AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr. Rajkumar: ವಿಶೇಷ ಸಿಹಿ ತಿನಿಸಿಗೆ ರಾಜ್​ ಲಡ್ಡು ಎಂದು ಅಣ್ಣಾವ್ರ ಹೆಸರು ಇಟ್ಟಿದ್ದಕ್ಕೆ ಇಲ್ಲಿದೆ ಇಂಟರೆಸ್ಟಿಂಗ್​ ಕಾರಣ

Dr Rajkumar Birth Anniversary 2006ರ ಜೂನ್ ತಿಂಗಳಲ್ಲಿ ರಾಜ್​ಕುಮಾರ್​ ಅವರ ಹೆಸರಿನಲ್ಲಿ ಒಂದು ಸ್ವೀಟ್​ ತಯಾರಿಸಬೇಕು ಎಂಬ ಆಲೋಚನೆ ಸದಾಶಿವ ರಾವ್​ ಅವರಿಗೆ ಬಂತು. ಆಗ ತಯಾರಾಗಿದ್ದೇ ರಾಜ್​ ಲಡ್ಡು.

Dr. Rajkumar: ವಿಶೇಷ ಸಿಹಿ ತಿನಿಸಿಗೆ ರಾಜ್​ ಲಡ್ಡು ಎಂದು ಅಣ್ಣಾವ್ರ ಹೆಸರು ಇಟ್ಟಿದ್ದಕ್ಕೆ ಇಲ್ಲಿದೆ ಇಂಟರೆಸ್ಟಿಂಗ್​ ಕಾರಣ
ಡಾ. ರಾಜ್​ಕುಮಾರ್​
ಮದನ್​ ಕುಮಾರ್​
|

Updated on:Apr 24, 2021 | 12:47 PM

Share

ಡಾ. ರಾಜ್​ಕುಮಾರ್​ ಅವರ 92ನೇ ಜನ್ಮದಿನದ ಪ್ರಯುಕ್ತ ಅಭಿಮಾನಿಗಳು ಅವರನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಮೇರುನಟನ ಬಗೆಗಿನ ಹಲವು ಸಂಗತಿಗಳನ್ನು ಮೆಲುಕು ಹಾಕಲಾಗುತ್ತಿದೆ. ‘ನಟ ಸಾರ್ವಭೌಮ’ನ ಹುಟ್ಟುಹಬ್ಬಕ್ಕೆ ಸೋಶಿಯಲ್​ ಮೀಡಿಯಾ ಮೂಲಕ ಎಲ್ಲರೂ ಶುಭಕೋರುತ್ತಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಗಣೇಶ ಸ್ವೀಟ್ಸ್​ ಅಂಗಡಿಯ ಮಾಲೀಕ ಸದಾಶಿವ್​ ರಾವ್​ ಅವರು ಒಂದು ವಿಶೇಷ ಸಂಗತಿಯನ್ನು ಟಿವಿ9 ಜೊತೆಗೆ ಹಂಚಿಕೊಂಡಿದ್ದಾರೆ. ಇವರ ಅಂಗಡಿಯಲ್ಲಿ ಸಿಗುವ ‘ರಾಜ್​ ಲಡ್ಡು’ ತುಂಬ ಫೇಮಸ್​. ಅದಕ್ಕೆ ಆ ಹೆಸರು ಬರಲು ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ನಾನು ರಾಜ್​ಕುಮಾರ್​ ಅವರ ಅಪ್ಪಟ ಅಭಿಮಾನಿ. ಎಲ್ಲ ಸಿನಿಮಾವನ್ನು 5-10 ಸಲ ನೋಡಿದ್ದೇನೆ. ಶಂಕರ್​ ಗುರು ಚಿತ್ರವನ್ನು 51 ಬಾರಿ ನೋಡಿದ್ದೆ. ಆಗಿನ ಕಾಲದಲ್ಲಿ ಸಿನಿಮಾ ನೋಡಲು ಹಣ ಇಲ್ಲದವರನ್ನು ನಾನೇ ಚಿತ್ರಮಂದಿರಕ್ಕೆ ಕರೆದುಕೊಂಡು ಹೋಗಿ ಸಿನಿಮಾ ತೋರಿಸುತ್ತಿದ್ದೆ. 1951ರಲ್ಲಿ ನಮ್ಮ ತಂದೆ ಕಾಟಪ್​ಪೇಟೆ ಚರ್ಚ್​ ಬಳಿ ಅಂಗಡಿ ಮಾಡಿದ್ದರು. ಆಗಿನ ಕಾಲದಲ್ಲೇ ಸಿನಿಮಾ ಕಲಾವಿದರು ಬಂದು ನಮ್ಮ ಅಂಗಡಿಯಲ್ಲಿ ಸ್ವೀಟ್​ ತೆಗೆದುಕೊಂಡು ಹೋಗುತ್ತಿದ್ದರು.

ಎರಡು ನಕ್ಷತ್ರ ಸಿನಿಮಾ ಬಿಡುಗಡೆಯಾಗಿ 15 ದಿನ ಆದ ಬಳಿಕ ಅಣ್ಣಾವ್ರ ಮನೆಗೆ ಸ್ವೀಟ್​ ತೆಗೆದುಕೊಂಡು ಹೋದೆವು. ಮೊದಲಿಗೆ ವಾಚ್​ಮ್ಯಾನ್​ ನಮ್ಮನ್ನು ಒಳಗೆ ಬಿಡಲಿಲ್ಲ. ನಾವು ಜೋರಾಗಿ ಕನ್ನಡದಲ್ಲಿ ಮಾತನಾಡಿದ್ದನ್ನು ಕೇಳಿ ಅಣ್ಣಾವ್ರು ಒಳಗೆ ಕರೆಸಿಕೊಂಡರು. ನಮಗೆ ಉಪ್ಪಿಟ್ಟು ಕಾಪಿ ಕೊಟ್ಟು ಉಪಚರಿಸಿದರು. ಸ್ವೀಟ್​ ತಿಂದು ಖುಷಿಪಟ್ಟರು.

ಮೊದಲೆಲ್ಲ ತುಪ್ಪದಲ್ಲಿ ಮಾಡಿದ ಲಾಡನ್ನು ಅವರಿಗೆ ತಿನ್ನಿಸುತ್ತಿದ್ದೆ. ನಮ್ಮ ಅಂಗಡಿಯಲ್ಲಿ ಅವರಿಗೆ ಮೈಸೂರು ಪಾಕ್​ ತುಂಬ ಇಷ್ಟ ಆಗುತ್ತಿತ್ತು. ಅವರ ಮನೆಗೆ ಸ್ವೀಟ್​ ತಲುಪಿಸುತ್ತಿದ್ದೆವು. 2006ರ ಜೂನ್ ತಿಂಗಳಲ್ಲಿ ರಾಜ್​ಕುಮಾರ್​ ಅವರ ಹೆಸರಿನಲ್ಲಿ ಯಾಕೆ ಒಂದು ಸ್ವೀಟ್​ ಮಾಡಬಾರದು ಎಂಬ ಆಲೋಚನೆ ಬಂತು. ಇದನ್ನು ವಿಭಿನ್ನವಾಗಿ ಮಾಡಬೇಕೆಂದು ಗೋಡುಂಬಿ ಬಾದಾಮಿ, ದ್ರಾಕ್ಷಿ, ಪಿಸ್ತಾ ಹಾಕಿದೆವು. ಬೇರೆ ಯಾವುದೇ ಬಣ್ಣ ಬೇಡ ಎಂದು ಬಿಳಿ ಬಣ್ಣದಲ್ಲಿ ತಯಾರಿಸಿದೆವು. ಯಾಕೆಂದರೆ ರಾಜ್​ಕುಮಾರ್​ ಅವರ ಬಟ್ಟೆ ಬಿಳಿ. ಮನಸ್ಸು ಕೂಡ ಶುಭ್ರವಾಗಿತ್ತು. ಹಾಗಾಗಿ ಈ ಲಾಡು ಕೂಡ ಬಿಳಿ.

Sadashiva Rao

(ಗಣೇಶ ಸ್ವೀಟ್ಸ್ ಅಂಗಡಿಯ ಮಾಲೀಕ ಸದಾಶಿವ್ ರಾವ್)

ರಾಜ್​ ಲಾಡನ್ನು ಎಲ್ಲರಿಗೂ ಹಂಚಿದೆವು. ರುಚಿ ನೋಡಿದ ಎಲ್ಲರೂ ಚೆನ್ನಾಗಿದೆ ಎಂದು ಹೇಳಿದರು. ಬೇರೆ ರಾಜ್ಯ, ದೇಶದಿಂದಲೂ ಬಂದು ರಾಜ್​ ಲಾಡು ತೆಗೆದುಕೊಂಡು ಹೋಗುತ್ತಿದ್ದರು. ಅಣ್ಣಾವ್ರ ಹುಟ್ಟುಹಬ್ಬದ ದಿನ ಮತ್ತು ಪುಣ್ಯತಿಥಿಯ ದಿನ ಸಾವಿರಾರು ಲಾಡುಗಳನ್ನು ನಾವು ಹಂಚುತ್ತಿದ್ದೆವು.

ಇದನ್ನೂ ಓದಿ: Dr. Rajkumar Birth Anniversary: ರಾಜ್​ಕುಮಾರ್​ ಜತೆ ಫೋಟೋ ತೆಗೆಸಿಕೊಳ್ಳಲು ಲವರ್​​ ಕಾಯಿಸಿದ್ದೆ

Dr Rajkumar Birth Anniversary: ರಾಜ್​ಕುಮಾರ್ ಊಟ​ ಮಾಡಿ ಎದ್ದರೆ ಒಂದಗಳು ಕೂಡ ಬಾಳೆಯಲ್ಲಿ ಉಳಿಯುತ್ತಿರಲಿಲ್ಲ

(Dr Rajkumar 92nd Birth Anniversary: interesting facts behind Raj laddu)

Published On - 12:39 pm, Sat, 24 April 21

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ