AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ

ಟಗರು ಸಿನಿಮಾದಲ್ಲಿ ಡಾಲಿ ಹೆಸರಿನ ರೌಡಿ ಆಗಿ ಕಾಣಿಸಿಕೊಂಡಿದ್ದ ಧನಂಜಯ್ ಈಗ ಬಹುಬೇಡಿಕೆಯ ನಟ. ಧನಂಜಯ್​ ಹೆಸರನ್ನು ಬಳಕೆ ಮಾಡಿಕೊಂಡು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ
ಧನಂಜಯ್
Skanda
| Edited By: |

Updated on:Dec 07, 2020 | 2:46 PM

Share

ಆನ್​ಲೈನ್​ನಲ್ಲಿ ಇತ್ತೀಚೆಗೆ ವಂಚನೆ ಮಾಡುವ ಜಾಲಗಳ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹುಟ್ಟಿಕೊಳ್ಳುತ್ತಿದೆ. ನಿಮ್ಮ ಬ್ಯಾಂಕ್​ ಖಾತೆಗೆ ಕನ್ನ ಹಾಕುವವರದ್ದೇ ಒಂದು ಗುಂಪಾದರೆ, ಅವಕಾಶ ನೀಡುತ್ತೇನೆಂದು ಪಂಗನಾಮ ಹಾಕುವವರದ್ದು ಮತ್ತೊಂದು ಗುಂಪು. ಇದೇ ರೀತಿ ಡಾಲಿ ಧನಂಜಯ್​ ಹೆಸರಲ್ಲಿ ಅವಕಾಶ ನೀಡುತ್ತೇನೆಂದು ಪೋಸ್ಟ್​​ಗಳನ್ನು ಹಾಕುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಆ ಬಗ್ಗೆ ಖುದ್ದು ಧನಂಜಯ್​ ಎಚ್ಚರಿಕೆ ನೀಡಿದ್ದಾರೆ.

ಟಗರು ಸಿನಿಮಾದಲ್ಲಿ ಡಾಲಿ ಹೆಸರಿನ ರೌಡಿ ಆಗಿ ಕಾಣಿಸಿಕೊಂಡಿದ್ದ ಧನಂಜಯ್​, ನಂತರ ಅದೇ ಹೆಸರಲ್ಲಿ ಖ್ಯಾತಿ ಪಡೆದುಕೊಂಡು ಬಿಟ್ಟರು. ಈಗಲೂ ಕೂಡ ಅನೇಕ ನಿರ್ದೇಶಕರು ಡಾಲಿ ಧನಂಜಯ್​ ಕಾಲ್​ಶೀಟ್​ಗೆ ಕಾದು ನಿಲ್ಲುತ್ತಾರೆ. ಈ ಮಧ್ಯೆ ಅನೇಕರು, ಧನಂಜಯ್​ ಹೆಸರನ್ನು ಬಳಕೆ ಮಾಡಿಕೊಂಡು ಅವಕಾಶ ನೀಡುವುದಾಗಿ ನಕಲಿ ಪೋಸ್ಟ್​ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಧನಂಜಯ್​ ತಮ್ಮ ಟ್ವಿಟರ್ ಅಕೌಂಟ್​ನಲ್ಲಿ ಫೇಸ್​ಬುಕ್​ನಲ್ಲಿ ಪ್ರಕಟವಾಗಿದ್ದ ಸ್ಕ್ರೀನ್​ಶಾಟ್​ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಅದರಲ್ಲಿ, ಹೊಸ ಕನ್ನಡ ಸಿನಿಮಾಗೆ ನಾವು ಪೋಷಕ ಪಾತ್ರಧಾರಿಗಳನ್ನು ಹುಡುಕುತ್ತಿದ್ದೇವೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್​ ನಟಿಸುತ್ತಿದ್ದಾರೆ. ಯಾರಿಗಾದರೂ ಆಸಕ್ತಿ ಇದ್ದರೆ ಇನ್​ಬಾಕ್ಸ್​ನಲ್ಲಿ ಮೆಸೇಜ್​ ಮಾಡಿ. ವೃತ್ತಿಪರರಿಗೆ ಮಾತ್ರ ಆದ್ಯತೆ ಎಂದಿತ್ತು.

ಈ ಬಗ್ಗೆ ಬರೆದಿರುವ ಧನಂಜಯ್​, ಈ ರೀತಿಯ ಪೋಸ್ಟ್​​​ಗಳನ್ನು ನಂಬಿ ಮೋಸ ಹೋಗಬೇಡಿ. ಈ ತರಹ ಎರಡು ಮೂರು ಘಟನೆಗಳು ಗಮನಕ್ಕೆ ಬಂದಿವೆ. ಸಾಮಾಜಿಕ ಜಾಲತಾಣದಲ್ಲಿ ಬರುವ ಯಾವುದೇ ವಿಚಾರವನ್ನು ನಂಬುವ ಮೊದಲು ಪರಿಶೀಲನೆ ನಡೆಸಿ ಎಂದು ಕೋರಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ಡಾಲಿ ಧನಂಜಯ್​ 10ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಲಗ, ಯುವರತ್ನ ಸೇರಿ ಪ್ರಮುಖ ಸಿನಿಮಾಗಳು ಅವರ ಕೈಯಲ್ಲಿವೆ. ತೆಲುಗಿನ ಪುಷ್ಪ ಚಿತ್ರದಲ್ಲೂ ಧನಂಜಯ್​ ಬಣ್ಣ ಹಚ್ಚುತ್ತಿದ್ದಾರೆ.

ಮರಳಿ ಬನ್ನಿ ಚಿತ್ರಮಂದಿರಗಳಿಗೆ.. ಕಲಾವಿದರಿಂದ ಪ್ರೇಕ್ಷಕ ಮಹಾಪ್ರಭುಗೆ ವೀಡಿಯೊ ಆಹ್ವಾನ!

Published On - 2:45 pm, Mon, 7 December 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​