AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajkumar Death Anniversary: ಕೊವಿಡ್​ ಹಿನ್ನೆಲೆಯಲ್ಲಿ ಡಾ. ರಾಜ್ ಸಮಾಧಿಗೆ ಕುಟುಂಬದವರಿಂದ ಸಿಂಪಲ್​ ಪೂಜೆ

ಒಂದು ವೇಳೆ ಕೊವಿಡ್​ ಸಮಸ್ಯೆ ಇಲ್ಲದೇ ಇದ್ದಿದ್ದರೆ ರಾಜ್ ಪುಣ್ಯಸ್ಮರಣೆ ಅಂಗವಾಗಿ ಅವರ​ ಸಮಾಧಿ ಬಳಿ ಭಾರಿ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಎಲ್ಲವೂ ಸರಳವಾಗಿ ನೆರವೇರುತ್ತಿದೆ.

Rajkumar Death Anniversary: ಕೊವಿಡ್​ ಹಿನ್ನೆಲೆಯಲ್ಲಿ ಡಾ. ರಾಜ್ ಸಮಾಧಿಗೆ ಕುಟುಂಬದವರಿಂದ ಸಿಂಪಲ್​ ಪೂಜೆ
(ಡಾ. ರಾಜ್​ಕುಮಾರ್​ 15ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸಮಾಧಿಗೆ ಪೂಜೆ)
ಮದನ್​ ಕುಮಾರ್​
|

Updated on: Apr 12, 2021 | 11:38 AM

Share

ನಟಸಾರ್ವಭೌಮ ಡಾ. ರಾಜ್​ಕುಮಾರ್​ ಅವರ 15ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರವನ್ನು ಇಂದು (ಏ.12) ನೆರವೇರಿಸಲಾಗುತ್ತಿದೆ. ಕೊರೊನಾ ವೈರಸ್​ ಹರಡುವ ಭೀತಿಯಲ್ಲಿ ಕೆಲವು ನಿಯಮಗಳನ್ನು ಪಾಲಿಸಲಾಗುತ್ತಿದೆ. ಹಾಗಾಗಿ ರಾಜ್​ ಕುಟುಂಬದವರು ಕೂಡ ಅಣ್ಣಾವ್ರ ಸಮಾಧಿಗೆ ಸರಳವಾಗಿ ಪೂಜೆ ಸಲ್ಲಿಸಿದ್ದಾರೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ರಾಜ್​ ಸಮಾಧಿ ಬಳಿ ತೆರಳಿದ ಶಿವರಾಜ್​ಕುಮಾರ್​ ಅವರು ಮೇರುನಟನಿಗೆ ನಮನ ಸಲ್ಲಿಸಿದ್ದಾರೆ.

ಒಂದು ವೇಳೆ ಕೊವಿಡ್​ ಸಮಸ್ಯೆ ಇಲ್ಲದೇ ಇದ್ದಿದ್ದರೆ ರಾಜ್​ ಸಮಾಧಿ ಬಳಿ ಭಾರಿ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು. ರಾಜ್ಯದ ಮೂಲೆ ಮೂಲೆಗಳಿಂದ ಬರುತ್ತಿದ್ದ ಅಭಿಮಾನಿಗಳು ನೆಚ್ಚಿನ ನಟನಿಗೆ ಪುಷ್ಪ ನಮನ ಸಲ್ಲಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಎಲ್ಲವೂ ಸರಳವಾಗಿ ನೆರವೇರುತ್ತಿದೆ.

‘ಕೊರೊನಾ ಹಿನ್ನೆಲೆಯಲ್ಲಿ ಅಪ್ಪಾಜಿ ಕಾರ್ಯವನ್ನ ಸಿಂಪಲ್‌ ಆಗಿ ಮಾಡಿದ್ದೇವೆ. ಎಲ್ಲರೂ ನಿಯಮ ಪಾಲನೆ ಮಾಡಿ. ಕೊವಿಡ್ ಓಡಿಸಲು ಎಲ್ಲರೂ ಕೈ ಜೋಡಿಸಬೇಕು. ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್ ಚರ್ಚೆ ವಿಚಾರ ಆಗುತ್ತಿದೆ. ಒಂದು ವರ್ಷದಿಂದ ಎಲ್ಲರೂ ಕಷ್ಟ ಪಟ್ಟಿದ್ದೇವೆ. ಈಗ ಎಚ್ಚರಿಕೆಯಿಂದ ಇರಬೇಕು. ಮೊಂಡು ಧೈರ್ಯ ಯಾರೂ ಸಹ ಮಾಡಬಾರದು’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ರಾಜ್​ಕುಮಾರ್​ ಕುಟುಂಬದವರು ಡಾ. ರಾಜ್​ ಮತ್ತು ಪಾರ್ವತಮ್ಮ ರಾಜ್​ಕುಮಾರ್​ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಹಲವು ಅಭಿಮಾನಿಗಳು ಕೂಡ ಅಣ್ಣಾವ್ರಿಗೆ ನಮನ ಸಲ್ಲಿಸಲು ಬಂದಿದ್ದಾರೆ. ಸಮಾಧಿ ಸ್ಥಳದಲ್ಲಿ ಕೊವಿಡ್​ ನಿಯಮಗಳನ್ನು ಪಾಲಿಸಲಾಗುತ್ತಿದೆ. ಗುಂಪುಗುಂಪಾಗಿ ಬರುವುದಕ್ಕೆ ಅಭಿಮಾನಿಗಳಿಗೆ ಅವಕಾಶವಿಲ್ಲ.

ಮಾಸ್ಕ್​ ಧರಿಸಿದವರಿಗೆ ಮಾತ್ರ ಒಳಗೆ ಬರಲು ಅವಕಾಶ ನೀಡಲಾಗುತ್ತಿದೆ. ಕಡ್ದಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಪುನೀತ್​ ರಾಜ್​ಕುಮಾರ್​ ಮತ್ತು ಶಿವರಾಜ್​ಕುಮಾರ್​ ಅವರು ಆಗಮಿಸುವುದರಿಂದ ಜನರ ನೂಕು ನುಗ್ಗಲು ತಪ್ಪಿಸಲು ಕಂಠೀರವ ಸ್ಡುಡಿಯೋ ಆವರಣದಲ್ಲಿ ಪೊಲೀಸ್​ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: Rajkumar Death Anniversary: ಡಾ. ರಾಜ್​ ನಿಧನರಾದ ದಿನ ಆಕಾಶ ನೋಡಿಕೊಂಡು ದೇವರಿಗೆ ಬೈಯ್ದಿದ್ದ ಮೊಮ್ಮಗಳು ಧನ್ಯಾ!

Rajkumar Death Anniversary: ಡಾ. ರಾಜ್​ಕುಮಾರ್​ ಭೌತಿಕವಾಗಿ ನಮ್ಮೆಲ್ಲರನ್ನು ಅಗಲಿ ಇಂದಿಗೆ 15 ವರ್ಷ!

(Dr Rajkumar 15th Death Anniversary: Sandalwood actor Shivarajkumar pays tribute to his father)

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ