AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr. Rajkumar Birth Anniversary: ರಾಜ್​ಕುಮಾರ್​ ಜತೆ ಫೋಟೋ ತೆಗೆಸಿಕೊಳ್ಳಲು ಲವರ್​​ ಕಾಯಿಸಿದ್ದೆ

ಅದು 1999ನೇ ಇಸವಿ. ಆಗ ಅಣ್ಣಾವ್ರು ಅವರ ಕೊನೆಯ ಸಿನಿಮಾ ಶಬ್ದವೇದಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಆ ಸಮಯದಲ್ಲಿ ವಿಧಾನ ಸೌಧ ಹತ್ತಿರ ಕೆ.ಆರ್​. ವೃತ್ತದಲ್ಲಿ ಶಬ್ದವೇದಿ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿತ್ತು

Dr. Rajkumar Birth Anniversary: ರಾಜ್​ಕುಮಾರ್​ ಜತೆ ಫೋಟೋ ತೆಗೆಸಿಕೊಳ್ಳಲು ಲವರ್​​ ಕಾಯಿಸಿದ್ದೆ
ರಾಜೇಶ್ ದುಗ್ಗುಮನೆ
| Edited By: |

Updated on: Apr 24, 2021 | 7:32 AM

Share

ಡಾ. ರಾಜ್​ಕುಮಾರ್​ ಅವರನ್ನು ಕಣ್ತುಂಬಿಕೊಳ್ಳುವ ಭಾಗ್ಯ ಅನೇಕರಿಗೆ ಒದಗಿ ಬಂದಿದ್ದುಂಟು. ಆದರೆ, ಕ್ಯಾಮೆರಾಗಳು ಅಷ್ಟಾಗಿ ಬಳಕೆ ಇಲ್ಲದ ಆ ಕಾಲದಲ್ಲೂ ಫೋಟೋ ತೆಗೆಸಿಕೊಳ್ಳುವ ಅದೃಷ್ಟ ಎಲ್ಲರಿಗೂ ಸಿಕ್ಕಿಲ್ಲ. ಈ ರೀತಿ ಫೋಟೋ ತೆಗೆಸಿಕೊಂಡ ಅದೃಷ್ಟವಂತರಲ್ಲಿ ಬೆಂಗಳೂರಿನ ಬನಶಂಕರಿಯ ಚಂದ್ರ ಶೇಖರ್. ಆರ್ ಕೂಡ ಒಬ್ಬರು. ಅವರು ರಾಜ್​ಕುಮಾರ್​ ಅವರನ್ನ ಭೇಟಿ ಆದ ಅಪರೂಪದ ಘಟನೆಯನ್ನು ಟಿವಿ9 ಕನ್ನಡ ಡಿಜಿಟಲ್​ ಜತೆ ಹಂಚಿಕೊಂಡಿದ್ದಾರೆ. 

ಅದು 1999ನೇ ಇಸವಿ. ಆಗ ಅಣ್ಣಾವ್ರು ಅವರ ಕೊನೆಯ ಸಿನಿಮಾ ಶಬ್ದವೇದಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಆ ಸಮಯದಲ್ಲಿ ವಿಧಾನ ಸೌಧ ಹತ್ತಿರ ಕೆ.ಆರ್​. ವೃತ್ತದಲ್ಲಿ ಶಬ್ದವೇದಿ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿತ್ತು. ಅಶ್ವಥ್ ಅವರನ್ನು ಅಣ್ಣಾವ್ರು ಚೇಸ್ ಮಾಡಿ ಹಿಡಿಯುವ ದೃಶ್ಯದ ಚಿತ್ರೀಕರಣವಾಗುತ್ತಿತ್ತು.

ನನಗೆ ಆಗಿನ್ನೂ ಮದುವೆ ಆಗಿರಲಿಲ್ಲ. ಶಾಂತಿ ಎಂಬುವವರನ್ನು ಪ್ರೀತಿಸುತ್ತಿದೆ. ನಂತರ ಅವರನ್ನೇ ಮದುವೆ ಆದೆ. ಪ್ರೀತಿ ಮಾಡುತ್ತಿದ್ದ ದಿನಗಳಲ್ಲಿ  ನಾವಿಬ್ಬರೂ ಸೈಕಲ್​​ನಲ್ಲಿ ವಿಧಾನ ಸೌಧ ನೋಡಲು ಹೋಗುತ್ತಿದ್ದೆವು. ಶೂಟಿಂಗ್​ ನಡೆಯುತ್ತಿದ್ದ ದಿನವದು. ನಾನು ವಿಧಾನಸೌಧ ಬಳಿ ಹೋದಾಗ ಒಂದು ಗುಂಪು ಕಾಣಿಸಿತು. ನಾನು ಶಾಂತಿಯನ್ನು ಅಲ್ಲೇ ನಿಲ್ಲಿಸಿ ಆ ಗುಂಪು ಏನೆಂದು ನೋಡಲು ಹೋದೆ. ನನ್ನ ಏಳೇಳು ಜನ್ಮದ ಪುಣ್ಯವೋ ಏನೋ. ಆ ಗುಂಪಿನ ಒಳಗೆ ನುಗ್ಗಿ ನೋಡಿದಾಗ ರಾಜ್​​ಕುಮಾರ್​ ಅವರು ಕಂಡರು.

ಅಣ್ಣಾವ್ರು ಜತೆ ಒಂದು ಫೋಟೋ ತೆಗಿಸಿಕೊಳ್ಳಲೇ ಬೇಕೆಂದು ಹಠಕ್ಕೆ ಬಿದ್ದೆ. ಅಲ್ಲೇ ಕಾಯುತ್ತಾ ನಿಂತೆ. ಸಂಜೆ ಸುಮಾರು 4 ಗಂಟೆ ಆಗುತ್ತಾ ಬಂತು. ಊಟವೂ ಇಲ್ಲ. ಶಾಂತಿಯನ್ನು ನೋಡಲು ಹೋಗಲಿಲ್ಲ. ಕೊನೆಗೂ ಅಣ್ಣಾವ್ರು ಎಲ್ಲರ ಜೊತೆ ಫೋಟೋ ತೆಗಿಸಿಕೊಳ್ಳಲು ಮುಂದಾದರು. ಅಣ್ಣಾವ್ರ ಜೊತೆ ಜತೆ ಫೋಟೋ ತೆಗಿಸಿ ನನ್ನ ಜನ್ಮ ಪಾವನ ಆಯಿತು.

ಫೋಟೋ ತೆಗೆಸಿಕೊಳ್ಳುವಾಗ ಅಣ್ಣಾವ್ರು ನನ್ನ ಊರು ಯಾವುದು ಎಂದು ಕೇಳಿದರು. ಅದಕ್ಕೆ ನಾನು ಮೈಸೂರು ಎಂದೆ. ಆಗ ಅಣ್ಣಾವ್ರು, ನಮ್ಮ ಊರಿನ ಕಡೆಯವರು ಎಂದು ನಕ್ಕರು. ಬೆಳಗ್ಗೆ 11 ಗಂಟೆ ಇಂದ ಸಂಜೆ 4 ಗಂಟೆವರೆಗೆ ನನನ್ನೇ ಕಾಯುತ್ತಿದ್ದ ನನ್ನ ಪ್ರಿಯತಮೆ ಹತ್ತಿರ ಹೋದೆ. ಅವಳನ್ನು ನೋಡಿ ನನಗೆ ಪಾಪ ಎನ್ನಿಸಿತು. ಅವಳು ಕೊಂಚ ಭಯಗೊಂಡಿದ್ದಳು. ನಂತರ ಫೋಟೋ ತೆಗೆಸಿಕೊಂಡ ವಿಚಾರ ಹೇಳಿದಾಗ ಅವಳು ಖುಷಿಪಟ್ಟಳು.

ಇದನ್ನೂ ಓದಿ: ರಾಜ್​ಕುಮಾರ್​ ಕಿಡ್ನ್ಯಾಪ್​​ ಆದಾಗ ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿಯ ಎಕ್ಸ್​ಕ್ಲ್ಯೂಸಿವ್ ಸಂದರ್ಶನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?