ಟಗರು ಸಿನಿಮಾದಲ್ಲಿ ಡಾಲಿ ಹೆಸರಿನ ರೌಡಿ ಆಗಿ ಕಾಣಿಸಿಕೊಂಡಿದ್ದ ಧನಂಜಯ್ ಈಗ ಬಹುಬೇಡಿಕೆಯ ನಟ. ಧನಂಜಯ್​ ಹೆಸರನ್ನು ಬಳಕೆ ಮಾಡಿಕೊಂಡು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ
ಧನಂಜಯ್
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 07, 2020 | 2:46 PM

ಆನ್​ಲೈನ್​ನಲ್ಲಿ ಇತ್ತೀಚೆಗೆ ವಂಚನೆ ಮಾಡುವ ಜಾಲಗಳ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹುಟ್ಟಿಕೊಳ್ಳುತ್ತಿದೆ. ನಿಮ್ಮ ಬ್ಯಾಂಕ್​ ಖಾತೆಗೆ ಕನ್ನ ಹಾಕುವವರದ್ದೇ ಒಂದು ಗುಂಪಾದರೆ, ಅವಕಾಶ ನೀಡುತ್ತೇನೆಂದು ಪಂಗನಾಮ ಹಾಕುವವರದ್ದು ಮತ್ತೊಂದು ಗುಂಪು. ಇದೇ ರೀತಿ ಡಾಲಿ ಧನಂಜಯ್​ ಹೆಸರಲ್ಲಿ ಅವಕಾಶ ನೀಡುತ್ತೇನೆಂದು ಪೋಸ್ಟ್​​ಗಳನ್ನು ಹಾಕುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಆ ಬಗ್ಗೆ ಖುದ್ದು ಧನಂಜಯ್​ ಎಚ್ಚರಿಕೆ ನೀಡಿದ್ದಾರೆ.

ಟಗರು ಸಿನಿಮಾದಲ್ಲಿ ಡಾಲಿ ಹೆಸರಿನ ರೌಡಿ ಆಗಿ ಕಾಣಿಸಿಕೊಂಡಿದ್ದ ಧನಂಜಯ್​, ನಂತರ ಅದೇ ಹೆಸರಲ್ಲಿ ಖ್ಯಾತಿ ಪಡೆದುಕೊಂಡು ಬಿಟ್ಟರು. ಈಗಲೂ ಕೂಡ ಅನೇಕ ನಿರ್ದೇಶಕರು ಡಾಲಿ ಧನಂಜಯ್​ ಕಾಲ್​ಶೀಟ್​ಗೆ ಕಾದು ನಿಲ್ಲುತ್ತಾರೆ. ಈ ಮಧ್ಯೆ ಅನೇಕರು, ಧನಂಜಯ್​ ಹೆಸರನ್ನು ಬಳಕೆ ಮಾಡಿಕೊಂಡು ಅವಕಾಶ ನೀಡುವುದಾಗಿ ನಕಲಿ ಪೋಸ್ಟ್​ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಧನಂಜಯ್​ ತಮ್ಮ ಟ್ವಿಟರ್ ಅಕೌಂಟ್​ನಲ್ಲಿ ಫೇಸ್​ಬುಕ್​ನಲ್ಲಿ ಪ್ರಕಟವಾಗಿದ್ದ ಸ್ಕ್ರೀನ್​ಶಾಟ್​ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಅದರಲ್ಲಿ, ಹೊಸ ಕನ್ನಡ ಸಿನಿಮಾಗೆ ನಾವು ಪೋಷಕ ಪಾತ್ರಧಾರಿಗಳನ್ನು ಹುಡುಕುತ್ತಿದ್ದೇವೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್​ ನಟಿಸುತ್ತಿದ್ದಾರೆ. ಯಾರಿಗಾದರೂ ಆಸಕ್ತಿ ಇದ್ದರೆ ಇನ್​ಬಾಕ್ಸ್​ನಲ್ಲಿ ಮೆಸೇಜ್​ ಮಾಡಿ. ವೃತ್ತಿಪರರಿಗೆ ಮಾತ್ರ ಆದ್ಯತೆ ಎಂದಿತ್ತು.

ಈ ಬಗ್ಗೆ ಬರೆದಿರುವ ಧನಂಜಯ್​, ಈ ರೀತಿಯ ಪೋಸ್ಟ್​​​ಗಳನ್ನು ನಂಬಿ ಮೋಸ ಹೋಗಬೇಡಿ. ಈ ತರಹ ಎರಡು ಮೂರು ಘಟನೆಗಳು ಗಮನಕ್ಕೆ ಬಂದಿವೆ. ಸಾಮಾಜಿಕ ಜಾಲತಾಣದಲ್ಲಿ ಬರುವ ಯಾವುದೇ ವಿಚಾರವನ್ನು ನಂಬುವ ಮೊದಲು ಪರಿಶೀಲನೆ ನಡೆಸಿ ಎಂದು ಕೋರಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ಡಾಲಿ ಧನಂಜಯ್​ 10ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಲಗ, ಯುವರತ್ನ ಸೇರಿ ಪ್ರಮುಖ ಸಿನಿಮಾಗಳು ಅವರ ಕೈಯಲ್ಲಿವೆ. ತೆಲುಗಿನ ಪುಷ್ಪ ಚಿತ್ರದಲ್ಲೂ ಧನಂಜಯ್​ ಬಣ್ಣ ಹಚ್ಚುತ್ತಿದ್ದಾರೆ.

ಮರಳಿ ಬನ್ನಿ ಚಿತ್ರಮಂದಿರಗಳಿಗೆ.. ಕಲಾವಿದರಿಂದ ಪ್ರೇಕ್ಷಕ ಮಹಾಪ್ರಭುಗೆ ವೀಡಿಯೊ ಆಹ್ವಾನ!

Published On - 2:45 pm, Mon, 7 December 20

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ