AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr Rajkumar: ಡಾ. ರಾಜ್​ಕುಮಾರ್​​ ನಟನೆಯ ‘ಭಾಗ್ಯವಂತರು’ ಚಿತ್ರ ಜುಲೈ 8ಕ್ಕೆ ಮತ್ತೆ ರಿಲೀಸ್​; ಈ ಬಾರಿ ವಿಶೇಷ ಏನು?

Bhagyavantharu Kannada Movie: ಸೂಪರ್ ಹಿಟ್​ ‘ಭಾಗ್ಯವಂತರು’ ಚಿತ್ರ ಮರು ಬಿಡುಗಡೆ ಆಗುತ್ತಿದೆ. ಜುಲೈ 8ರಂದು ದೊಡ್ಡ ಪರದೆಯಲ್ಲಿ ಮತ್ತೆ ಅಣ್ಣಾವ್ರನ್ನು ನೋಡಿ ಎಂಜಾಯ್​ ಮಾಡಲು ಅಭಿಮಾನಿಗಳು ಕಾದಿದ್ದಾರೆ.

Dr Rajkumar: ಡಾ. ರಾಜ್​ಕುಮಾರ್​​ ನಟನೆಯ ‘ಭಾಗ್ಯವಂತರು’ ಚಿತ್ರ ಜುಲೈ 8ಕ್ಕೆ ಮತ್ತೆ ರಿಲೀಸ್​; ಈ ಬಾರಿ ವಿಶೇಷ ಏನು?
‘ಭಾಗ್ಯವಂತರು’ ಸಿನಿಮಾ ಪೋಸ್ಟರ್​
TV9 Web
| Edited By: |

Updated on:Jun 27, 2022 | 9:58 AM

Share

ಮೇರುನಟ ಡಾ. ರಾಜ್​ಕುಮಾರ್​ (Dr Rajkumar) ಮೇಲೆ ಜನರು ಇಟ್ಟಿರುವ ಅಭಿಮಾನ ಎಂದಿಗೂ ಕಡಿಮೆ ಆಗುವಂಥದ್ದಲ್ಲ. ಅವರು ನಟಿಸಿದ ಅನೇಕ ಸಿನಿಮಾಗಳು ಈಗಾಗಲೇ ಮರುಬಿಡುಗಡೆ ಆಗಿ ದಾಖಲೆ ಮಾಡಿವೆ. ಈಗ ಮತ್ತೊಮ್ಮೆ ‘ಭಾಗ್ಯವಂತರು’ ಸಿನಿಮಾ ರಿಲೀಸ್​ ಆಗಲಿದೆ. ದ್ವಾರಕೀಶ್​ ನಿರ್ಮಾಣ ಮಾಡಿದ್ದ ಈ ಸಿನಿಮಾದಲ್ಲಿ ಡಾ. ರಾಜ್​ಕುಮಾರ್​ ಮತ್ತು ಬಿ. ಸರೋಜಾದೇವಿ (B Sarojadevi) ಅವರು ಜೋಡಿಯಾಗಿ ನಟಿಸಿದ್ದರು. ಅಭಿಮಾನಿಗಳ ಫೇವರಿಟ್​ ಸಿನಿಮಾಗಳ ಪಟ್ಟಿಯಲ್ಲಿ ‘ಭಾಗ್ಯವಂತರು’ (Bhagyavantharu) ಚಿತ್ರ ಇಂದಿಗೂ ಸ್ಥಾನ ಪಡೆದುಕೊಂಡಿದೆ. ಈ ಚಿತ್ರಕ್ಕೆ ಹೊಸ ತಂತ್ರಜ್ಞಾನ ಅಳವಡಿಸಲಾಗಿದ್ದು, ಮುನಿರಾಜು ಎಂ. ಅವರು ಮರು ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ. ಜುಲೈ 8ರಂದು ಈ ಚಿತ್ರ ರಿ-ರಿಲೀಸ್​ ಆಗಲಿದೆ. ಇದು ಡಾ. ರಾಜ್​ಕುಮಾರ್​ ಅಭಿಮಾನಿಗಳಿಗೆ ಖುಷಿ ನೀಡಿದೆ. ದೊಡ್ಡ ಪರದೆಯಲ್ಲಿ ಮತ್ತೆ ಅಣ್ಣಾವ್ರನ್ನು ನೋಡಿ ಎಂಜಾಯ್​ ಮಾಡಲು ಫ್ಯಾನ್ಸ್​ ಸಜ್ಜಾಗಿದ್ದಾರೆ.

‘ಭಾಗ್ಯವಂತರು’ ಸಿನಿಮಾ ತೆರೆಕಂಡಿದ್ದು 1974ರಲ್ಲಿ. ಈಗ ಬರೋಬ್ಬರಿ 48 ವರ್ಷಗಳ ಬಳಿಕ ಈ ಸಿನಿಮಾ ಮತ್ತೆ ಚಿತ್ರಮಂದಿರದಲ್ಲಿ ಪ್ರದರ್ಶನ ಕಾಣಲಿದೆ. ಈ ಬಾರಿ ಒಂದಷ್ಟು ಹೊಸ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. 7.1 ಡಿಜಿಟಲ್ ಸೌಂಡ್, ಕಲರಿಂಗ್, ಡಿಟಿಎಸ್ ಮುಂತಾದ ಆಧುನಿಕ ಸೌಲಭ್ಯಗಳೊಂದಿಗೆ ಈ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜುಲೈ 8ರಂದು ರಾಜ್ಯಾದ್ಯಂತ 50ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ಭಾಗ್ಯವಂತರು’ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಮುನಿರಾಜು ತಿಳಿಸಿದ್ದಾರೆ.

ಮುನಿರಾಜು ಅವರು ಡಾ. ರಾಜಕುಮಾರ್ ಅವರ ಅಪ್ಪಟ ಅಭಿಮಾನಿ. ಅಣ್ಣಾವ್ರ ಸಿನಿಮಾಗಳು ಎಂದರೆ ಅವರಿಗೆ ಸಖತ್​ ಇಷ್ಟ. ಈ ಹಿಂದೆ ‘ಆಪರೇಷನ್ ಡೈಮೆಂಡ್ ರಾಕೇಟ್’, ‘ನಾನೊಬ್ಬ ಕಳ್ಳ’, ‘ದಾರಿ ತಪ್ಪಿದ ಮಗ’ ಸೇರಿದಂತೆ ಕೆಲವು ಸಿನಿಮಾಗಳನ್ನು ಹೊಸ ತಂತ್ರಜ್ಞಾನದೊಂದಿಗೆ ಅವರು ಬಿಡುಗಡೆ ಮಾಡಿದ್ದರು. ಈಗ ‘ಭಾಗ್ಯವಂತರು’ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ‘ಹುಲಿ ಹಾಲಿನ ಮೇವು’ ಸೇರಿದಂತೆ ಡಾ. ರಾಜ್​ಕುಮಾರ್​ ನಟನೆಯ ಇನ್ನಷ್ಟು ಐಕಾನಿಕ್​ ಸಿನಿಮಾಗಳನ್ನು ಹೊಸ ತಂತ್ರಜ್ಞಾನದೊಂದಿಗೆ ರೀ-ರಿಲೀಸ್​ ಮಾಡಬೇಕು ಎಂಬ ಆಲೋಚನೆ ಅವರಿಗಿದೆ.

ಇದನ್ನೂ ಓದಿ
Image
ಡಾ. ರಾಜ್​ ಭೇಟಿ ಮಾಡಿದ್ದ ದ್ರಾವಿಡ್​, ಶ್ರೀನಾಥ್​, ಕುಂಬ್ಳೆ; ಅಪರೂಪದ ಮಾಹಿತಿ ತೆರೆದಿಟ್ಟ ರಾಘಣ್ಣ
Image
Dr Rajkumar Birth Anniversary: ಡಾ.ರಾಜ್​ಕುಮಾರ್ ಅಪರೂಪದ ಫೋಟೋಗಳು ಹಾಗೂ ಮೇರುನಟನ ಕುರಿತ ವಿಶೇಷ ಸಂಗತಿಗಳು ಇಲ್ಲಿವೆ
Image
Dr Rajkumar: ‘ನಿನದೇ ನೆನಪು ದಿನವೂ ಮನದಲ್ಲಿ..’: ಡಾ. ರಾಜ್​ ಜನ್ಮದಿನಕ್ಕೆ ಪುನೀತ್​ ವಿಶ್​ ಮಾಡಿದ್ದ ವಿಡಿಯೋ ವೈರಲ್​
Image
ರಾಜ್​ಕುಮಾರ್​ ಗೌರವ ಡಾಕ್ಟರೇಟ್​ ಪಡೆದು 46 ವರ್ಷ ಪೂರ್ಣ; ಕೋಟ್ಯಂತರ ಜನರಿಗೆ ವರನಟ ಸ್ಫೂರ್ತಿ

ಇದನ್ನೂ ಓದಿ: ‘ಬೈರಾಗಿ’ ಯಾತ್ರೆ: ಡಾ. ರಾಜ್​ ಹುಟ್ಟಿ ಬೆಳೆದ ಗಾಜನೂರು ನೋಡಲು ಶಿವಣ್ಣನ ಜತೆ ಹೊರಟ ಡಾಲಿ ಧನಂಜಯ

‘ಡಾ. ರಾಜ್​ಕುಮಾರ್​ ಬಗ್ಗೆ ಅವರ ತಂದೆ ನುಡಿದಿದ್ರು ಭವಿಷ್ಯ’: ಅಚ್ಚರಿಯ ಘಟನೆ ಮೆಲುಕು ಹಾಕಿದ ರಾಘಣ್ಣ

Published On - 9:57 am, Mon, 27 June 22

Follow Us
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ