AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್​ನ ಶರ್ಟ್​ಲೆಸ್​ ಆಗಿ ನೋಡಬೇಕು ಎಂದು ಹಠ ಹಿಡಿದಿದ್ದ ಕಾಲೇಜು ಹುಡುಗಿಯರು

Rajkumar Birth Anniversary: ರಾಜ್​ಕುಮಾರ್ ಅನೇಕರಿಗೆ ಮಾದರಿ. ಅವರು ಫಿಟ್ನೆಸ್​ನ ಆ ರೀತಿಯಲ್ಲಿ ಕಾಪಾಡಿಕೊಂಡು ಹೋಗಿದ್ದರು. ಒಮ್ಮೆ ರಾಜ್​ಕುಮಾರ್ ಮನೆಗೆ ಬಂದಿದ್ದ ಕಾಲೇಜು ಹುಡುಗಿಯರು ಅಣ್ಣಾವ್ರನ್ನು ಶರ್ಟ್​ಲೆಸ್ ಆಗಿ ನೋಡಲು ಇಚ್ಛಿಸಿದ್ದರು. ಇದಕ್ಕೆ ಅವರು ಕೊಟ್ಟ ಕಾರಣ ಮಾತ್ರ ತುಂಬಾನೇ ವಿಚಿತ್ರವಾಗಿತ್ತು.

ರಾಜ್​ಕುಮಾರ್​ನ ಶರ್ಟ್​ಲೆಸ್​ ಆಗಿ ನೋಡಬೇಕು ಎಂದು ಹಠ ಹಿಡಿದಿದ್ದ ಕಾಲೇಜು ಹುಡುಗಿಯರು
ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Apr 24, 2024 | 7:00 AM

Share

ವರನಟ ಡಾ. ರಾಜ್​ಕುಮಾರ್ (Rajkumar) ಅವರು ದೊಡ್ಡ ಮಟ್ಟದಲ್ಲಿ ಗೆಲುವು ಕಂಡ ಕನ್ನಡದ ಸ್ಟಾರ್ ಹೀರೋ. ಅವರನ್ನು ಆರಾಧಿಸುವ ಕೋಟ್ಯಂತರ ಮಂದಿ ಈಗಲೂ ಇದ್ದಾರೆ. ರಾಜ್​ಕುಮಾರ್ ಇಂದು ನಮ್ಮೊಂದಿಗೆ ಇರದೇ ಇರಬಹುದು, ಆದರೆ ಅವರು ಹಾಕಿಕೊಟ್ಟ ಆದರ್ಶ, ಸಿನಿಮಾ, ನೆನಪು ಸದಾ ಜೀವಂತ. ಅವರಿಗೆ ಇಂದು (ಏಪ್ರಿಲ್ 24) ಜನ್ಮದಿನ. ಅವರ ಹೆಸರಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡಲಾಗುತ್ತಿದೆ. ರಾಜ್​ಕುಮಾರ್ ಸಮಾಧಿಗೆ ಕುಟುಂಬದವರು ಬಂದು ಪೂಜೆ ಸಲ್ಲಿಸೋ ಸಾಧ್ಯತೆ ಇದೆ. ರಾಜ್​ಕುಮಾರ್ ಬಗ್ಗೆ ಪಾರ್ವತಮ್ಮ ಹೇಳಿದ ಒಂದು ಅಪರೂಪದ ವಿಚಾರ ಇಲ್ಲಿದೆ.

ರಾಜ್​ಕುಮಾರ್ ಅವರು ಅನೇಕರಿಗೆ ಮಾದರಿ. ಅವರು ಫಿಟ್ನೆಸ್​ನ ಆ ರೀತಿಯಲ್ಲಿ ಕಾಪಾಡಿಕೊಂಡು ಹೋಗಿದ್ದರು. ಒಮ್ಮೆ ರಾಜ್​ಕುಮಾರ್ ಮನೆಗೆ ಬಂದಿದ್ದ ಕಾಲೇಜು ಹುಡುಗಿಯರು ಅಣ್ಣಾವ್ರನ್ನು ಶರ್ಟ್​ಲೆಸ್ ಆಗಿ ನೋಡಲು ಇಚ್ಛಿಸಿದ್ದರು. ಇದಕ್ಕೆ ಅವರು ಕೊಟ್ಟ ಕಾರಣ ಮಾತ್ರ ತುಂಬಾನೇ ವಿಚಿತ್ರವಾದದ್ದು. ಈ ಬಗ್ಗೆ ಪಾರ್ವತಮ್ಮ ಅವರು ಹೇಳಿಕೊಂಡಿದ್ದರು.

‘ಒಮ್ಮೆ ಮನೆಗೆ ಸುಮಾರು 25 ಕಾಲೇಜು ಹುಡುಗಿಯರು ಬಂದರು. ಅವರಿಗೆ ರಾಜ್​ಕುಮಾರ್ ಅವರನ್ನು ನೋಡೋ ಬಯಕೆ. ನನ್ನ ಬಳಿ ಬಂದು ರಾಜ್​ಕುಮಾರ್ ಅವರನ್ನು ನೋಡಬೇಕು ಎಂದರು. ಅವರು ಮಲಗಿದ್ದಾರೆ ಆ ಬಳಿಕ ಬನ್ನಿ ಎಂದು ಹೇಳಿ ಕಳುಹಿಸಿದೆ. ಆದರೆ, ಅವರು ಇದಕ್ಕೆ ಒಪ್ಪಲಿಲ್ಲ. ಕೊನೆಗೆ ನಾನು ಹೋಗಿ ಅವರನ್ನು ಎಬ್ಬಿಸಿದೆ. ಅವರು ಎದ್ದು ಬಂದರು’ ಎಂದರು ಪಾರ್ವತಮ್ಮ.

ಇದನ್ನೂ ಓದಿ: ಡಾ. ರಾಜ್​ಕುಮಾರ್​ ಜನ್ಮದಿನಕ್ಕೆ ‘ಮೈ ನೇಮ್ ಇಸ್ ರಾಜ್’ ಸಂಗೀತ ಕಾರ್ಯಕ್ರಮ

ಹುಡುಗಿಯರು ಇಟ್ಟ ಬೇಡಿಕೆ ಕೇಳಿ ಅವರಿಗೆ ಶಾಕ್ ಆಗಿತ್ತು. ‘ರಾಜ್​ಕುಮಾರ್ ಅವರನ್ನು ಶರ್ಟ್​ಲೆಸ್ ಆಗಿ ನೋಡಬೇಕು ಎಂದು ಕೇಳಿದರು. ನನಗೆ ಶಾಕ್ ಆಯಿತು. ಆಗ ಅವರು ದಯವಿಟ್ಟು ಬೇರೆ ಅರ್ಥದಲ್ಲಿ ತಿಳಿದುಕೊಳ್ಳಬೇಡಿ. ಸಿನಿಮಾದಲ್ಲಿ ಆ ರೀತಿ ಫಿಟ್ ಆಗಿ ಕಾಣುತ್ತಾರಲ್ಲ, ನಿಜಕ್ಕೂ ಹಾಗೆಯೇ ಇದ್ದಾರಾ ಅನ್ನೋದನ್ನು ನೋಡಬೇಕು. ಅದಕ್ಕಾಗಿ ಶರ್ಟ್​ಲೆಸ್ ಆಗಿ ನೋಡಬೇಕು ಎಂದು ಅವರು ನನ್ನ ಬಳಿ ಹೇಳಿದರು. ಕೊನೆಗೆ ರಾಜ್​ಕುಮಾರ್ ಅವರನ್ನು ಒಪ್ಪಿಸಬೇಕಾಯಿತು’ ಎಂದಿದ್ದರು ಪಾರ್ವತಮ್ಮ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:59 am, Wed, 24 April 24

Follow Us
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ