Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್​ ಸಿನಿಮಾ ಟೈಟಲ್​ ಮರುಬಳಕೆ ಮಾಡದಂತೆ ಅಭಿಮಾನಿಗಳ ಆಗ್ರಹ; ಸ್ಪಂದಿಸಿದ ಫಿಲ್ಮ್​ ಚೇಂಬರ್

ರಾಜ್​ಕುಮಾರ್​ ನಟನೆಯ ಬಹುತೇಕ ಚಿತ್ರಗಳು ಹಿಟ್​ ಲಿಸ್ಟ್​ನಲ್ಲಿವೆ. ಈ ಸಿನಿಮಾದ ಟೈಟಲ್​ ಮರುಬಳಕೆಯಾದರೆ ಹೊಸ ಚಿತ್ರಕ್ಕೆ ಇದು ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಅನುಮಾನವಿಲ್ಲ.

ರಾಜ್​ಕುಮಾರ್​ ಸಿನಿಮಾ ಟೈಟಲ್​ ಮರುಬಳಕೆ ಮಾಡದಂತೆ ಅಭಿಮಾನಿಗಳ ಆಗ್ರಹ; ಸ್ಪಂದಿಸಿದ ಫಿಲ್ಮ್​ ಚೇಂಬರ್
ಡಾ. ರಾಜ್​ಕುಮಾರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 30, 2021 | 2:43 PM

ಡಾ. ರಾಜ್​ಕುಮಾರ್​ ಸಿನಿಮಾಗಳಿಗೆ ಈಗಲೂ ಬೇಡಿಕೆ ಇದೆ. ಅವರ ಸಿನಿಮಾ ಸಾಕಷ್ಟು ಜನರಿಗೆ ಸ್ಫೂರ್ತಿ. ಈ ಕಾರಣಕ್ಕೆ ಅನೇಕ ನಿರ್ಮಾಪಕರು ರಾಜ್​ಕುಮಾರ್​ ಸಿನಿಮಾ ಹೆಸರನ್ನು ಮರುಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಇನ್ನುಮುಂದೆ ಇದು ಸಾಧ್ಯವಿಲ್ಲ. ಏಕೆಂದರೆ, ಅಭಿಮಾನಿಗಳು ಈ ಬಗ್ಗೆ ನೀಡಿದ ಮನವಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಪಂದಿಸಿದೆ. 

ರಾಜ್​ಕುಮಾರ್​ ನಟನೆಯ ಬಹುತೇಕ ಚಿತ್ರಗಳು ಹಿಟ್​ ಲಿಸ್ಟ್​ನಲ್ಲಿವೆ. ಈ ಸಿನಿಮಾದ ಟೈಟಲ್​ ಮರುಬಳಕೆಯಾದರೆ ಹೊಸ ಚಿತ್ರಕ್ಕೆ ಇದು ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಅನುಮಾನವಿಲ್ಲ. ಆದರೆ, ರಾಜ್​​ಕುಮಾರ್ ಅವರ ಚಿತ್ರದ ಟೈಟಲ್‌ಗಳಿಗೆ ತಕ್ಕಂತೆ ಸಿನಿಮಾಗಳು ಸಿದ್ಧವಾಗುತ್ತಿಲ್ಲ ಎಂಬುದು ರಾಜ್ ಕುಮಾರ್ ಅಭಿಮಾನಿ ಸಂಘಗಳ ಅಭಿಪ್ರಾಯ. ರಾಜ್​ಕುಮಾರ್​ ಸಿನಿಮಾ ಬಗ್ಗೆ ಯೂಟ್ಯೂಬ್​ ಮೊದಲಾದ ಕಡೆ ಹುಡುಕಾಟ ನಡೆಸಿದರೆ ಮರುಬಳಕೆಯಾದ ಸಿನಿಮಾಗಳ ಟೈಟಲ್​​ ರಾರಾಜಿಸುತ್ತದೆ. ಇದಕ್ಕೆ ಕಡಿವಾಣ ಹಾಕಬೇಕು ಅನ್ನೋ ಉದ್ದೇಶವೂ ಇದರಲ್ಲಿ ಸೇರಿದೆ.

ಈ ಕಾರಣಕ್ಕೆ ರಾಜ್​ಕುಮಾರ್ ಅವರ ಹಳೆಯ ಸಿನಿಮಾದ ಟೈಟಲ್​​ಗಳ ಮರು ಬಳಕೆಗೆ ಬ್ರೇಕ್ ಬೀಳಬೇಕು ಎಂದು ಅಣ್ಣಾವ್ರ ಅಭಿಮಾನಿ ಸಂಘದವರು ಒತ್ತಾಯಿಸಿದ್ದಾರೆ. ಇಂದು (ಆಗಸ್ಟ್ 30) ಕರ್ನಾಕಟ ಚಲನ‌ಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿದ್ದಾರೆ. ಈ ಮನವಿಗೆ ವಾಣಿಜ್ಯ ಮಂಡಳಿ ಸ್ಪಂದಿಸಿದೆ. ರಾಜ್​ಕುಮಾರ್​ ಟೈಟಲ್​ ಮರುಬಳಕೆಗೆ ಅವಕಾಶ ನೀಡುವುದಿಲ್ಲ ಎನ್ನುವ ಭರವಸೆ ನೀಡಿದೆ.

ಚಲನಚಿತ್ರ ವಾಣಿಜ್ಯ ಮಂಡಳಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇದ್ದರೆ ಉಗ್ರ ಹೋರಾಟ ಮಾಡುವುದಾಗಿ ರಾಜ್​ಕುಮಾರ್​ ಅಭಿಮಾನಿ ಸಂಘದವರು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಶಿವಣ್ಣ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿರುವ ‘ನೀ ಸಿಗೋವರೆಗೂ’ ಚಿತ್ರಕ್ಕೆ ಕಿಚ್ಚ ಸುದೀಪ್ ಶುಭಕೋರಿದ್ದು ಹೀಗೆ!

ಕ್ಯಾಬ್​ ಡ್ರೈವರ್​ಗಳ ಕಥೆ ಹೇಳುವ ‘ಯೆಲ್ಲೋ ಬೋರ್ಡ್​’; ಕಿಚ್ಚ ಶುಭಕೋರಿದ ಈ ಸಿನಿಮಾದಲ್ಲಿ ಏನಿದೆ ವಿಶೇಷ?

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ