AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘8 ದಿನದಲ್ಲಿ ಹೇಳ್ತೀನಿ ಎಂದವರ ಸುದ್ದಿಯೇ ಇರಲಿಲ್ಲ’; ‘ಬೇಡರ ಕಣ್ಣಪ್ಪ’ ಚಿತ್ರಕ್ಕೆ ಆಯ್ಕೆ ಆದ ಬಗ್ಗೆ ಮಾತನಾಡಿದ್ದ ರಾಜ್​ಕುಮಾರ್  

Dr. Rajkumar Birth Anniversary: ‘ಬೇಡರ ಕಣ್ಣಪ್ಪ’ ಚಿತ್ರದಲ್ಲಿ ನಾಯಕನಾಗಿ ನಟಿಸುವ ಮೂಲಕ ರಾಜ್​ಕುಮಾರ್ ಅವರು ಚಿತ್ರರಂಗಕ್ಕೆ ಪರಿಚಯಗೊಂಡರು. ಅದಕ್ಕೂ ಮೊದಲು ಅವರು ರಂಗಭೂಮಿಯಲ್ಲಿದ್ದರು.

‘8 ದಿನದಲ್ಲಿ ಹೇಳ್ತೀನಿ ಎಂದವರ ಸುದ್ದಿಯೇ ಇರಲಿಲ್ಲ’; ‘ಬೇಡರ ಕಣ್ಣಪ್ಪ’ ಚಿತ್ರಕ್ಕೆ ಆಯ್ಕೆ ಆದ ಬಗ್ಗೆ ಮಾತನಾಡಿದ್ದ ರಾಜ್​ಕುಮಾರ್  
ರಾಜ್​ಕುಮಾರ್
Follow us
ರಾಜೇಶ್ ದುಗ್ಗುಮನೆ
|

Updated on:Apr 24, 2023 | 8:05 AM

ಡಾ.ರಾಜ್​ಕುಮಾರ್ ಅವರಿಗೆ ಇಂದು (ಏಪ್ರಿಲ್ 24) ಜನ್ಮದಿನ. ಭೌತಿಕವಾಗಿ ಅವರು ನಮ್ಮೊಂದಿಗೆ ಇಲ್ಲ. ಆದರೆ, ರಾಜ್​ಕುಮಾರ್ ಅವರನ್ನು ಸ್ಮರಿಸುವ ಕಾರ್ಯ ಈಗಲೂ ಆಗುತ್ತಿದೆ. ಅವರು ಹಾಕಿಕೊಟ್ಟ  ಮಾರ್ಗದರ್ಶನವನ್ನು ಈಗಲೂ ಅನೇಕರು ಪಾಲಿಸುತ್ತಿದ್ದಾರೆ. ರಾಜ್​ಕುಮಾರ್ (Rajkumar) ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿಗಳು ಸಾಮಾಜಿಕ ಕೆಲಸ ಮಾಡುತ್ತಿದ್ದಾರೆ. ರಕ್ತದಾನ, ಅನ್ನದಾನ ಕೆಲಸಗಳು ಇಂದು ನಡೆಯುತ್ತಿವೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಣ್ಣಾವ್ರ ಸಮಾಧಿಗೆ ಕುಟುಂಬದವರು ಪೂಜೆ ಸಲ್ಲಿಸಲಿದ್ದಾರೆ. ರಾಜ್ ಸಮಾಧಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಿದ್ದಾರೆ. ರಾಜ್​ಕುಮಾರ್ ನಟಿಸಿದ ಮೊದಲ ಸಿನಿಮಾ ‘ಬೇಡರ ಕಣ್ಣಪ್ಪ’ (Bedara Kannappa). ಈ ಚಿತ್ರಕ್ಕೆ ಆಯ್ಕೆ ಆಗಿದ್ದು ಹೇಗೆ ಎನ್ನುವುದನ್ನು ಅವರು ಸಂದರ್ಶನ ಒಂದರಲ್ಲಿ ವಿವರಿಸಿದ್ದರು.

‘ಬೇಡರ ಕಣ್ಣಪ್ಪ’ ಚಿತ್ರದಲ್ಲಿ ನಾಯಕನಾಗಿ ನಟಿಸುವ ಮೂಲಕ ರಾಜ್​ಕುಮಾರ್ ಅವರು ಚಿತ್ರರಂಗಕ್ಕೆ ಪರಿಚಯಗೊಂಡರು. ಅದಕ್ಕೂ ಮೊದಲು ಅವರು ರಂಗಭೂಮಿಯಲ್ಲಿದ್ದರು. ಗುಬ್ಬಿ ವೀರಣ್ಣ ಕಂಪನಿಯಲ್ಲಿ ರಾಜ್​ಕುಮಾರ್ ಕಲಾವಿದರಾಗಿದ್ದರು. ‘ಒಂದು ದಿನ ಸ್ಕ್ರೀನ್ ಟೆಸ್ಟ್ ಇದೆ ಎಂದು ಕರೆದರು. ನಾಟಕದ ಬಗ್ಗೆ ನಮಗೆ ಗೊತ್ತು. ಇಲ್ಲಿ (ನಾಟಕದಲ್ಲಿ) ಕೈ ಬೀಸಿಕೊಂಡು ಮಾತನಾಡಬಹುದು. ಆದರೆ, ಸಿನಿಮಾದಲ್ಲಿ ಹಾಗಿರಲ್ಲ. ನಿಗದಿತ ಜಾಗದಲ್ಲಿ, ಹೇಳಿದ್ದಷ್ಟನ್ನೇ ನಟನೆ ಮಾಡಿ ತೋರಿಸಬೇಕು. ನವರಸಗಳನ್ನು ಹೊರಹಾಕಬೇಕು. ನಾನು ನಟಿಸಿ ತೋರಿಸಿದೆ’ ಎಂದು ರಾಜ್​ಕುಮಾರ್ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

‘8 ದಿನದಲ್ಲಿ ಫಲಿತಾಂಶ ತಿಳಿಸುತ್ತೇವೆ ಎಂದರು. 15 ದಿನ ಆದರೂ ಯಾವುದೇ ಸುದ್ದಿ ಇರಲಿಲ್ಲ. ನಂತರ ಒಂದು ಪತ್ರ ಬಂತು. ಸಿನಿಮಾ ಸ್ಕ್ರೀನ್​ಟೆಸ್ಟ್ ಓಕೆ ಆಗಿದೆ ಎಂದು ಲೆಟರ್​​ನಲ್ಲಿ ಬರೆದಿತ್ತು’ ಎಂದು ಆಯ್ಕೆ ಪ್ರಕ್ರಿಯೆ ಬಗ್ಗೆ ಅವರು ಹೇಳಿಕೊಂಡಿದ್ದರು. 1954ರಲ್ಲಿ ಬಂದ ‘ಬೇಡರ ಕಣ್ಣಪ್ಪ’ ಚಿತ್ರಕ್ಕೆ ಎಚ್​.ಎಲ್​.ಎನ್. ಸಿಂಹ ಅವರ ನಿರ್ದೇಶನ ಇತ್ತು. ಈ ಸಿನಿಮಾದಿಂದ ರಾಜ್​ಕುಮಾರ್ ಅವರ ಖ್ಯಾತಿ ಹೆಚ್ಚಿತು. ಬೇಡರ ಕಣ್ಣಪ್ಪನಾಗಿ ಅವರು ಗಮನ ಸೆಳೆದರು.

ಇದನ್ನೂ ಓದಿ:  ಡಾ. ರಾಜ್​ಕುಮಾರ್ ಪುಣ್ಯತಿಥಿ; ಅಣ್ಣಾವ್ರು ಎಂದಿಗೂ ಮರೆಯಾಗದ ನಕ್ಷತ್ರ

ರಾಜ್​ಕುಮಾರ್ ರಂಗಭೂಮಿ ಹಿನ್ನೆಲೆಯವರು. ಹೀಗಾಗಿ, ಅವರಿಗೆ ಪೌರಾಣಿಕ ಪಾತ್ರಗಳ ಬಗ್ಗೆ ವಿಶೇಷ ಪ್ರೀತಿ ಇತ್ತು. ಪಾತ್ರ ಮಾಡುವಾಗ ಅವರು ನಟಿಸುತ್ತಿರಲಿಲ್ಲ, ಜೀವಿಸುತ್ತಿದ್ದರು. ‘ಶಬ್ದವೇದಿ’ ಅವರ ನಟನೆಯ ಕೊನೆಯ ಸಿನಿಮಾ . ಈ ಸಿನಿಮಾ ಕೂಡ ಎಲ್ಲರ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:18 am, Mon, 24 April 23

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ