AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್​ ಸಿನಿಮಾ ಟೈಟಲ್​ ಮರುಬಳಕೆ ಮಾಡದಂತೆ ಅಭಿಮಾನಿಗಳ ಆಗ್ರಹ; ಸ್ಪಂದಿಸಿದ ಫಿಲ್ಮ್​ ಚೇಂಬರ್

ರಾಜ್​ಕುಮಾರ್​ ನಟನೆಯ ಬಹುತೇಕ ಚಿತ್ರಗಳು ಹಿಟ್​ ಲಿಸ್ಟ್​ನಲ್ಲಿವೆ. ಈ ಸಿನಿಮಾದ ಟೈಟಲ್​ ಮರುಬಳಕೆಯಾದರೆ ಹೊಸ ಚಿತ್ರಕ್ಕೆ ಇದು ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಅನುಮಾನವಿಲ್ಲ.

ರಾಜ್​ಕುಮಾರ್​ ಸಿನಿಮಾ ಟೈಟಲ್​ ಮರುಬಳಕೆ ಮಾಡದಂತೆ ಅಭಿಮಾನಿಗಳ ಆಗ್ರಹ; ಸ್ಪಂದಿಸಿದ ಫಿಲ್ಮ್​ ಚೇಂಬರ್
ಡಾ. ರಾಜ್​ಕುಮಾರ್​
TV9 Web
| Edited By: |

Updated on: Aug 30, 2021 | 2:43 PM

Share

ಡಾ. ರಾಜ್​ಕುಮಾರ್​ ಸಿನಿಮಾಗಳಿಗೆ ಈಗಲೂ ಬೇಡಿಕೆ ಇದೆ. ಅವರ ಸಿನಿಮಾ ಸಾಕಷ್ಟು ಜನರಿಗೆ ಸ್ಫೂರ್ತಿ. ಈ ಕಾರಣಕ್ಕೆ ಅನೇಕ ನಿರ್ಮಾಪಕರು ರಾಜ್​ಕುಮಾರ್​ ಸಿನಿಮಾ ಹೆಸರನ್ನು ಮರುಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಇನ್ನುಮುಂದೆ ಇದು ಸಾಧ್ಯವಿಲ್ಲ. ಏಕೆಂದರೆ, ಅಭಿಮಾನಿಗಳು ಈ ಬಗ್ಗೆ ನೀಡಿದ ಮನವಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಪಂದಿಸಿದೆ. 

ರಾಜ್​ಕುಮಾರ್​ ನಟನೆಯ ಬಹುತೇಕ ಚಿತ್ರಗಳು ಹಿಟ್​ ಲಿಸ್ಟ್​ನಲ್ಲಿವೆ. ಈ ಸಿನಿಮಾದ ಟೈಟಲ್​ ಮರುಬಳಕೆಯಾದರೆ ಹೊಸ ಚಿತ್ರಕ್ಕೆ ಇದು ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಅನುಮಾನವಿಲ್ಲ. ಆದರೆ, ರಾಜ್​​ಕುಮಾರ್ ಅವರ ಚಿತ್ರದ ಟೈಟಲ್‌ಗಳಿಗೆ ತಕ್ಕಂತೆ ಸಿನಿಮಾಗಳು ಸಿದ್ಧವಾಗುತ್ತಿಲ್ಲ ಎಂಬುದು ರಾಜ್ ಕುಮಾರ್ ಅಭಿಮಾನಿ ಸಂಘಗಳ ಅಭಿಪ್ರಾಯ. ರಾಜ್​ಕುಮಾರ್​ ಸಿನಿಮಾ ಬಗ್ಗೆ ಯೂಟ್ಯೂಬ್​ ಮೊದಲಾದ ಕಡೆ ಹುಡುಕಾಟ ನಡೆಸಿದರೆ ಮರುಬಳಕೆಯಾದ ಸಿನಿಮಾಗಳ ಟೈಟಲ್​​ ರಾರಾಜಿಸುತ್ತದೆ. ಇದಕ್ಕೆ ಕಡಿವಾಣ ಹಾಕಬೇಕು ಅನ್ನೋ ಉದ್ದೇಶವೂ ಇದರಲ್ಲಿ ಸೇರಿದೆ.

ಈ ಕಾರಣಕ್ಕೆ ರಾಜ್​ಕುಮಾರ್ ಅವರ ಹಳೆಯ ಸಿನಿಮಾದ ಟೈಟಲ್​​ಗಳ ಮರು ಬಳಕೆಗೆ ಬ್ರೇಕ್ ಬೀಳಬೇಕು ಎಂದು ಅಣ್ಣಾವ್ರ ಅಭಿಮಾನಿ ಸಂಘದವರು ಒತ್ತಾಯಿಸಿದ್ದಾರೆ. ಇಂದು (ಆಗಸ್ಟ್ 30) ಕರ್ನಾಕಟ ಚಲನ‌ಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿದ್ದಾರೆ. ಈ ಮನವಿಗೆ ವಾಣಿಜ್ಯ ಮಂಡಳಿ ಸ್ಪಂದಿಸಿದೆ. ರಾಜ್​ಕುಮಾರ್​ ಟೈಟಲ್​ ಮರುಬಳಕೆಗೆ ಅವಕಾಶ ನೀಡುವುದಿಲ್ಲ ಎನ್ನುವ ಭರವಸೆ ನೀಡಿದೆ.

ಚಲನಚಿತ್ರ ವಾಣಿಜ್ಯ ಮಂಡಳಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇದ್ದರೆ ಉಗ್ರ ಹೋರಾಟ ಮಾಡುವುದಾಗಿ ರಾಜ್​ಕುಮಾರ್​ ಅಭಿಮಾನಿ ಸಂಘದವರು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಶಿವಣ್ಣ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿರುವ ‘ನೀ ಸಿಗೋವರೆಗೂ’ ಚಿತ್ರಕ್ಕೆ ಕಿಚ್ಚ ಸುದೀಪ್ ಶುಭಕೋರಿದ್ದು ಹೀಗೆ!

ಕ್ಯಾಬ್​ ಡ್ರೈವರ್​ಗಳ ಕಥೆ ಹೇಳುವ ‘ಯೆಲ್ಲೋ ಬೋರ್ಡ್​’; ಕಿಚ್ಚ ಶುಭಕೋರಿದ ಈ ಸಿನಿಮಾದಲ್ಲಿ ಏನಿದೆ ವಿಶೇಷ?

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!