AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr Rajkumar Birth Anniversary: ರಾಜ್​ಕುಮಾರ್​ ಜನ್ಮದಿನಕ್ಕೆ ಪುನೀತ್​ ನೀಡಿದ ಸುಮಧುರ ಕಾಣಿಕೆ

Puneeth Rajkumar: ಬದಲಾದ ಈ ಪರಿಸ್ಥಿತಿಯಲ್ಲಿ ಸೋಶಿಯಲ್​ ಮೀಡಿಯಾ ಮೂಲಕವೇ ‘ನಟ ಸಾರ್ವಭೌಮ’ನ ಹುಟ್ಟುಹಬ್ಬದ ಸಂಭ್ರಮ ಕಳೆಕಟ್ಟಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಮೇರುನಟನ ಜನ್ಮದಿನಕ್ಕೆ ಶುಭಕೋರುತ್ತಿದ್ದಾರೆ.

Dr Rajkumar Birth Anniversary: ರಾಜ್​ಕುಮಾರ್​ ಜನ್ಮದಿನಕ್ಕೆ ಪುನೀತ್​ ನೀಡಿದ ಸುಮಧುರ ಕಾಣಿಕೆ
ಡಾ. ರಾಜ್​ಕುಮಾರ್​ - ಪುನೀತ್​ ರಾಜ್​ಕುಮಾರ್​
ಮದನ್​ ಕುಮಾರ್​
|

Updated on: Apr 24, 2021 | 10:05 AM

Share

ಕನ್ನಡ ಸಿನಿಪ್ರಿಯರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದುಕೊಂಡಿರುವ ಡಾ. ರಾಜ್​ಕುಮಾರ್​ ಅವರ 92ನೇ ಜನ್ಮದಿನದ ಅಂಗವಾಗಿ ಇಂದು (ಏ.24) ಎಲ್ಲರಿಂದ ಶುಭಾಶಯಗಳು ಹರಿದುಬರುತ್ತಿವೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ನಟ ಪುನೀತ್​ ರಾಜ್​ಕುಮಾರ್​ ಅವರು ಅಪ್ಪಾಜಿಗೆ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬದ ಶುಭಕೋರಿದ್ದಾರೆ. ಒಂದು ಹಾಡಿನ ಮೂಲಕ ಮೇರುನಟನ ಜನ್ಮದಿನದ ಸಂಭ್ರಮವನ್ನು ಅವರು ಹೆಚ್ಚಿಸಿದ್ದಾರೆ.

1976ರಲ್ಲಿ ತೆರಕಂಡ ‘ಬಡವರು ಬಂಧು’ ಸಿನಿಮಾದ ‘ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯ ಹೇಳಿವೆ..’ ಹಾಡು ಇಂದಿಗೂ ಎವರ್​ಗ್ರೀನ್​. ಆ ಗೀತೆಯನ್ನು ಪುನೀತ್​ ಮತ್ತೊಮ್ಮೆ ಹಾಡಿದ್ದಾರೆ. ‘ತಂದೆಯಾಗಿ ತಾಯಿಯಾಗಿ ಮಮತೆಯಿಂದ ಬೆಳೆಸಿದೆ. ಬಿಸಿಲು-ಮಳೆಗೆ ನರಳದಂತೆ ನಿನ್ನ ನೆರಳಲಿ ಸಲಹಿದೆ. ಆ ಪ್ರೀತಿಯ ಮನ ಮರೆಯುದೇ..’ ಎಂಬ ಸಾಲುಗಳನ್ನು ತುಂಬ ಭಾವುಕವಾಗಿ ಪುನೀತ್​ ಹಾಡಿದ್ದಾರೆ. ತಂದೆಯನ್ನು ನೆನಪಿಸಿಕೊಂಡು ಅವರು ಭಾವಪರವಶರಾಗಿ ಧ್ವನಿ ನೀಡಿದ್ದಾರೆ.

ಈ ವಿಡಿಯೋವನ್ನು ಪುನೀತ್​ ರಾಜ್​ಕುಮಾರ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅದು ಎಲ್ಲರಿಗೂ ಸಖತ್​ ಇಷ್ಟ ಆಗುತ್ತಿದೆ. ಅಭಿಮಾನಿಗಳ ಇದನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಪ್ರತಿವರ್ಷವೂ ಏ.24 ಬಂದರೆ ಅಣ್ಣಾವ್ರ ಅಭಿಮಾನಿಗಳ ಸಂಭ್ರಮ ಜೋರಾಗಿರುತ್ತಿತ್ತು. ಆದರೆ ಈ ಬಾರಿ ಲಾಕ್​ಡೌನ್​ ನಿಯಮಗಳ ಕಾರಣದಿಂದ ಮೇರುನಟನ ಜನ್ಮದಿನವನ್ನು ಸಿಂಪಲ್​ ಆಗಿ ಆಚರಿಸಲಾಗುತ್ತಿದೆ.

ರಾಜ್ಯದ ಮೂಲೆಮೂಲೆಗಳಿಂದ ಬರುತ್ತಿದ್ದ ಜನರು ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ರಾಜ್​ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸುತ್ತಿದ್ದರು. ರಕ್ತದಾನ, ನೇತ್ರದಾನ ನೋಂದಣಿ, ಉಚಿತ ಆರೋಗ್ಯ ತಪಾಸಣೆ, ಅನ್ನ ಸಂತರ್ಪಣೆ ಮುಂತಾದ ಸಮಾಜಮುಖಿ ಕಾರ್ಯಗಳು ನಡೆಯುತ್ತಿದ್ದವು. ಆದರೆ ಆ ಎಲ್ಲ ಕಾರ್ಯಗಳಿಗೆ ಕೊವಿಡ್​-19 ಬ್ರೇಕ್​ ಹಾಕಿದೆ. ಅದರಲ್ಲೂ ಶನಿವಾರ ಮತ್ತು ಭಾನುವಾರ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಯಾರೂ ಕೂಡ ರಾಜ್​ ಸಮಾಧಿ ಸ್ಥಳಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ.

ಬದಲಾದ ಈ ಪರಿಸ್ಥಿತಿಯಲ್ಲಿ ಸೋಶಿಯಲ್​ ಮೀಡಿಯಾ ಮೂಲಕವೇ ‘ನಟ ಸಾರ್ವಭೌಮ’ನ ಹುಟ್ಟುಹಬ್ಬದ ಸಂಭ್ರಮ ಕಳೆಕಟ್ಟಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಮೇರುನಟನ ಜನ್ಮದಿನಕ್ಕೆ ಶುಭಕೋರುತ್ತಿದ್ದಾರೆ. ರಾಘವೇಂದ್ರ ರಾಜ್​ಕುಮಾರ್​, ಪವನ್​ ಒಡಯರ್​, ರಮೇಶ್​ ಅರವಿಂದ್​, ಸಿಂಪಲ್​ ಸುನಿ, ಜಗ್ಗೇಶ್​, ವಸಿಷ್ಠ ಸಿಂಹ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಅಣ್ಣಾವ್ರನ್ನು ಸ್ಮರಿಸಿಕೊಂಡಿದ್ದಾರೆ. ಸಿಎಂ ಬಿಎಸ್​ ಯಡಿಯೂರಪ್ಪ ಕೂಡ ಟ್ವಿಟರ್​ ಮೂಲಕ ಡಾ. ರಾಜ್​ ಜನ್ಮದಿನಕ್ಕೆ ಶುಭಕೋರಿದ್ದಾರೆ.

ಇದನ್ನೂ ಓದಿ: Dr. Rajkumar Birth Anniversary: ರಾಜ್​ಕುಮಾರ್​ ಜತೆ ಫೋಟೋ ತೆಗೆಸಿಕೊಳ್ಳಲು ಲವರ್​​ ಕಾಯಿಸಿದ್ದೆ

(Dr Rajkumar 92nd Birth Anniversary: Puneeth Rajkumar BS Yediyurappa and others pay tribute to Legendary Kannada Superstar)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್