AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್​ನ ಶರ್ಟ್​ಲೆಸ್​ ಆಗಿ ನೋಡಬೇಕು ಎಂದು ಹಠ ಹಿಡಿದಿದ್ದ ಕಾಲೇಜು ಹುಡುಗಿಯರು

Rajkumar Birth Anniversary: ರಾಜ್​ಕುಮಾರ್ ಅನೇಕರಿಗೆ ಮಾದರಿ. ಅವರು ಫಿಟ್ನೆಸ್​ನ ಆ ರೀತಿಯಲ್ಲಿ ಕಾಪಾಡಿಕೊಂಡು ಹೋಗಿದ್ದರು. ಒಮ್ಮೆ ರಾಜ್​ಕುಮಾರ್ ಮನೆಗೆ ಬಂದಿದ್ದ ಕಾಲೇಜು ಹುಡುಗಿಯರು ಅಣ್ಣಾವ್ರನ್ನು ಶರ್ಟ್​ಲೆಸ್ ಆಗಿ ನೋಡಲು ಇಚ್ಛಿಸಿದ್ದರು. ಇದಕ್ಕೆ ಅವರು ಕೊಟ್ಟ ಕಾರಣ ಮಾತ್ರ ತುಂಬಾನೇ ವಿಚಿತ್ರವಾಗಿತ್ತು.

ರಾಜ್​ಕುಮಾರ್​ನ ಶರ್ಟ್​ಲೆಸ್​ ಆಗಿ ನೋಡಬೇಕು ಎಂದು ಹಠ ಹಿಡಿದಿದ್ದ ಕಾಲೇಜು ಹುಡುಗಿಯರು
ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Apr 24, 2024 | 7:00 AM

Share

ವರನಟ ಡಾ. ರಾಜ್​ಕುಮಾರ್ (Rajkumar) ಅವರು ದೊಡ್ಡ ಮಟ್ಟದಲ್ಲಿ ಗೆಲುವು ಕಂಡ ಕನ್ನಡದ ಸ್ಟಾರ್ ಹೀರೋ. ಅವರನ್ನು ಆರಾಧಿಸುವ ಕೋಟ್ಯಂತರ ಮಂದಿ ಈಗಲೂ ಇದ್ದಾರೆ. ರಾಜ್​ಕುಮಾರ್ ಇಂದು ನಮ್ಮೊಂದಿಗೆ ಇರದೇ ಇರಬಹುದು, ಆದರೆ ಅವರು ಹಾಕಿಕೊಟ್ಟ ಆದರ್ಶ, ಸಿನಿಮಾ, ನೆನಪು ಸದಾ ಜೀವಂತ. ಅವರಿಗೆ ಇಂದು (ಏಪ್ರಿಲ್ 24) ಜನ್ಮದಿನ. ಅವರ ಹೆಸರಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡಲಾಗುತ್ತಿದೆ. ರಾಜ್​ಕುಮಾರ್ ಸಮಾಧಿಗೆ ಕುಟುಂಬದವರು ಬಂದು ಪೂಜೆ ಸಲ್ಲಿಸೋ ಸಾಧ್ಯತೆ ಇದೆ. ರಾಜ್​ಕುಮಾರ್ ಬಗ್ಗೆ ಪಾರ್ವತಮ್ಮ ಹೇಳಿದ ಒಂದು ಅಪರೂಪದ ವಿಚಾರ ಇಲ್ಲಿದೆ.

ರಾಜ್​ಕುಮಾರ್ ಅವರು ಅನೇಕರಿಗೆ ಮಾದರಿ. ಅವರು ಫಿಟ್ನೆಸ್​ನ ಆ ರೀತಿಯಲ್ಲಿ ಕಾಪಾಡಿಕೊಂಡು ಹೋಗಿದ್ದರು. ಒಮ್ಮೆ ರಾಜ್​ಕುಮಾರ್ ಮನೆಗೆ ಬಂದಿದ್ದ ಕಾಲೇಜು ಹುಡುಗಿಯರು ಅಣ್ಣಾವ್ರನ್ನು ಶರ್ಟ್​ಲೆಸ್ ಆಗಿ ನೋಡಲು ಇಚ್ಛಿಸಿದ್ದರು. ಇದಕ್ಕೆ ಅವರು ಕೊಟ್ಟ ಕಾರಣ ಮಾತ್ರ ತುಂಬಾನೇ ವಿಚಿತ್ರವಾದದ್ದು. ಈ ಬಗ್ಗೆ ಪಾರ್ವತಮ್ಮ ಅವರು ಹೇಳಿಕೊಂಡಿದ್ದರು.

‘ಒಮ್ಮೆ ಮನೆಗೆ ಸುಮಾರು 25 ಕಾಲೇಜು ಹುಡುಗಿಯರು ಬಂದರು. ಅವರಿಗೆ ರಾಜ್​ಕುಮಾರ್ ಅವರನ್ನು ನೋಡೋ ಬಯಕೆ. ನನ್ನ ಬಳಿ ಬಂದು ರಾಜ್​ಕುಮಾರ್ ಅವರನ್ನು ನೋಡಬೇಕು ಎಂದರು. ಅವರು ಮಲಗಿದ್ದಾರೆ ಆ ಬಳಿಕ ಬನ್ನಿ ಎಂದು ಹೇಳಿ ಕಳುಹಿಸಿದೆ. ಆದರೆ, ಅವರು ಇದಕ್ಕೆ ಒಪ್ಪಲಿಲ್ಲ. ಕೊನೆಗೆ ನಾನು ಹೋಗಿ ಅವರನ್ನು ಎಬ್ಬಿಸಿದೆ. ಅವರು ಎದ್ದು ಬಂದರು’ ಎಂದರು ಪಾರ್ವತಮ್ಮ.

ಇದನ್ನೂ ಓದಿ: ಡಾ. ರಾಜ್​ಕುಮಾರ್​ ಜನ್ಮದಿನಕ್ಕೆ ‘ಮೈ ನೇಮ್ ಇಸ್ ರಾಜ್’ ಸಂಗೀತ ಕಾರ್ಯಕ್ರಮ

ಹುಡುಗಿಯರು ಇಟ್ಟ ಬೇಡಿಕೆ ಕೇಳಿ ಅವರಿಗೆ ಶಾಕ್ ಆಗಿತ್ತು. ‘ರಾಜ್​ಕುಮಾರ್ ಅವರನ್ನು ಶರ್ಟ್​ಲೆಸ್ ಆಗಿ ನೋಡಬೇಕು ಎಂದು ಕೇಳಿದರು. ನನಗೆ ಶಾಕ್ ಆಯಿತು. ಆಗ ಅವರು ದಯವಿಟ್ಟು ಬೇರೆ ಅರ್ಥದಲ್ಲಿ ತಿಳಿದುಕೊಳ್ಳಬೇಡಿ. ಸಿನಿಮಾದಲ್ಲಿ ಆ ರೀತಿ ಫಿಟ್ ಆಗಿ ಕಾಣುತ್ತಾರಲ್ಲ, ನಿಜಕ್ಕೂ ಹಾಗೆಯೇ ಇದ್ದಾರಾ ಅನ್ನೋದನ್ನು ನೋಡಬೇಕು. ಅದಕ್ಕಾಗಿ ಶರ್ಟ್​ಲೆಸ್ ಆಗಿ ನೋಡಬೇಕು ಎಂದು ಅವರು ನನ್ನ ಬಳಿ ಹೇಳಿದರು. ಕೊನೆಗೆ ರಾಜ್​ಕುಮಾರ್ ಅವರನ್ನು ಒಪ್ಪಿಸಬೇಕಾಯಿತು’ ಎಂದಿದ್ದರು ಪಾರ್ವತಮ್ಮ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:59 am, Wed, 24 April 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್