AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್​ ಸಿನಿಮಾ ಟೈಟಲ್​ ಮರುಬಳಕೆ ಮಾಡದಂತೆ ಅಭಿಮಾನಿಗಳ ಆಗ್ರಹ; ಸ್ಪಂದಿಸಿದ ಫಿಲ್ಮ್​ ಚೇಂಬರ್

ರಾಜ್​ಕುಮಾರ್​ ನಟನೆಯ ಬಹುತೇಕ ಚಿತ್ರಗಳು ಹಿಟ್​ ಲಿಸ್ಟ್​ನಲ್ಲಿವೆ. ಈ ಸಿನಿಮಾದ ಟೈಟಲ್​ ಮರುಬಳಕೆಯಾದರೆ ಹೊಸ ಚಿತ್ರಕ್ಕೆ ಇದು ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಅನುಮಾನವಿಲ್ಲ.

ರಾಜ್​ಕುಮಾರ್​ ಸಿನಿಮಾ ಟೈಟಲ್​ ಮರುಬಳಕೆ ಮಾಡದಂತೆ ಅಭಿಮಾನಿಗಳ ಆಗ್ರಹ; ಸ್ಪಂದಿಸಿದ ಫಿಲ್ಮ್​ ಚೇಂಬರ್
ಡಾ. ರಾಜ್​ಕುಮಾರ್​
TV9 Web
| Edited By: |

Updated on: Aug 30, 2021 | 2:43 PM

Share

ಡಾ. ರಾಜ್​ಕುಮಾರ್​ ಸಿನಿಮಾಗಳಿಗೆ ಈಗಲೂ ಬೇಡಿಕೆ ಇದೆ. ಅವರ ಸಿನಿಮಾ ಸಾಕಷ್ಟು ಜನರಿಗೆ ಸ್ಫೂರ್ತಿ. ಈ ಕಾರಣಕ್ಕೆ ಅನೇಕ ನಿರ್ಮಾಪಕರು ರಾಜ್​ಕುಮಾರ್​ ಸಿನಿಮಾ ಹೆಸರನ್ನು ಮರುಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಇನ್ನುಮುಂದೆ ಇದು ಸಾಧ್ಯವಿಲ್ಲ. ಏಕೆಂದರೆ, ಅಭಿಮಾನಿಗಳು ಈ ಬಗ್ಗೆ ನೀಡಿದ ಮನವಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಪಂದಿಸಿದೆ. 

ರಾಜ್​ಕುಮಾರ್​ ನಟನೆಯ ಬಹುತೇಕ ಚಿತ್ರಗಳು ಹಿಟ್​ ಲಿಸ್ಟ್​ನಲ್ಲಿವೆ. ಈ ಸಿನಿಮಾದ ಟೈಟಲ್​ ಮರುಬಳಕೆಯಾದರೆ ಹೊಸ ಚಿತ್ರಕ್ಕೆ ಇದು ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಅನುಮಾನವಿಲ್ಲ. ಆದರೆ, ರಾಜ್​​ಕುಮಾರ್ ಅವರ ಚಿತ್ರದ ಟೈಟಲ್‌ಗಳಿಗೆ ತಕ್ಕಂತೆ ಸಿನಿಮಾಗಳು ಸಿದ್ಧವಾಗುತ್ತಿಲ್ಲ ಎಂಬುದು ರಾಜ್ ಕುಮಾರ್ ಅಭಿಮಾನಿ ಸಂಘಗಳ ಅಭಿಪ್ರಾಯ. ರಾಜ್​ಕುಮಾರ್​ ಸಿನಿಮಾ ಬಗ್ಗೆ ಯೂಟ್ಯೂಬ್​ ಮೊದಲಾದ ಕಡೆ ಹುಡುಕಾಟ ನಡೆಸಿದರೆ ಮರುಬಳಕೆಯಾದ ಸಿನಿಮಾಗಳ ಟೈಟಲ್​​ ರಾರಾಜಿಸುತ್ತದೆ. ಇದಕ್ಕೆ ಕಡಿವಾಣ ಹಾಕಬೇಕು ಅನ್ನೋ ಉದ್ದೇಶವೂ ಇದರಲ್ಲಿ ಸೇರಿದೆ.

ಈ ಕಾರಣಕ್ಕೆ ರಾಜ್​ಕುಮಾರ್ ಅವರ ಹಳೆಯ ಸಿನಿಮಾದ ಟೈಟಲ್​​ಗಳ ಮರು ಬಳಕೆಗೆ ಬ್ರೇಕ್ ಬೀಳಬೇಕು ಎಂದು ಅಣ್ಣಾವ್ರ ಅಭಿಮಾನಿ ಸಂಘದವರು ಒತ್ತಾಯಿಸಿದ್ದಾರೆ. ಇಂದು (ಆಗಸ್ಟ್ 30) ಕರ್ನಾಕಟ ಚಲನ‌ಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿದ್ದಾರೆ. ಈ ಮನವಿಗೆ ವಾಣಿಜ್ಯ ಮಂಡಳಿ ಸ್ಪಂದಿಸಿದೆ. ರಾಜ್​ಕುಮಾರ್​ ಟೈಟಲ್​ ಮರುಬಳಕೆಗೆ ಅವಕಾಶ ನೀಡುವುದಿಲ್ಲ ಎನ್ನುವ ಭರವಸೆ ನೀಡಿದೆ.

ಚಲನಚಿತ್ರ ವಾಣಿಜ್ಯ ಮಂಡಳಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇದ್ದರೆ ಉಗ್ರ ಹೋರಾಟ ಮಾಡುವುದಾಗಿ ರಾಜ್​ಕುಮಾರ್​ ಅಭಿಮಾನಿ ಸಂಘದವರು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಶಿವಣ್ಣ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿರುವ ‘ನೀ ಸಿಗೋವರೆಗೂ’ ಚಿತ್ರಕ್ಕೆ ಕಿಚ್ಚ ಸುದೀಪ್ ಶುಭಕೋರಿದ್ದು ಹೀಗೆ!

ಕ್ಯಾಬ್​ ಡ್ರೈವರ್​ಗಳ ಕಥೆ ಹೇಳುವ ‘ಯೆಲ್ಲೋ ಬೋರ್ಡ್​’; ಕಿಚ್ಚ ಶುಭಕೋರಿದ ಈ ಸಿನಿಮಾದಲ್ಲಿ ಏನಿದೆ ವಿಶೇಷ?

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ