AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​​ಕುಮಾರ್ ಹಾಗೂ ಪಾರ್ವತಮ್ಮಗೆ ಇಷ್ಟ ಆಗಿತ್ತು ಆ ಒಂದು ಸಿನಿಮಾ

ಡಾ. ರಾಜ್‌ಕುಮಾರ್ ಮತ್ತು ಪಾರ್ವತಮ್ಮ ರಾಜ್‌ಕುಮಾರ್ ಇಬ್ಬರಿಗೂ ಅಚ್ಚುಮೆಚ್ಚಿನ ಸಿನಿಮಾ 'ರಾಘವೇಂದ್ರ ಮಹಾತ್ಮೆ'ಯ ಹಿಂದಿನ ಕಥೆ ಇದು. ಅಣ್ಣಾವ್ರ ಸಿನಿ ಪಯಣಕ್ಕೆ ಪಾರ್ವತಮ್ಮ ಅವರ ಬೆಂಬಲ ಅತಿ ದೊಡ್ಡದು. ಮಂತ್ರಾಲಯದ ಭೇಟಿಯ ನಂತರ ರಾಜ್‌ಕುಮಾರ್‌ಗೆ ಈ ಮಹತ್ವದ ಸಿನಿಮಾ ಮಾಡುವ ಆಲೋಚನೆ ಬಂತು.

ರಾಜ್​​ಕುಮಾರ್ ಹಾಗೂ ಪಾರ್ವತಮ್ಮಗೆ ಇಷ್ಟ ಆಗಿತ್ತು ಆ ಒಂದು ಸಿನಿಮಾ
ಪಾರ್ವತಿ-ರಾಜ್​​ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 02, 2026 | 7:56 AM

Share

ರಾಜ್​​ಕುಮಾರ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಇದ್ದರು. ಅವರ ಸಿನಿ ಜರ್ನಿಗೆ ಬೆಂಬಲವಾಗಿ ನಿಂತಿದ್ದು ಎಂದರೆ ಅದು ಪಾರ್ವತಮ್ಮ ಅವರು. ಪಾರ್ವತಮ್ಮ ಅವರು ನಿರ್ಮಾಪಕಿ ಆಗಿ ಚಿತ್ರರಂಗದಲ್ಲಿ ಗಮನ ಸೆಳೆದರು. ಈಗ ಪಾರ್ವತಮ್ಮ ಅವರ ಬಗೆಗಿನ ಒಂದು ಅಚ್ಚರಿಯ ವಿಷಯ ಹೇಳಲೇಬೇಕು. ರಾಜ್​​​ಕುಮಾರ್ ಅವರಿಗೆ ಹೆಚ್ಚು ಇಷ್ಟ ಆದ ಸಿನಿಮಾವೇ ಪಾರ್ವತಮ್ಮ ಅವರಿಗೂ ಹೆಚ್ಚು ಇಷ್ಟ ಆಗಿತ್ತು.

ರಾಜ್​​ಕುಮಾರ್ ಅವರ ಸಿನಿಮಾಗಳ ಪೈಕಿ ಯಾವ ಸಿನಿಮಾ ಹೆಚ್ಚು ಇಷ್ಟ ಎಂದು ಅವರಿಗೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ್ದ ಅವರು, ‘ನನಗೆ ರಾಜ್​​​ಕುಮಾರ್ ಅವರ ಎಲ್ಲ ಸಿನಿಮಾಗಳೂ ಇಷ್ಟ. ಆದರೆ, ಅದರಲ್ಲೂ ರಾಘವೇಂದ್ರ ಮಹಾತ್ಮೆ’ ತುಂಬಾನೇ ಇಷ್ಟ ಎಂದು ಪಾರ್ವತಮ್ಮ ಅವರು ಹೇಳಿಕೊಂಡಿದ್ದರು. ಈ ಚಿತ್ರವು 1966ರಲ್ಲಿ ರಿಲೀಸ್ ಆಯಿತು. ರಾಘವೇಂದ್ರ ಸ್ವಾಮಿ ಬಗ್ಗೆ, ಅವರ ಪವಾಡಗಳ ಬಗ್ಗೆ ಸಿನಿಮಾ ಇತ್ತು.

ಇಲ್ಲೊಂದು ಅಚ್ಚರಿಯ ವಿಷಯ ಇದೆ. ರಾಜ್​​ಕುಮಾರ್ ಅವರ ಪ್ರೀತಿಯ ಸಿನಿಮಾಗಳ ಪೈಕಿ ಮೊದಲ ಸ್ಥಾನ ಇದ್ದಿದ್ದು ‘ರಾಘವೇಂದ್ರ ಮಹಾತ್ಮೆ’ ಚಿತ್ರಕ್ಕೆ. ಈ ಮೊದಲು ಈ ಬಗ್ಗೆ ಮಾತನಾಡಿದ್ದ ರಾಜ್​​ಕುಮಾರ್ ಅವರು, ‘ನನಗೆ ನನ್ನ ವೃತ್ತಿ ಜೀವನದಲ್ಲಿ ಅತಿ ಇಷ್ಟವಾದ ಸಿನಿಮಾ ಎಂದರೆ ರಾಘವೇಂದ್ರ ಮಹಾತ್ಮೆ. ಅದನ್ನು ನೋಡುವಂತೆ ನಾನು ಅಭಿಮಾನಿಗಳ ಬಳಿ ಕೋರುತ್ತೇನೆ. ಮತ್ಯಾವ ಸಿನಿಮಾಗಳನ್ನು ನೋಡಿ ಎಂದು ನಾನು ಪ್ರೇಕ್ಷಕರ ಬಳಿ ಹೇಳಲ್ಲ ಎಂದು ರಾಜ್​​ಕುಮಾರ್ ಈ ಮೊದಲು ಹೇಳಿಕೊಂಡಿದ್ದರು.

ಇದನ್ನೂ ಓದಿ: ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್​​ಕುಮಾರ್​​ ಇಳಿಸಲು ನಡೆದಿತ್ತು ಪ್ಲ್ಯಾನ್

ರಾಜ್​​​ಕುಮಾರ್ ಅವರು ಮಂತ್ರಾಲಯಕ್ಕೆ ತೆರಳಿದ್ದರಂತೆ. ಈ ಸಂದರ್ಭದಲ್ಲಿ ಅಲ್ಲಿ ಅವರು ರಾಯರ ಗುಡಿಯಲ್ಲಿ ಮಲಗಿದ್ದರು. ಬೆಳಿಗ್ಗೆ ನೇರವಾಗಿ ಬೆಂಗಳೂರಿಗೆ ಬಂದ ಅವರಿಗೆ ಸಿನಿಮಾ ಮಾಡಬೇಕು ಎಂಬ ಆಲೋಚನೆ ಬಂತು. ಅದನ್ನು ಮಾಡಿಯೇ ಬಿಟ್ಟರು. ಈ ರೀತಿಯಲ್ಲಿ ‘ರಾಘವೇಂದ್ರ ಮಹಾತ್ಮೆ’ ಸಿನಿಮಾ ಮೂಡಿಬಂತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​