AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯೂಸಿಯಂ ಆಗಲಿದೆ ಡಾ. ರಾಜ್​ ಆಡಿ ಬೆಳೆದ ಮನೆ; ಪುನೀತ್​ ಆಸೆ ಈಡೇರಿಸಲು ಕುಟುಂಬದ ನಿರ್ಧಾರ

Dr Rajkumar Gajanur House: ಅಪ್ಪಾಜಿಯವರ ಹಳೇ ಮನೆಯನ್ನು ದುರಸ್ತಿ ಮಾಡಿಸುವುದಾಗಿ ಪುನೀತ್​ ರಾಜ್​ಕುಮಾರ್​ ಅವರು ಹೇಳಿದ್ದರು. ಆದರೆ ಆ ಕಾರ್ಯ ನೆರವೇರುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ.

ಮ್ಯೂಸಿಯಂ ಆಗಲಿದೆ ಡಾ. ರಾಜ್​ ಆಡಿ ಬೆಳೆದ ಮನೆ; ಪುನೀತ್​ ಆಸೆ ಈಡೇರಿಸಲು ಕುಟುಂಬದ ನಿರ್ಧಾರ
ಪುನೀತ್​ ರಾಜ್​ಕುಮಾರ್​, ಡಾ. ರಾಜ್​ಕುಮಾರ್ ಗಾಜನೂರು ಮನೆ
TV9 Web
| Edited By: |

Updated on: Dec 11, 2021 | 1:54 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡಿರುವುದು ಕನ್ನಡ ಚಿತ್ರರಂಗಕ್ಕೆ ಆದ ದೊಡ್ಡ ನಷ್ಟ. ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಪುನೀತ್​ ಅವರು ಅನೇಕ ಕನಸುಗಳನ್ನು ಕಂಡಿದ್ದರು. ಆದರೆ ಅವು ನನಸಾಗುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ. ಅಪ್ಪು ಕಂಡಿದ್ದ ಅನೇಕ ಕನಸುಗಳನ್ನು ಅವರ ಕುಟುಂಬದವರು ಈಗ ನನಸು ಮಾಡುತ್ತಿದ್ದಾರೆ. ಅದರ ಅಂಗವಾಗಿ ಇತ್ತೀಚೆಗೆ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟೈಟಲ್​ ಟೀಸರ್​ ಬಿಡುಗಡೆ ಮಾಡಲಾಗಿತ್ತು. ಅದೇ ರೀತಿ ಈಗ ಇನ್ನೊಂದು ಕನಸನ್ನು ಡಾ. ರಾಜ್​ಕುಮಾರ್​​ (Dr Rajkumar) ಕುಟುಂಬ ಕೈಗೆತ್ತಿಕೊಳ್ಳುತ್ತಿದೆ. ಅಣ್ಣಾವ್ರು ಆಡಿ ಬೆಳೆದ ಮನೆಯನ್ನು ದುರಸ್ತಿ ಮಾಡಿಸಿ, ಅದನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

ಚಾಮರಾಜನಗರ ಗಡಿಯ ತಾಳವಾಡಿ ಸಮೀಪದ ಗಾಜನೂರಿನಲ್ಲಿ ಡಾ. ರಾಜ್​ಕುಮಾರ್​ ಅವರು ಆಡಿ ಬೆಳೆದ ಮನೆ ಇದೆ. ಆ ಜಾಗ ಎಂದರೆ ಪುನೀತ್​ ರಾಜ್​ಕುಮಾರ್​ ಅವರಿಗೆ ಅಚ್ಚುಮೆಚ್ಚು ಆಗಿತ್ತು. ಅಲ್ಲಿಗೆ ಅವರು ಆಗಾಗ ಭೇಟಿ ನೀಡುತ್ತಿದ್ದರು. ಸದ್ಯ ಈ ಮನೆ ಕುಸಿಯುವ ಹಂತದಲ್ಲಿದೆ. ಕಳೆದ ಮೂರುವರೆ ತಿಂಗಳ ಹಿಂದೆ ಗಾಜನೂರಿನ ಹಳೆ ಮನೆಗೆ ಪುನೀತ್​ ಭೇಟಿ ನೀಡಿದ್ದರು. ಈ ವರ್ಷ ಸುರಿದ ಭಾರಿ ಮಳೆಯಿಂದಾಗಿ ಈ ಮನೆಗೆ ಹಾನಿ ಆಗಿದೆ. ಹಾಗಾಗಿ ಅದನ್ನು ದುರಸ್ತಿ ಮಾಡಿಸಲು ಅಪ್ಪು ನಿರ್ಧರಿಸಿದ್ದರು.

ಗಾಜನೂರಿಗೆ ಮತ್ತೆ ಬಂದು ಅಪ್ಪಾಜಿಯವರ ಹಳೇ ಮನೆಯನ್ನು ದುರಸ್ತಿ ಮಾಡಿಸುವುದಾಗಿ ಪುನೀತ್​ ರಾಜ್​ಕುಮಾರ್​ ಅವರು ಹೇಳಿದ್ದರು. ಆದರೆ ಆ ಕಾರ್ಯ ನೆರವೇರುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದರು. ಅಪ್ಪು ಅಂದುಕೊಂಡ ಕೆಲಸವನ್ನು ಈಗ ಅವರ ಕುಟುಂಬದವರು ಪೂರ್ಣಗೊಳಿಸಲು ತೀರ್ಮಾನಿಸಿದ್ದಾರೆ. ಪುನೀತ್​ ಮತ್ತು ರಾಜ್​ಕುಮಾರ್​ ಅವರ ನೆನಪುಗಳನ್ನು ಆ ಮನೆಯ ಮೂಲಕ ಶಾಶ್ವತವಾಗಿಸಲು ಪ್ಲ್ಯಾನ್​ ಮಾಡಲಾಗಿದೆ. ಮನೆಯನ್ನು ಮ್ಯೂಸಿಯಂ ರೀತಿ ಬದಲಾಯಿಸಿ, ಅಲ್ಲಿ ರಾಜ್​ಕುಮಾರ್​ ಅವರ ಫೋಟೋಗಳನ್ನು ಇರಿಸಲಾಗುವುದು. ಅಭಿಮಾನಿಗಳಿಗೆ ಮನೆ ವೀಕ್ಷಿಸಲು ಅವಕಾಶ ನೀಡಲಾಗುವುದು ಎಂದು ಡಾ. ರಾಜ್ ಸಹೋದರಿಯ ಪುತ್ರ ಗೋಪಾಲ್ ಅವರು ಹೇಳಿಕೆ ನೀಡಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ.

ಇದನ್ನೂ ಓದಿ:

ಪುನೀತ್​ ನಿಧನದ ಬಳಿಕ ರಾಘಣ್ಣ ನಟನೆಯ ಮೊದಲ ಚಿತ್ರ ‘ರಾಜಿ’; ಮುಹೂರ್ತದ ವೇಳೆ ಭಾವುಕ ಮಾತು

‘ಪುನೀತ್​ ಅಣ್ಣ ಇಲ್ಲದೇ ನಾವು ತಬ್ಬಲಿ ಆಗಿದ್ದೇವೆ’: ಅಪ್ಪು ಹೇಳಿಕೊಟ್ಟ ಪಾಠಗಳ ಬಗ್ಗೆ ನಿಖಿಲ್​ ಮಾತು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?