AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr Rajkumar: ಡಾ. ರಾಜ್​ಕುಮಾರ್​​ ನಟನೆಯ ‘ಭಾಗ್ಯವಂತರು’ ಚಿತ್ರ ಜುಲೈ 8ಕ್ಕೆ ಮತ್ತೆ ರಿಲೀಸ್​; ಈ ಬಾರಿ ವಿಶೇಷ ಏನು?

Bhagyavantharu Kannada Movie: ಸೂಪರ್ ಹಿಟ್​ ‘ಭಾಗ್ಯವಂತರು’ ಚಿತ್ರ ಮರು ಬಿಡುಗಡೆ ಆಗುತ್ತಿದೆ. ಜುಲೈ 8ರಂದು ದೊಡ್ಡ ಪರದೆಯಲ್ಲಿ ಮತ್ತೆ ಅಣ್ಣಾವ್ರನ್ನು ನೋಡಿ ಎಂಜಾಯ್​ ಮಾಡಲು ಅಭಿಮಾನಿಗಳು ಕಾದಿದ್ದಾರೆ.

Dr Rajkumar: ಡಾ. ರಾಜ್​ಕುಮಾರ್​​ ನಟನೆಯ ‘ಭಾಗ್ಯವಂತರು’ ಚಿತ್ರ ಜುಲೈ 8ಕ್ಕೆ ಮತ್ತೆ ರಿಲೀಸ್​; ಈ ಬಾರಿ ವಿಶೇಷ ಏನು?
‘ಭಾಗ್ಯವಂತರು’ ಸಿನಿಮಾ ಪೋಸ್ಟರ್​
TV9 Web
| Edited By: |

Updated on:Jun 27, 2022 | 9:58 AM

Share

ಮೇರುನಟ ಡಾ. ರಾಜ್​ಕುಮಾರ್​ (Dr Rajkumar) ಮೇಲೆ ಜನರು ಇಟ್ಟಿರುವ ಅಭಿಮಾನ ಎಂದಿಗೂ ಕಡಿಮೆ ಆಗುವಂಥದ್ದಲ್ಲ. ಅವರು ನಟಿಸಿದ ಅನೇಕ ಸಿನಿಮಾಗಳು ಈಗಾಗಲೇ ಮರುಬಿಡುಗಡೆ ಆಗಿ ದಾಖಲೆ ಮಾಡಿವೆ. ಈಗ ಮತ್ತೊಮ್ಮೆ ‘ಭಾಗ್ಯವಂತರು’ ಸಿನಿಮಾ ರಿಲೀಸ್​ ಆಗಲಿದೆ. ದ್ವಾರಕೀಶ್​ ನಿರ್ಮಾಣ ಮಾಡಿದ್ದ ಈ ಸಿನಿಮಾದಲ್ಲಿ ಡಾ. ರಾಜ್​ಕುಮಾರ್​ ಮತ್ತು ಬಿ. ಸರೋಜಾದೇವಿ (B Sarojadevi) ಅವರು ಜೋಡಿಯಾಗಿ ನಟಿಸಿದ್ದರು. ಅಭಿಮಾನಿಗಳ ಫೇವರಿಟ್​ ಸಿನಿಮಾಗಳ ಪಟ್ಟಿಯಲ್ಲಿ ‘ಭಾಗ್ಯವಂತರು’ (Bhagyavantharu) ಚಿತ್ರ ಇಂದಿಗೂ ಸ್ಥಾನ ಪಡೆದುಕೊಂಡಿದೆ. ಈ ಚಿತ್ರಕ್ಕೆ ಹೊಸ ತಂತ್ರಜ್ಞಾನ ಅಳವಡಿಸಲಾಗಿದ್ದು, ಮುನಿರಾಜು ಎಂ. ಅವರು ಮರು ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ. ಜುಲೈ 8ರಂದು ಈ ಚಿತ್ರ ರಿ-ರಿಲೀಸ್​ ಆಗಲಿದೆ. ಇದು ಡಾ. ರಾಜ್​ಕುಮಾರ್​ ಅಭಿಮಾನಿಗಳಿಗೆ ಖುಷಿ ನೀಡಿದೆ. ದೊಡ್ಡ ಪರದೆಯಲ್ಲಿ ಮತ್ತೆ ಅಣ್ಣಾವ್ರನ್ನು ನೋಡಿ ಎಂಜಾಯ್​ ಮಾಡಲು ಫ್ಯಾನ್ಸ್​ ಸಜ್ಜಾಗಿದ್ದಾರೆ.

‘ಭಾಗ್ಯವಂತರು’ ಸಿನಿಮಾ ತೆರೆಕಂಡಿದ್ದು 1974ರಲ್ಲಿ. ಈಗ ಬರೋಬ್ಬರಿ 48 ವರ್ಷಗಳ ಬಳಿಕ ಈ ಸಿನಿಮಾ ಮತ್ತೆ ಚಿತ್ರಮಂದಿರದಲ್ಲಿ ಪ್ರದರ್ಶನ ಕಾಣಲಿದೆ. ಈ ಬಾರಿ ಒಂದಷ್ಟು ಹೊಸ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. 7.1 ಡಿಜಿಟಲ್ ಸೌಂಡ್, ಕಲರಿಂಗ್, ಡಿಟಿಎಸ್ ಮುಂತಾದ ಆಧುನಿಕ ಸೌಲಭ್ಯಗಳೊಂದಿಗೆ ಈ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜುಲೈ 8ರಂದು ರಾಜ್ಯಾದ್ಯಂತ 50ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ಭಾಗ್ಯವಂತರು’ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಮುನಿರಾಜು ತಿಳಿಸಿದ್ದಾರೆ.

ಮುನಿರಾಜು ಅವರು ಡಾ. ರಾಜಕುಮಾರ್ ಅವರ ಅಪ್ಪಟ ಅಭಿಮಾನಿ. ಅಣ್ಣಾವ್ರ ಸಿನಿಮಾಗಳು ಎಂದರೆ ಅವರಿಗೆ ಸಖತ್​ ಇಷ್ಟ. ಈ ಹಿಂದೆ ‘ಆಪರೇಷನ್ ಡೈಮೆಂಡ್ ರಾಕೇಟ್’, ‘ನಾನೊಬ್ಬ ಕಳ್ಳ’, ‘ದಾರಿ ತಪ್ಪಿದ ಮಗ’ ಸೇರಿದಂತೆ ಕೆಲವು ಸಿನಿಮಾಗಳನ್ನು ಹೊಸ ತಂತ್ರಜ್ಞಾನದೊಂದಿಗೆ ಅವರು ಬಿಡುಗಡೆ ಮಾಡಿದ್ದರು. ಈಗ ‘ಭಾಗ್ಯವಂತರು’ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ‘ಹುಲಿ ಹಾಲಿನ ಮೇವು’ ಸೇರಿದಂತೆ ಡಾ. ರಾಜ್​ಕುಮಾರ್​ ನಟನೆಯ ಇನ್ನಷ್ಟು ಐಕಾನಿಕ್​ ಸಿನಿಮಾಗಳನ್ನು ಹೊಸ ತಂತ್ರಜ್ಞಾನದೊಂದಿಗೆ ರೀ-ರಿಲೀಸ್​ ಮಾಡಬೇಕು ಎಂಬ ಆಲೋಚನೆ ಅವರಿಗಿದೆ.

ಇದನ್ನೂ ಓದಿ
Image
ಡಾ. ರಾಜ್​ ಭೇಟಿ ಮಾಡಿದ್ದ ದ್ರಾವಿಡ್​, ಶ್ರೀನಾಥ್​, ಕುಂಬ್ಳೆ; ಅಪರೂಪದ ಮಾಹಿತಿ ತೆರೆದಿಟ್ಟ ರಾಘಣ್ಣ
Image
Dr Rajkumar Birth Anniversary: ಡಾ.ರಾಜ್​ಕುಮಾರ್ ಅಪರೂಪದ ಫೋಟೋಗಳು ಹಾಗೂ ಮೇರುನಟನ ಕುರಿತ ವಿಶೇಷ ಸಂಗತಿಗಳು ಇಲ್ಲಿವೆ
Image
Dr Rajkumar: ‘ನಿನದೇ ನೆನಪು ದಿನವೂ ಮನದಲ್ಲಿ..’: ಡಾ. ರಾಜ್​ ಜನ್ಮದಿನಕ್ಕೆ ಪುನೀತ್​ ವಿಶ್​ ಮಾಡಿದ್ದ ವಿಡಿಯೋ ವೈರಲ್​
Image
ರಾಜ್​ಕುಮಾರ್​ ಗೌರವ ಡಾಕ್ಟರೇಟ್​ ಪಡೆದು 46 ವರ್ಷ ಪೂರ್ಣ; ಕೋಟ್ಯಂತರ ಜನರಿಗೆ ವರನಟ ಸ್ಫೂರ್ತಿ

ಇದನ್ನೂ ಓದಿ: ‘ಬೈರಾಗಿ’ ಯಾತ್ರೆ: ಡಾ. ರಾಜ್​ ಹುಟ್ಟಿ ಬೆಳೆದ ಗಾಜನೂರು ನೋಡಲು ಶಿವಣ್ಣನ ಜತೆ ಹೊರಟ ಡಾಲಿ ಧನಂಜಯ

‘ಡಾ. ರಾಜ್​ಕುಮಾರ್​ ಬಗ್ಗೆ ಅವರ ತಂದೆ ನುಡಿದಿದ್ರು ಭವಿಷ್ಯ’: ಅಚ್ಚರಿಯ ಘಟನೆ ಮೆಲುಕು ಹಾಕಿದ ರಾಘಣ್ಣ

Published On - 9:57 am, Mon, 27 June 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್