AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್​ ಸಿನಿಮಾ ಟೈಟಲ್​ ಮರುಬಳಕೆ ಮಾಡದಂತೆ ಅಭಿಮಾನಿಗಳ ಆಗ್ರಹ; ಸ್ಪಂದಿಸಿದ ಫಿಲ್ಮ್​ ಚೇಂಬರ್

ರಾಜ್​ಕುಮಾರ್​ ನಟನೆಯ ಬಹುತೇಕ ಚಿತ್ರಗಳು ಹಿಟ್​ ಲಿಸ್ಟ್​ನಲ್ಲಿವೆ. ಈ ಸಿನಿಮಾದ ಟೈಟಲ್​ ಮರುಬಳಕೆಯಾದರೆ ಹೊಸ ಚಿತ್ರಕ್ಕೆ ಇದು ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಅನುಮಾನವಿಲ್ಲ.

ರಾಜ್​ಕುಮಾರ್​ ಸಿನಿಮಾ ಟೈಟಲ್​ ಮರುಬಳಕೆ ಮಾಡದಂತೆ ಅಭಿಮಾನಿಗಳ ಆಗ್ರಹ; ಸ್ಪಂದಿಸಿದ ಫಿಲ್ಮ್​ ಚೇಂಬರ್
ಡಾ. ರಾಜ್​ಕುಮಾರ್​
TV9 Web
| Edited By: |

Updated on: Aug 30, 2021 | 2:43 PM

Share

ಡಾ. ರಾಜ್​ಕುಮಾರ್​ ಸಿನಿಮಾಗಳಿಗೆ ಈಗಲೂ ಬೇಡಿಕೆ ಇದೆ. ಅವರ ಸಿನಿಮಾ ಸಾಕಷ್ಟು ಜನರಿಗೆ ಸ್ಫೂರ್ತಿ. ಈ ಕಾರಣಕ್ಕೆ ಅನೇಕ ನಿರ್ಮಾಪಕರು ರಾಜ್​ಕುಮಾರ್​ ಸಿನಿಮಾ ಹೆಸರನ್ನು ಮರುಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಇನ್ನುಮುಂದೆ ಇದು ಸಾಧ್ಯವಿಲ್ಲ. ಏಕೆಂದರೆ, ಅಭಿಮಾನಿಗಳು ಈ ಬಗ್ಗೆ ನೀಡಿದ ಮನವಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಪಂದಿಸಿದೆ. 

ರಾಜ್​ಕುಮಾರ್​ ನಟನೆಯ ಬಹುತೇಕ ಚಿತ್ರಗಳು ಹಿಟ್​ ಲಿಸ್ಟ್​ನಲ್ಲಿವೆ. ಈ ಸಿನಿಮಾದ ಟೈಟಲ್​ ಮರುಬಳಕೆಯಾದರೆ ಹೊಸ ಚಿತ್ರಕ್ಕೆ ಇದು ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಅನುಮಾನವಿಲ್ಲ. ಆದರೆ, ರಾಜ್​​ಕುಮಾರ್ ಅವರ ಚಿತ್ರದ ಟೈಟಲ್‌ಗಳಿಗೆ ತಕ್ಕಂತೆ ಸಿನಿಮಾಗಳು ಸಿದ್ಧವಾಗುತ್ತಿಲ್ಲ ಎಂಬುದು ರಾಜ್ ಕುಮಾರ್ ಅಭಿಮಾನಿ ಸಂಘಗಳ ಅಭಿಪ್ರಾಯ. ರಾಜ್​ಕುಮಾರ್​ ಸಿನಿಮಾ ಬಗ್ಗೆ ಯೂಟ್ಯೂಬ್​ ಮೊದಲಾದ ಕಡೆ ಹುಡುಕಾಟ ನಡೆಸಿದರೆ ಮರುಬಳಕೆಯಾದ ಸಿನಿಮಾಗಳ ಟೈಟಲ್​​ ರಾರಾಜಿಸುತ್ತದೆ. ಇದಕ್ಕೆ ಕಡಿವಾಣ ಹಾಕಬೇಕು ಅನ್ನೋ ಉದ್ದೇಶವೂ ಇದರಲ್ಲಿ ಸೇರಿದೆ.

ಈ ಕಾರಣಕ್ಕೆ ರಾಜ್​ಕುಮಾರ್ ಅವರ ಹಳೆಯ ಸಿನಿಮಾದ ಟೈಟಲ್​​ಗಳ ಮರು ಬಳಕೆಗೆ ಬ್ರೇಕ್ ಬೀಳಬೇಕು ಎಂದು ಅಣ್ಣಾವ್ರ ಅಭಿಮಾನಿ ಸಂಘದವರು ಒತ್ತಾಯಿಸಿದ್ದಾರೆ. ಇಂದು (ಆಗಸ್ಟ್ 30) ಕರ್ನಾಕಟ ಚಲನ‌ಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿದ್ದಾರೆ. ಈ ಮನವಿಗೆ ವಾಣಿಜ್ಯ ಮಂಡಳಿ ಸ್ಪಂದಿಸಿದೆ. ರಾಜ್​ಕುಮಾರ್​ ಟೈಟಲ್​ ಮರುಬಳಕೆಗೆ ಅವಕಾಶ ನೀಡುವುದಿಲ್ಲ ಎನ್ನುವ ಭರವಸೆ ನೀಡಿದೆ.

ಚಲನಚಿತ್ರ ವಾಣಿಜ್ಯ ಮಂಡಳಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇದ್ದರೆ ಉಗ್ರ ಹೋರಾಟ ಮಾಡುವುದಾಗಿ ರಾಜ್​ಕುಮಾರ್​ ಅಭಿಮಾನಿ ಸಂಘದವರು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಶಿವಣ್ಣ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿರುವ ‘ನೀ ಸಿಗೋವರೆಗೂ’ ಚಿತ್ರಕ್ಕೆ ಕಿಚ್ಚ ಸುದೀಪ್ ಶುಭಕೋರಿದ್ದು ಹೀಗೆ!

ಕ್ಯಾಬ್​ ಡ್ರೈವರ್​ಗಳ ಕಥೆ ಹೇಳುವ ‘ಯೆಲ್ಲೋ ಬೋರ್ಡ್​’; ಕಿಚ್ಚ ಶುಭಕೋರಿದ ಈ ಸಿನಿಮಾದಲ್ಲಿ ಏನಿದೆ ವಿಶೇಷ?

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ