ರಾಜ್​ಕುಮಾರ್​ ಗೌರವ ಡಾಕ್ಟರೇಟ್​ ಪಡೆದು 46 ವರ್ಷ ಪೂರ್ಣ; ಕೋಟ್ಯಂತರ ಜನರಿಗೆ ವರನಟ ಸ್ಫೂರ್ತಿ

ರಾಜ್​ಕುಮಾರ್​​ ಅವರು ಡಾಕ್ಟರೇಟ್​ ಪಡೆದು ಫೆ.8ಕ್ಕೆ 46 ವರ್ಷ ಪೂರ್ಣವಾಗಿದೆ. 1976ರ ಫೆ.8ರಂದು ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಬಯಲು ರಂಗಮಂದಿರದಲ್ಲಿ ಆ ಕಾರ್ಯಕ್ರಮ ನಡೆದಿತ್ತು.

ರಾಜ್​ಕುಮಾರ್​ ಗೌರವ ಡಾಕ್ಟರೇಟ್​ ಪಡೆದು 46 ವರ್ಷ ಪೂರ್ಣ; ಕೋಟ್ಯಂತರ ಜನರಿಗೆ ವರನಟ ಸ್ಫೂರ್ತಿ
ರಾಜ್​ಕುಮಾರ್​ ಗೌರವ ಡಾಕ್ಟರೇಟ್​ ಪಡೆದು 46 ವರ್ಷ ಪೂರ್ಣ
Follow us
| Updated By: ಮದನ್​ ಕುಮಾರ್​

Updated on:Feb 09, 2022 | 8:32 AM

ಭಾರತೀಯ ಚಿತ್ರರಂಗದಲ್ಲಿ ಡಾ. ರಾಜ್​ಕುಮಾರ್ (Dr Rajkumar)​ ಅವರಿಗೆ ಸಾಟಿ ಆಗಬಲ್ಲಂತಹ ಮತ್ತೋರ್ವ ನಟ ಇಲ್ಲ. ಅಷ್ಟರಮಟ್ಟಿಗೆ ವಿಶಿಷ್ಠವಾಗಿ ಅವರು ಗುರುತಿಸಿಕೊಂಡಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಪ್ರತಿ ಸಿನಿಮಾದಲ್ಲಿಯೂ ಸಮಾಜಕ್ಕೊಂದು ಉತ್ತಮ ಸಂದೇಶ ನೀಡುತ್ತಿದ್ದ ಅವರು ಎಲ್ಲರ ಪಾಲಿನ ಪ್ರೀತಿಯ ‘ಅಣ್ಣಾವ್ರು’ ಆಗಿದ್ದರು. ಸಿನಿಮಾದಲ್ಲಿ ಅವರ ಮಾಡುತ್ತಿದ್ದ ಪ್ರತಿ ಪಾತ್ರಗಳು ಕೂಡ ಜನರಿಗೆ ಮಾದರಿ ಆಗಿರುತ್ತಿದ್ದವು. ಆ ಕಾರಣದಿಂದಲೇ ಅವರು ಕನ್ನಡಿಗರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದುಕೊಂಡರು. ಸಿನಿಮಾದಲ್ಲಿ ಮಾತ್ರವಲ್ಲದೇ ನಿಜಜೀವನದಲ್ಲೂ ಸರಳ-ಸಜ್ಜನಿಕೆಯ ಹೃದಯವಂತನಾಗಿ ಡಾ. ರಾಜ್​ಕುಮಾರ್​ ಬದುಕಿದರು. ಕಲಾ ಜಗತ್ತಿಗೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಗೌರವ ಡಾಕ್ಟರೇಟ್​ ನೀಡಲಾಯಿತು. ಮೈಸೂರು ವಿಶ್ವ ವಿದ್ಯಾಲಯವು (Mysore University) ಅಣ್ಣಾವ್ರಿಗೆ ಈ ಗೌರವ ನೀಡಿ ಈಗ 46 ವರ್ಷಗಳು ಕಳೆದಿವೆ. 1976ರ ಫೆ.8ರಂದು ಮೇರುನಟನಿಗೆ ಗೌರವ ಡಾಕ್ಟರೇಟ್​ (Honorary Doctorate) ನೀಡಲಾಯಿತು. ಆ ಸಮಯದಲ್ಲಿ ಕ್ಲಿಕ್ಕಿಸಿದ ಅಪರೂಪದ ಫೋಟೋವನ್ನು ರಾಘವೇಂದ್ರ ರಾಜ್​ಕುಮಾರ್​ ಅವರು ಹಂಚಿಕೊಂಡಿದ್ದಾರೆ.

ಪ್ರಾಥಮಿಕ ಶಾಲೆಯ ವಿದ್ಯಾಭ್ಯಾಸವನ್ನೂ ರಾಜ್​ಕುಮಾರ್​ ಪೂರೈಸಿರಲಿಲ್ಲ. ಅಂತಹ ವ್ಯಕ್ತಿ ಸಿನಿಮಾ ಕ್ಷೇತ್ರದಲ್ಲಿ ಮಾಡಿದ ಸಾಧನೆ ಸಾಮಾನ್ಯವಾದದ್ದಲ್ಲ. ಸ್ಪಷ್ಟವಾಗಿ ಕನ್ನಡ ಮಾತನಾಡಿ ಇತರರಿಗೂ ಮಾದರಿ ಆದವರು ಅಣ್ಣಾವ್ರು. ಸಿನಿಮಾದಲ್ಲಿ ಪಟಪಟನೆ ಇಂಗ್ಲಿಷ್​ ಮಾತನಾಡಿ ಎಲ್ಲರಿಗೂ ಅಚ್ಚರಿ ಮೂಡಿಸಿದರು. ಅಂಥ ಅಪ್ರತಿಮ ಕಲಾವಿದನನ್ನು ಪಡೆದ ಕನ್ನಡಿಗರೇ ಧನ್ಯ. ಡಾಕ್ಟರೇಟ್​ ಗೌರವಕ್ಕೆ ಪಾತ್ರರಾಗುವ ಮೂಲಕ ಕೋಟ್ಯಂತರ ಜನರಿಗೆ ಡಾ. ರಾಜ್​ಕುಮಾರ್​ ಸ್ಫೂರ್ತಿಯಾದರು.

ರಾಜ್​ಕುಮಾರ್​​ ಅವರು ಡಾಕ್ಟರೇಟ್​ ಪಡೆದು ಫೆ.8ಕ್ಕೆ 46 ವರ್ಷ ಪೂರ್ಣವಾಗಿದೆ. 1976ರ ಫೆ.8ರಂದು ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಬಯಲು ರಂಗಮಂದಿರದಲ್ಲಿ ಆ ಕಾರ್ಯಕ್ರಮ ನಡೆದಿತ್ತು. ಅದ್ದೂರಿಯಾಗಿ ನಡೆದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿತ್ತು. ರಾಜ್‌ಕುಮಾರ್ ಅವರ ಜೊತೆಗೆ ಇನ್ನೂ ಹಲವರಿಗೆ ಗೌರವ ಡಾಕ್ಟರೇಟ್ ನೀಡಲಾಗಿತ್ತು. ಮುಂಬೈನ ಬಾಬಾ ಅಟಾಮಿಕ್ ಎನರ್ಜಿ ಸೆಂಟರ್ ನಿರ್ದೇಶಕರಾದ ಡಾ. ಎಚ್.ಎನ್. ಸೇತ್ನಾ, ವಿ. ಸೀತಾರಾಮಯ್ಯ, ಎಂ.ಎಚ್. ಗೋಪಾಲ್ ಅವರಿಗೂ ಗೌರವ ಡಾಕ್ಟರೇಟ್ ನೀಡಲಾಗಿತ್ತು. ಆ ಮಹತ್ವದ ಕಾರ್ಯಕ್ರಮಕ್ಕೆ ಹಲವು ಗಣ್ಯರು ಸಾಕ್ಷಿ ಆಗಿದ್ದರು. ಅಂದಿನ ರಾಜ್ಯಪಾಲರಾದ ಡಾ. ಉಮಾಶಂಕರ ದೀಕ್ಷಿತ್, ಮೈಸೂರು ವಿವಿ ಕುಲಪತಿ ಡಾ. ಡಿ.ವಿ. ಅರಸು ಸೇರಿ ಹಲವರು ಭಾಗಿ ಆಗಿದ್ದರು.

ಮೇರು ನಟನ ಸಿನಿಮಾಗಳು ಎಂದರೆ ಪ್ರೇಕ್ಷಕರಿಗೆ ಇಂದಿಗೂ ಅಚ್ಚುಮೆಚ್ಚು. ಅಣ್ಣಾವ್ರ ಸಿನಿಮಾಗಳು ಈಗ ರೀ-ರಿಲೀಸ್​ ಆದರೂ ಹೌಸ್​ಫುಲ್​ ಪ್ರದರ್ಶನ ಕಾಣುತ್ತವೆ. ಕಸ್ತೂರಿ ನಿವಾಸ, ಗಂಧದ ಗುಡಿ, ಸತ್ಯ ಹರಿಶ್ಚಂದ್ರ ಸಿನಿಮಾಗಳು ಮರುಬಿಡುಗಡೆಯಾದಾಗ ಇಂದಿನ ತಲೆಮಾರಿನ ಪ್ರೇಕ್ಷಕರು ಚಿತ್ರಮಂದಿರದಲ್ಲಿ ಮುಗಿಬಿದ್ದು ಸಿನಿಮಾ ನೋಡಿದ್ದರು.

ಇದನ್ನೂ ಓದಿ:

3ನೇ ಕ್ಲಾಸ್​ ಓದಿದ ಡಾ. ರಾಜ್​ಕುಮಾರ್​ ಇಂಗ್ಲಿಷ್​ ಕಲಿತಿದ್ದು ಹೇಗೆ? ಇಲ್ಲಿದೆ ಅದರ ಸೀಕ್ರೆಟ್​

ಮ್ಯೂಸಿಯಂ ಆಗಲಿದೆ ಡಾ. ರಾಜ್​ ಆಡಿ ಬೆಳೆದ ಮನೆ; ಪುನೀತ್​ ಆಸೆ ಈಡೇರಿಸಲು ಕುಟುಂಬದ ನಿರ್ಧಾರ

Published On - 8:05 am, Wed, 9 February 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ