Dowry Case: ನಟಿ ಅಭಿನಯಾಗೆ ಜಾಮೀನು; ವರದಕ್ಷಿಣೆ ಕಿರುಕುಳ ಕೇಸ್​ನಲ್ಲಿ ತಾತ್ಕಾಲಿಕ ರಿಲೀಫ್​

Abhinaya Dowry Case | Supreme Court: ನಟಿ ಅಭಿನಯಾ ಅವರು ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಚಂದ್ರಾ ಲೇಔಟ್​ ಪೊಲೀಸರು ಲುಕ್​ಔಟ್​ ನೋಟೀಸ್​ ಜಾರಿ ಮಾಡಿದ್ದರು. ಆದರೆ ಈಗ ಅಭಿನಯಾಗೆ ಸುಪ್ರೀಂ ಕೋರ್ಟ್​ನಿಂದ ಜಾಮೀನು ಸಿಕ್ಕಿದೆ.

Dowry Case: ನಟಿ ಅಭಿನಯಾಗೆ ಜಾಮೀನು; ವರದಕ್ಷಿಣೆ ಕಿರುಕುಳ ಕೇಸ್​ನಲ್ಲಿ ತಾತ್ಕಾಲಿಕ ರಿಲೀಫ್​
ನಟಿ ಅಭಿನಯಾ

Updated on: Feb 10, 2023 | 6:30 PM

ವರದಕ್ಷಿಣೆ ಕೇಸ್​ನಲ್ಲಿ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ (Abhinaya) ಅವರಿಗೆ ಈಗ ತಾತ್ಕಾಲಿಕ ರಿಲೀಫ್​ ಸಿಕ್ಕಿದೆ. ಸುಪ್ರೀಂ ಕೋರ್ಟ್​ನಲ್ಲಿ ಅವರಿಗೆ ಜಾಮೀನು ದೊರೆತಿದೆ. ಅಭಿನಯಾ ಜೊತೆಗೆ ಅವರ ತಾಯಿ ಜಯಮ್ಮ ಮತ್ತು ಸಹೋದರ ಚೆಲುವರಾಜು ಕೂಡ ಜಾಮೀನು ಪಡೆದುಕೊಂಡಿದ್ದಾರೆ. ಸದ್ಯಕ್ಕೆ ಈ ಮೂವರು ನಿಟ್ಟುಸಿರು ಬಿಡುವಂತಾಗಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣದಲ್ಲಿ (Dowry Case) ಅಭಿನಯಾ ಅವರಿಗೆ ಇತ್ತೀಚೆಗೆ ಎರಡು ವರ್ಷ ಜೈಲು ಶಿಕ್ಷೆ ಪ್ರಕಟ ಆಗಿತ್ತು. ಹೈಕೋರ್ಟ್​ ನೀಡಿದ ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್​ (Supreme Court) ಮೊರೆ ಹೋಗಿದ್ದಾರೆ. ಅಲ್ಲಿ ಅವರಿಗೆ ಜಾಮೀನು ಮಂಜೂರಾಗಿದೆ.

ತಲೆ ಮರೆಸಿಕೊಂಡಿದ್ದ ಅಭಿನಯಾ:

ಅತ್ತಿಗೆ ಮೇಲೆ ಕೌಟುಂಬಿಕ ದೌರ್ಜನ್ಯ ನಡೆಸಿದ್ದಕ್ಕಾಗಿ ಅಭಿನಯಾ ಹಾಗೂ ಅವರ ತಾಯಿ ಮತ್ತು ಸಹೋದರನಿಗೆ ಹೈಕೋರ್ಟ್​ ಜೈಲು ಶಿಕ್ಷೆ ನೀಡಿತ್ತು. ಪೊಲೀಸರು ಈ ಮೂವರನ್ನೂ ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಅವರು ತಲೆಮರೆಸಿಕೊಂಡರು. ಬಳಿಕ ಚಂದ್ರಾ ಲೇಔಟ್​ ಪೊಲೀಸರು ಲುಕ್​ಔಟ್​ ನೋಟೀಸ್​ ಜಾರಿ ಮಾಡಿದರು. ಅಪರಾಧಿಗಳ ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿಕೊಂಡಿರುವ ಕರಪತ್ರ/ಪೋಸ್ಟರ್​ ವೈರಲ್​ ಆಗಿದೆ. ಅದರ ಬೆನ್ನಲ್ಲೇ ಅಭಿನಯಾ ಕುಟುಂಬದವರು ಸುಪ್ರೀಂ ಕೋರ್ಟ್​ ಮೊರೆ ಹೋದರು.

ಅಭಿನಯಾ ಕೇಸ್​ ವಿಚಾರಣೆ ಮುಂದೂಡಿಕೆ:

ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ಅವರು 2002ರಲ್ಲಿ ವರದಕ್ಷಿಣೆ ಕೇಸ್​ ದಾಖಲಿಸಿದ್ದರು. ಅದಕ್ಕೆ ಸಂಬಂಧಪಟ್ಟಂತೆ 2022ರ ಡಿಸೆಂಬರ್​ನಲ್ಲಿ ಹೈಕೋರ್ಟ್​ ತೀರ್ಪು ನೀಡಿತು. ಆದರೆ ಅದನ್ನು ಪ್ರಶ್ನಿಸಿ ಅಭಿನಯಾ ಕುಟುಂಬದವರು ಈಗ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ.

ಇದನ್ನೂ ಓದಿ
ಅಂತಸ್ತು, ವಿದ್ಯಾಭ್ಯಾಸ, ಆಲೋಚನೆ, ಹೊಂದಾಣಿಕೆಗಳ ಕೊರತೆ: ಶಿವಮೊಗ್ಗದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು
Abhinaya: ವರದಕ್ಷಿಣೆ ಕೇಸ್​​ನಲ್ಲಿ ನಟಿ ಅಭಿನಯಾಗೆ 2 ವರ್ಷ ಜೈಲು; ತಾಯಿಗೆ 5 ವರ್ಷ ಶಿಕ್ಷೆ ವಿಧಿಸಿದ ಹೈಕೋರ್ಟ್
Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು
ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ; ಸಾವಿನ ಸುತ್ತ ಅನುಮಾನದ ಹುತ್ತ

ಲಕ್ಷ್ಮಿದೇವಿ ಆರೋಪ ಏನು?

1998ರಲ್ಲಿ ಅಭಿನಯಾ ಸಹೋದರ ಶ್ರೀನಿವಾಸ್​ ಜೊತೆ ಲಕ್ಷ್ಮಿದೇವಿ ವಿವಾಹ ನೆರವೇರಿತ್ತು. ಮದುವೆ ಬಳಿಕ ಶ್ರೀನಿವಾಸ್​ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಚಂದ್ರಾ ಲೇಔಟ್​ ಪೊಲೀಸ್​ ಠಾಣೆಯಲ್ಲಿ ಲಕ್ಷ್ಮಿದೇವಿ ದೂರು ದಾಖಲಿಸಿದ್ದರು. ಹೆರಿಗೆ ಬಳಿಕ ಪತಿ ಮನೆಯವರು ತಮ್ಮನ್ನು ಸೇರಿಸಿಕೊಳ್ಳಲಿಲ್ಲ. ಪೋಷಕರ ಮನೆಯಲ್ಲಿ ಉಳಿದುಕೊಳ್ಳುವಂತೆ ತಮ್ಮ ಮೇಲೆ ಒತ್ತಡ ಹೇರಿದರು. ಕೊಲೆ ಬೆದರಿಕೆಯನ್ನೂ ಹಾಕಿದರು ಎಂದು ದೂರಿನಲ್ಲಿ ಲಕ್ಷ್ಮಿದೇವಿ ತಿಳಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:30 pm, Fri, 10 February 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us