AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಂದಿದೆ ರಾಜ್ ಕಪ್, ವಿದೇಶದಲ್ಲಿ ನಡೆಯಲಿವೆ ಪಂದ್ಯಗಳು

Dr Raj Cup: ಮತ್ತೆ ಬಂದಿದೆ ಡಾ ರಾಜ್ ಕಪ್. ಸ್ಯಾಂಡಲ್​ವುಡ್ ನಟರು, ತಂತ್ರಜ್ಞರ ಈ ಕ್ರಿಕೆಟ್ ಟೂರ್ನಿ ಈ ಬಾರಿ ಅದ್ಧೂರಿಯಾಗಿ ನಡೆಯಲಿದೆ. ಜೂನ್ 17ರಂದು ದುಬೈನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.

ಮತ್ತೆ ಬಂದಿದೆ ರಾಜ್ ಕಪ್, ವಿದೇಶದಲ್ಲಿ ನಡೆಯಲಿವೆ ಪಂದ್ಯಗಳು
ರಾಜ್ ಕಪ್
Follow us
ಮಂಜುನಾಥ ಸಿ.
|

Updated on: Jun 12, 2023 | 9:37 PM

ಮತ್ತೆ ಕ್ರಿಕೆಟ್ ಕಾರಣಕ್ಕೆ ಸ್ಯಾಂಡಲ್​ವುಡ್ (Sandalwood) ತಾರೆಯರು ಒಂದಾಗುತ್ತಿದ್ದಾರೆ. ಚಂದನವನದ ತಾರೆಯರು ವೃತ್ತಿಪರವಾಗಿ ನಟರಾಗಿರುವ ಜೊತೆಗೆ ವೃತ್ತಿಪರ ಕ್ರಿಕೆಟಿಗರೂ ಆಗಿಬಿಟ್ಟಿದ್ದಾರೆ. ಕಳೆದ ವರ್ಷದಿಂದ ಸತತವಾಗಿ ಒಂದರ ಹಿಂದೊಂದು ಕ್ರಿಕೆಟ್ ಟೂರ್ನಿಗಳಲ್ಲಿ (Cricket Tournament) ಚಂದನವನದ (Sandalwood) ತಾರೆಯರು ಆಡುತ್ತಲೇ ಬಂದಿದ್ದಾರೆ. ಇದೀಗ ಮತ್ತೊಂದು ಕ್ರಿಕೆಟ್ ಟೂರ್ನಿಯಲ್ಲಿ ಬ್ಯಾಟ್ ಬೀಸಲು ಚಂದನವನದ ತಾರೆಯರು ತಯಾರಾಗಿದ್ದಾರೆ. ಹಲವು ವರ್ಷಗಳಿಂದಲೂ ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವ ಡಾ ರಾಜ್ ಕಪ್ (Raj Cup) ಮತ್ತೊಮ್ಮೆ ಬಂದಿದ್ದು ಈ ಬಾರಿ ಅದ್ಧೂರಿಯಾಗಿ ಕ್ರಿಕೆಟ್ ಟೂರ್ನಿಯನ್ನು ನಡೆಸಲು ಆಯೋಜಕರು ತಯಾರಾಗಿದ್ದಾರೆ.

ಡಾ ರಾಜ್ ಕಪ್ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆದಿದ್ದು, ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ನಟರಾದ ಅನಿರುದ್ಧ, ನಟ ರವಿಶಂಕರ್, ರಾಜಾಹುಲಿ ಹರ್ಷ, ನಾಗಕಿರಣ್, ಪವನ್ ಒಡೆಯರ್, ನಿರ್ದೇಶಕ ಚೇತನ್ ಹಾಗೂ ಸಿಂಪಲ್ ಸುನಿ ಅವರುಗಳು ಕ್ರೀಡಾಕೂಟದ ಬಗ್ಗೆ ಮಾಹಿತಿ ಹಂಚಿಕೊಂಡರು. ಕಳೆದ ಬಾರಿಗಿಂತಲೂ ವ್ಯವಸ್ಥಿತವಾಗಿ ಹಾಗೂ ಅದ್ಧೂರಿಯಾಗಿ ಈ ಬಾರಿ ಕ್ರೀಡಾಕೂಟ ಆಯೋಜನೆ ಮಾಡುವುದಾಗಿ ಮಾಹಿತಿ ನೀಡಿದರು.

ರಾಜ್ ಕಪ್​ನ ಆರನೇ ಸೀಸನ್​ ನಡೆಸಲು ತಯಾರಾಗಿದ್ದು. ರಾಜೇಶ್ ಬ್ರಹ್ಮವರ್ ಅವರ ನೇತೃತ್ವದಲ್ಲಿ ಕ್ರೀಡಾಕೂಟ ನಡೆಯಲಿದೆ. ಜೂನ್ 17ರಂದು ದುಬೈನಲ್ಲಿ ತಂಡಗಳ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಅದಾದ ಬಳಿಕ ಮೈಸೂರಿನಲ್ಲಿ ಪಂದ್ಯಾವಳಿಯ ಉದ್ಘಾಟನೆ ನಡೆಯಲಿದ್ದು, ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಈ ಬಾರಿ ಲೀಗ್ ಹಂತದ ಪಂದ್ಯಗಳು ದುಬೈ, ಬ್ಯಾಂಕಾಂಕ್, ಶ್ರೀಲಂಕಾ, ಸಿಂಗಪುರ್, ಮಲೇಷ್ಯಾಗಳಲ್ಲಿ ನಡೆಯಲಿದೆ. ಜೊತೆಗೆ ಮೈಸೂರು ಹಾಗೂ ಬೆಂಗಳೂರುಗಳಲ್ಲಿಯೂ ಪಂದ್ಯಗಳು ನಡೆಯಲಿವೆ. ವಿದೇಶದಲ್ಲಿ ಪಂದ್ಯಾವಳಿಗಳನ್ನು ನೆಡೆಸಬೇಕು ಎಂಬುದು ಅಪ್ಪು ಅವರ ಆಸೆಯಾಗಿತ್ತಂತೆ, ಹಾಗಾಗಿ ಅವರ ಕನಸನ್ನು ನನಸು ಮಾಡುವ ಪ್ರಯತ್ನವನ್ನು ಮಾಡುತ್ತಿರುವುದಾಗಿ ಆಯೋಜಕರು ಹೇಳಿದ್ದಾರೆ.

ಇದನ್ನೂ ಓದಿ:Richiee Kannada Movie: ಚಂದನವನದಲ್ಲಿ ಮತ್ತೆ ಕೇಳಿಸ್ತಿದೆ ‘ರಿಚ್ಚಿ’ ಹೆಸರು; ಕುನಾಲ್​ ಗಾಂಜಾವಾಲಾ ಹಾಡಿದ ಗೀತೆಯಿಂದ ಹೆಚ್ಚಲಿದೆ ಸದ್ದು

ಡಾ. ರಾಜ್​ ಕಪ್​ನಲ್ಲಿ ಡಾಲಿ ಧನಂಜಯ್​, ಅನಿರುದ್ದ್, ಮದರಂಗಿ ಕೃಷ್ಣ , ಅಭಿಷೇಕ್ ಅಂಬರೀಶ್, ನೀನಾಸಂ ಸತೀಶ್, ಲೂಸ್ ಮಾದ ಯೋಗಿ, ವಶಿಷ್ಠ ಸಿಂಹ, ರಾಜುಗೌಡ ಅವರ ನೇತೃತ್ವದಲ್ಲಿ ತಂಡಗಳು ಕ್ರಿಕೆಟ್ ಆಡಲಿದ್ದು ಕಪ್​ಗಾಗಿ ಸೆಣೆಸಲಿವೆ. ಸಿಸಿಎಲ್​ನಲ್ಲಿ ಆಡಿ ಅನುಭವವಿರುವ ಹಲವು ಆಟಗಾರರು ಈ ಪಂದ್ಯಾವಳಿಗಳಲ್ಲಿಯೂ ಭಾಗಿಯಾಗಲಿದ್ದಾರೆ.

ಜೂನ್ 17ರಂದು ನಡೆವ ಹರಾಜಿನ ಬಳಿಕ ಯಾವ ನಟರ ನಾಯಕತ್ವದ ತಂಡಕ್ಕೆ ಯಾವ ನಟರು ಆಡಲಿದ್ದಾರೆ ಎಂಬುದು ಗೊತ್ತಾಗಲಿದೆ. ಈ ತಂಡಗಳಲ್ಲಿ ಕೇವಲ ನಟರು ಮಾತ್ರವೇ ಅಲ್ಲದೆ ಚಿತ್ರರಂಗದ ತಂತ್ರಜ್ಞರು ಸಹ ಇರಲಿದ್ದಾರೆ ಎಂಬುದು ವಿಶೇಷ. ಸಿಸಿಎಲ್ ನಲ್ಲಿ ಕೇವಲ ನಟರುಗಳಷ್ಟೆ ಆಡುತ್ತಿದ್ದರು. ರಾಜ್ ಕಪ್​ನಲ್ಲಿ ನಟರು, ತಂತ್ರಜ್ಞರು ಒಟ್ಟಿಗೆ ಆಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ