AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾವಿದ ರಚಿಸಿದ ಡಾ. ರಾಜ್​ ಅವರ ಈ ಅದ್ಭುತ ಚಿತ್ರದಲ್ಲಿದೆ ಬೆರಗಾಗುವಂತಹ ವಿಶೇಷ; ಗುರುತಿಸಬಲ್ಲಿರಾ?

ಕಲಾವಿದರೊಬ್ಬರ ಕೈಚಳಕದಲ್ಲಿ ಅರಳಿರುವ ಈ ಕಲಾಕೃತಿ ಕಂಡರೆ ಎಲ್ಲರಿಗೂ ಒಮ್ಮೆ ಅಚ್ಚರಿ ಆಗುತ್ತದೆ. ಮೇಲ್ನೋಟಕ್ಕೆ ಸಿಂಪಲ್​ ಆಗಿದೆ ಎನಿಸಿದರೂ, ಕಣ್ಣಿಟ್ಟು ಗಮನಿಸಿದರೆ ಅದರಲ್ಲೊಂದು ಅದ್ಭುತವೇ ಅಡಗಿದೆ.

ಕಲಾವಿದ ರಚಿಸಿದ ಡಾ. ರಾಜ್​ ಅವರ ಈ ಅದ್ಭುತ ಚಿತ್ರದಲ್ಲಿದೆ ಬೆರಗಾಗುವಂತಹ ವಿಶೇಷ; ಗುರುತಿಸಬಲ್ಲಿರಾ?
ಡಾ. ರಾಜ್​ಕುಮಾರ್​
ಮದನ್​ ಕುಮಾರ್​
|

Updated on: Jun 11, 2021 | 8:54 AM

Share

ಕನ್ನಡ ಸಿನಿಪ್ರೇಮಿಗಳು ಎಂದೂ ಮರೆಯದ ಹೆಸರು ಡಾ. ರಾಜ್​ಕುಮಾರ್​. ಭಾರತೀಯ ಚಿತ್ರರಂಗದಲ್ಲಿ ಮೇರು ನಟನಾಗಿ ಮಿಂಚಿದ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಅಣ್ಣಾವ್ರಿಗೆ ಸರಿಸಾಟಿ ಆಗುವಂತಹ ಮತ್ತೊಬ್ಬ ನಟ ಜನಿಸಿಲ್ಲ ಎಂದರೆ ಅತಿಶಯೋಕ್ತಿ ಏನಿಲ್ಲ. ರಾಜ್​ಕುಮಾರ್​ ಅವರು ಇಹಲೋಕ ತ್ಯಜಿಸಿ ಹಲವು ವರ್ಷಗಳೇ ಕಳೆದಿದ್ದರೂ ಕೂಡ ಇಂದಿಗೂ ಅವರ ಮೇಲಿನ ಅಭಿಮಾನ ಕಡಿಮೆ ಆಗಿಲ್ಲ. ಜನರು ಇಂದಿಗೂ ಹಲವು ರೀತಿಯಲ್ಲಿ ಅವರ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ.

ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ಡಾ. ರಾಜ್​ಕುಮಾರ್​ ಅವರ ಒಂದು ಚಿತ್ರ ವೈರಲ್​ ಆಗುತ್ತಿದೆ. ಕಲಾವಿದರೊಬ್ಬರ ಕೈಚಳಕದಲ್ಲಿ ಅರಳಿರುವ ಈ ಕಲಾಕೃತಿ ಕಂಡರೆ ಎಲ್ಲರಿಗೂ ಒಮ್ಮೆ ಅಚ್ಚರಿ ಆಗುತ್ತಿದೆ. ಮೇಲ್ನೋಟಕ್ಕೆ ನೋಡಿದರೆ ಇದೇನು ಇಷ್ಟೊಂದು ಸಿಂಪಲ್​ ಆಗಿದೆ ಎನಿಸುತ್ತದೆ. ಪೆನ್ಸಿಲ್​ನಿಂದ ರಚಿಸಿದ ಸರಳ ಕಲಾಕೃತಿ ರೀತಿ ಕಾಣಿಸುತ್ತದೆ. ಆದರೆ ಕಣ್ಣಿಟ್ಟು ಗಮನಿಸಿದರೆ ಅದರಲ್ಲೊಂದು ಅದ್ಭುತವೇ ಅಡಗಿದೆ.

ಹೌದು, ಈ ವಿಶೇಷ ಕಲಾಕೃತಿ ರಚನೆ ಆಗಿರುವುದು ರಾಜ್​ಕುಮಾರ್​ ಅವರ ಹೆಸರಿನ ಮೂಲಕ. ಅಂದರೆ ರಾಜ್​ಕುಮಾರ್​ ಹೆಸರನ್ನು ಬಳಸಿಕೊಂಡೇ ಇದನ್ನು ರಚಿಸಲಾಗಿದೆ. ಆ ಹೆಸರಿನ ಹೊರತಾಗಿ ಬೇರೆ ಯಾವುದೇ ಚುಕ್ಕಿ ಅಥವಾ ಗೆರೆಗಳನ್ನು ಬಳಸಿಲ್ಲ. ಅಂದಹಾಗೆ, ಈ ಚಿತ್ರ ರಚಿಸಿರುವುದು ಮಂಡ್ಯದ ಕಲಾವಿದ ನರಸಿಂಹಾಚಾರ್​. ಅವರ ಈ ಪ್ರತಿಭೆ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಡಾ. ರಾಜ್​ ಕುಟುಂಬದ ಅಭಿಮಾನಿಗಳ ಪೇಜ್​ಗಳಲ್ಲಿ ಈ ಚಿತ್ರ ವೈರಲ್​ ಆಗಿದೆ. ‘ರಾಜ್​ಕುಮಾರ್​ ಎಂಬ ಹೆಸರಿನಲ್ಲಿಯೇ ಅಣ್ಣಾವ್ರ ಭಾವ ಚಿತ್ರ ಬಿಡಿಸಿದ ಈ ಕಲಾವಿದನಿಗೆ ನಮ್ಮ ನಮನಗಳು’ ಎಂದು ಫ್ಯಾನ್ಸ್​ ಧನ್ಯವಾದ ತಿಳಿಸಿದ್ದಾರೆ. ಹಲವಾರು ಅಭಿಮಾನಿಗಳು ಕಮೆಂಟ್​ಗಳ ಮೂಲಕ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡವರು ಡಾ. ರಾಜ್​. ಇತರೆ ಕ್ಷೇತ್ರಗಳಿಂದ ಎಷ್ಟೇ ಅವಕಾಶ ಬಂದರೂ ಅವರು ಸಿನಿಮಾ ಹೊರತಾಗಿ ಬೇರೆ ಏನನ್ನೂ ಸ್ವೀಕರಿಸಲಿಲ್ಲ. ತೆರೆಮೇಲೆ ಮಾತ್ರವಲ್ಲದೆ ನಿಜಜೀವನದಲ್ಲಿಯೂ ಅವರು ಆದರ್ಶ ವ್ಯಕ್ತಿಯಾಗಿ ಬದುಕಿದರು. ಆ ಕಾರಣದಿಂದಲೇ ಅವರನ್ನು ಅಭಿಮಾನಿಗಳು ಆರಾಧ್ಯ ದೈವದಂತೆ ಕಾಣುತ್ತಾರೆ. ಎಷ್ಟೇ ವರ್ಷಗಳು ಉರುಳಿದರು ಅಣ್ಣಾವ್ರ ಮೇಲಿನ ಅಭಿಮಾನ ಕಡಿಮೆ ಆಗುವುದಿಲ್ಲ.

ಇದನ್ನೂ ಓದಿ:

ರಾಜ್​ಕುಮಾರ್​ ಕಿಡ್ನ್ಯಾಪ್​​ ಆದಾಗ ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿಯ ಎಕ್ಸ್​ಕ್ಲ್ಯೂಸಿವ್ ಸಂದರ್ಶನ

ಡಾ. ರಾಜ್​ಕುಮಾರ್​ ಸಹಾಯವನ್ನು ನಾನು ಯಾವತ್ತೂ ಮರೆಯುವುದಿಲ್ಲ: ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್

‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ